advertise here

Search

ಜೀವ ಬೆದರಿಕೆಯಿದೆ, ರಕ್ಷಣೆ ಕೊಡಿ! ಪೊಲೀಸ್ ಕಮಿಷನರ್‌ಗೆ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮನವಿ


ಬೆಂಗಳೂರು: ನನಗೆ ಜೀವ ಬೆದರಿಕೆ ಇದೆ..ನನಗೆ ಅಭಿಮಾನಿಗಳು ಹೆಚ್ಚಾಗಿರುವಷ್ಟೇ ನನ್ನ ಏಳಿಗೆ-ನೇರವಂತಿಕೆ ಸಹಿಸದೆ ಸಾಕಷ್ಟು ಶತೃಗಳು ಹುಟ್ಟಿಕೊಂಡಿದ್ದಾರೆ.ಹಾಗಾಗಿ ನನಗೆ ಸೂಕ್ತ ಭದ್ರತೆ ಬೇಕು ಎಂದು ಬಿಗ್ ಬಾಸ್ ಸ್ಪರ್ದಿ ಜಗದೀಶ್ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಜಗದೀಶ್ ಅವರು, ಅನ್ಯಾಯದ ವಿರುದ್ಧ ಮೊದಲಿಂದಲು ಹೋರಾಡುತ್ತಿರುವವನು ನಾನು..ನನ್ನ ಮೇಲೆ ಸಾಕಷ್ಟು ಹಲ್ಲೆ ಯತ್ನ ನಡೆದಿವೆ.ನನ್ನ ಮೇಲಿನ ದ್ವೇಷಕ್ಕೆ ನನ್ನ ಮಗನ  ಮೇಲೂ ಹಲ್ಲೆ ನಡೆಸಲಾಗಿದೆ.ಮಾಡದ ತಪ್ಪಿಗೆ ನನ್ನನ್ನು ಜೈಲಿಗೆ ಕಳುಹಿಸಲಾಗಿತ್ತು.ಅದೆಲ್ಲವನ್ನು ನಾನು ಸಹಿಸಿಕೊಂಡಿದ್ದೇನೆ.ಅನ್ಯಾಯದ ವಿರುದ್ಧ ಹೋರಾಡುತ್ತಿರುವ ನನಗೆ ಜೀವಬೆದರಿಕೆ ಇದೆ ಎಂದು ನಾನು ಸುಮ್ಮನೆ ಕೂರುವುದಿಲ್ಲ.ನನ್ನ ಹೋರಾಟ ಮುಂದುವರೆಸುತ್ತೇನೆ.ಆದರೆ ಇದಕ್ಕಾಗಿ ನನಗೆ ಸೂಕ್ತ ಭದ್ರತೆಯ ಅಗತ್ಯವಿದೆ ಎಂದು ದೂರಿನಲ್ಲಿ ಜಗದೀಶ್ ವಿವರಿಸಿದ್ದಾರೆ.

ALSO READ :  ಕೋವಿಡ್ ಅಕ್ರಮ ತನಿಖೆಗೆ ಸಂಪುಟ ಉಪ ಸಮಿತಿ ರಚನೆಗೆ ಸಚಿವ ಸಂಪುಟ ತೀರ್ಮಾನ

ಒಂದೆಡೆ ಜೀವ ಬೆದರಿಕೆ ಇನ್ನೊಂದೆಡೆ ಅಭಿಮಾನಿಗಳ ಪ್ರೀತಿ.ಬಿಗ್ ಬಾಸ್ ನಿಂದ ಬಂದ ನಂತರವಮತೂ ಅಭಿಮಾನಿಗಳು ಹೆಚ್ಚಾಗಿದ್ದಾರೆ. ಕೆಲ ಕಾರ್ಯಕ್ರಮದ ವೇಳೆ ಅಭಿಮಾನಿಗಳು ಮಾತನಾಡಲಿಕ್ಕೆ ಮುಗಿಬೀಳ್ತಿದ್ದಾರೆ. ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನಲೆ ಸೂಕ್ತ ಭದ್ರತೆ  ಬೇಕಿದೆ.ನಾನು ಅಭಿಮಾನಿಗಳಿಂದ ಅಂತರ ಕಾಯ್ದುಕೊಳ್ಳಬೇಕು.ಅವರಿಂದ ತೊಂದರೆ ಇದೆ ಎನ್ನುವ ಕಾರಣಕ್ಕೆ ಭದ್ರತೆ ಕೇಳುತ್ತಿಲ್ಲ.ನಾನು ಸುರಕ್ಷಿತ ಎಂದು ಫೀಲ್ ಮಾಡಲು ನನಗೆ ರಕ್ಷಣೆಯ ಅಗತ್ಯವಿದೆ ಅಷ್ಟೆ.ಅದನ್ನು ಕೇಳಿದ್ದೇನೆ.ನನಗೆ ಪೊಲೀಸರ ಮೇಲೆ ನಂಬಿಕೆಯಿದೆ ಎಂದು ಅವರು ತಿಳಿಸಿದ್ದಾರೆ.ಕೇವಲ  ಪೊಲೀಸ್ ಕಮಿಷನರ್ ಅವರಿಗೆ ಮಾತ್ರವಲ್ಲ ಸಿಎಂ, ಡಿಜಿಪಿಗೂ ಈ ಬಗ್ಗೆ ಜಗದೀಶ್ ಅವರು ಮನವಿ ಸಲ್ಲಿಸಿದ್ದಾರೆ.


Political News

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

Scroll to Top