advertise here

Search

KANNADA VETERAN ACTRESS DR.LEELAVATHI NOMORE…ಕನ್ನಡದ ಹಿರಿಯ ಪೋಷಕ ಕಲಾವಿದೆ ಡಾ.ಲೀಲಾವತಿ ಇನ್ನಿಲ್ಲ..


ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ  ಇನ್ನಿಲ್ಲ.ನೆಲಮಂಗಲದ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.85 ವರ್ಷ ವಯಸ್ಸಿನ ಲೀಲಾವತಿ ಅವರು ಕೆಲ ತಿಂಗಳಿಂದ ತೀವ್ತ ಅನಾರೋಗ್ಯಕ್ಕೆ ಈಡಾಗಿದ್ದರು.ಅವರ  ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

1938 ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದ್ದ ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು.ಕನ್ನಡ ತಮಿಳು ತೆಲುಗು ಮಲಯಾಳಂ ಸೇರಿದಂತೆ 600ಕ್ಕೂ ಹೆಚ್ಚುಚಲನಚಿತ್ರಗಳಲ್ಲಿ ಅವರು ನಟಿಸಿದ್ದರು.

ನೆಲಮಂಗಲದ ಸೋಲದೇವನಹಳ್ಳಿ ಮನೆಯಲ್ಲಿ ವ್ಯವಸ್ಥಿತವಾದ ಎಲ್ಲಾ ವ್ಯವಸ್ಥೆಗಳಾಗಿದ್ದ ಹೊರತಾಗ್ಯು ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು.ವೈದ್ಯರು ಸಹ ರಿಸ್ಕ್‌ ತೆಗೆದುಕೊಳ್ಳುವುದು ಬೇಡ ಎಂಬ ಕಾರಣಕ್ಕೆ ತತ್‌ ಕ್ಷಣಕ್ಕೆ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ರು.ಅವರ ಸಲಹೆ ಮೇರೆಗೆ ಅವರನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಗ ಹಾಗೂ ನಟ ವಿನೋದ್‌ ರಾಜ್‌ ಅವರು ಅಮ್ಮನನ್ನು ಅಸ್ಪತ್ರೆಗೆ ದಾಖಲಿಸಿದ್ದು ವೈದ್ಯರು ಚಿಕಿತ್ಸೆ ನೀಡುವಲ್ಲಿ ನಿರತವಾಗಿದ್ದರು.ತೀವ್ರ ನಿಗಾಘಟಕದಲ್ಲಿದ್ದ ಅಮ್ಮನ ಆರೋಗ್ಯದ ಬಗ್ಗೆ ವೈದ್ಯರು ಇನ್ನು ಯಾವುದೇ ಸ್ಪಷ್ಟ ಹೇಳಿಕೆ ನೀಡಿರಲಿಲ್ಲ.ಆದ್ರೆ ಕೆಲ ನಿಮಿಷಗಳ ಹಿಂದೆ ವೈದ್ಯರು ಲೀಲಾವತಿ ಮೃತಪಟ್ಟಿರುವುದನ್ನು ದೃಢೀಕರಿಸಿದ್ರು.

ALSO READ :  ಚೆನ್ನಪಟ್ಟಣ ಉಪಸಮರ-2024: ಸಿ.ಪಿ ಯೋಗೇಶ್ವರ್ ಎದುರು ಕಣಕ್ಕಿಳಿಯಲು ನಿಖಿಲ್ ಹಿಂದೇಟು..?! ಲೆಕ್ಕಾಚಾರ ಕೆಳಗಾಗಿ ಸೋತರೆ "ಐರನ್ ಲೆಗ್" ಕಳಂಕ ಹೊತ್ತುಕೊಳ್ಳುವ ಆತಂಕ..?!

85 ವರ್ಷದ ಲೀಲಾವತಿ ಅವರ ಆರೋಗ್ಯ ಅನೇಕ ದಿನಗಳಿಂದ ಏರುಪೇರಾಗಿತ್ತು.ಅವರ ಆರೈಕೆಯಲ್ಲಿ ಮಗ ವಿನೋದ್‌ ರಾಜ್ ತೊಡಗಿದ್ರು.ಅಮ್ಮನ ಆರೈಕೆಗೆ  ಮನೆಯಲ್ಲೇ ಮಿನಿ ಆಸ್ಪತ್ರೆ ತರಹದ ವ್ಯವಸ್ಥೆಯನ್ನು ಮಾಡಿದ್ರು.ಇಷ್ಟು ದಿನ ಮನೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದ ಲೀಲಾವತಿ ಅವರ ಆರೋಗ್ಯ ಸಂಜೆ ಮೇಲೆ ಏರುಪೇರಾಗಿತ್ತು. ತತ್‌ ಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು.ಇಡೀ ಕರ್ನಾಟಕ ಲೀಲಾವತಿ ಅವರ ನಿಧನಕ್ಕೆ ಮರುಗಿದೆ.ಕನ್ನಡ ಫ್ಲ್ಯಾಶ್‌ ನ್ಯೂಸ್‌ ತಂಡ ಕೂಡ ಅಮ್ಮನವರ ಅಗಲಿಕೆಗೆ ಕಂಬನಿ ಮಿಡಿದಿದೆ.

1938 ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದ್ದ ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು.ಕನ್ನಡ ತಮಿಳು ತೆಲುಗು ಮಲಯಾಳಂ ಸೇರಿದಂತೆ 600ಕ್ಕೂ ಹೆಚ್ಚುಚಲನಚಿತ್ರಗಳಲ್ಲಿ ಅವರು ನಟಿಸಿದ್ದರು.


Political News

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

BMTC ಸಿಬ್ಬಂದಿಯಿಂದಲೇ ಬಸ್ ಕ್ಲೀನಿಂಗ್.. ಸ್ವಚ್ಛತೆಗೆಂದೇ ಕೊಟ್ಟ ಟೆಂಡರ್ ಹಣ ಎಲ್ಲೋಯ್ತು!?

Sahyadri science College alumni meet: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಮಹಾಸಮಾಗಮಕ್ಕೆ ಮುಹೂರ್ತ ಫಿಕ್ಸ್

Puneeth rajkumar award: ನ್ಯೂಸ್ ಚಾನೆಲ್‌ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 12 ಕ್ಯಾಮೆರಾಮನ್ ಮಿತ್ರರಿಗೆ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ

Scroll to Top