advertise here

Search

MLA N.A. HARRIS NEW CHAIRMAN TO BDA..!? BDA ಅಧ್ಯಕ್ಷಗಾದಿಗೆ MLA ಎನ್.ಎ ಹ್ಯಾರೀಸ್ ಹೆಸರು ಫೈನಲ್..?!


CM ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಗೆ ಅತ್ಯಾಪ್ತರಾಗಿರುವ ಹ್ಯಾರೀಸ್.

ಬೆಂಗಳೂರು: ಎಲ್ಲಾ ನಿರೀಕ್ಷೆಯಂತಾದ್ರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ( ಬಿಡಿಎ)ದ ಅಧ್ಯಕ್ಷಗಾಧಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ ಹ್ಯಾರೀಸ್ ಗೆ ಒಲಿಯಬಹುದೆನ್ನಲಾಗ್ತಿದೆ

ನಿಗಮ ಮಂಡಳಿಗಳ ನೇಮಕ ವಿಚಾರದಲ್ಲಿ ಸರ್ಕಾರ ಕೊಡುತ್ತಾ ಬಂದಿದ್ದ ಡೆಡ್ ಲೈನ್ ಎಲ್ಲಾ ಮುಗಿದಿದ್ದು ಯಾವ್ ಕ್ಷಣದಲ್ಲಿ ಬೇಕಾದ್ರೂ  ನಿಗಮ ಮಂಡಳಿಗಳ ನೇಮಕಾತಿ ಪಟ್ಟಿ ಹೊರಬೀಳಬಹುದೆಂದು ಹೇಳಲಾಗುತ್ತಿದೆ.ಅನುಭವಿಗಳಿಗೆ ಆಯಕಟ್ಟಿನ ಹುದ್ದೆಗಳು ಸಿಗುವ ಸಾಧ್ಯತೆ ದಟ್ಟವಾಗಿರುವ ಜತೆಗೇನೆ ಪ್ರಮುಖ ನಿಗಮಮಂಡಳಿಗಳಲ್ಲಿ ಒಂದಾದ ಬಿಡಿಎ ಅಧ್ಯಕ್ಷರಾಗಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ ಹ್ಯಾರೀಸ್ ಅವರು ನೇಮಕಗೊಳ್ಳುವುದು ಬಹುತೇಕ ನಿಕ್ಕಿ ಆಗಿದೆ ಎನ್ನಲಾಗುತ್ತಿದೆ.

ಎನ್.ಎ ಹ್ಯಾರೀಸ್ ಕಾಂಗ್ರೆಸ್ ನ ಹಿರಿಯ ಶಾಸಕರಾಗಿದ್ದು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.ಅವರ ಹೆಸರು ಸಚಿವ ಸ್ಥಾನಿಗಳ ರೇಸ್ ನಲ್ಲಿ ಕೇಳಿಬಂದಿದ್ದರೂ ಕೊನೇ ಕ್ಷಣದಲ್ಲಿ ವಂಚಿತರಾಗಿದ್ದರು.ಆದರೆ ಆಗಲೇ ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಅವರಿಂದ ಆಯಕಟ್ಟಿನ ನಿಗಮ ಮಂಡಳಿ ದಯಪಾಲಿಸುವ ಭರವಸೆ ಸಿಕ್ಕಿತ್ತೆನ್ನಲಾಗಿತ್ತು.

ALSO READ :  TRP ರೇಸ್ ನಲ್ಲಿ ಮುಗ್ಗರಿಸಿದ "ನ್ಯೂಸ್ 18 ಕನ್ನಡ"-ನಂಬರ್ 1 ಸ್ಥಾನಕ್ಕೆ ಮತ್ತೆ "ಟಿವಿ 9 ಕನ್ನಡ"

ಈಗ ನಿಗಮ ಮಂಡಳಿಗಳ ನೇಮಕಾತಿ ಪಟ್ಟಿ ಫೈನಲ್ ಆಗಿದೆ ಎನ್ನಲಾಗ್ತಿದ್ದು ಎನ್.ಎ. ಹ್ಯಾರೀಸ್ ಅವರಿಗೆ ಪ್ರಬಲ ನಿಗಮ ಮಂಡಳಿಗಳಲ್ಲೊಂದಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಗಾದಿ ದಯಪಾಲಿಸಲಾಗುತ್ತಿದೆ ಎನ್ನುವ ಮಾತು ಕೇಳಿಬಂದಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜತೆ ಹ್ಯಾರೀಸ್ ಸಂಬಂಧ ಚೆನ್ನಾಗಿದೆ.ಇಬ್ಬರಿಗೂ ಆಪ್ತರಾಗಿದ್ದಾರೆ.ಅಲ್ಲದೇ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ಲೀಡರ್ ಎನಿಸಿಕೊಂಡಿದ್ದಾರೆ.ಈ ಎಲ್ಲಾ ಮಾನದಂಡಗಳು ಎನ್ ಎ ಹ್ಯಾರೀಸ್ ನೇಮಕದಲ್ಲಿ ನಿರ್ಣಾಯಕ ಪಾತ್ರ ವಹಿಸಬಹುದು ಎನ್ನಲಾಗುತ್ತಿದೆ.

ಇದಕ್ಕು ಮುನ್ನ ಬೆಂಗಳೂರು ವಿಜಯನಗರ ಶಾಸಕ ಎಂ.ಕೃಷ್ಣಪ್ಪ. ಕುಣಿಗಲ್ ಶಾಸಕ ಡಾ.ರಂಗನಾಥ್ ಹೆಸರು ಸಹ ಕೇಳಿಬಂದಿತ್ತು.ಆದರೆ ಇವರಿಬ್ಬರ ಬಗ್ಗೆ ಹೇಳಿಕೊಳ್ಳುವಂತ ಒಲವು ಇಲ್ಲದ್ದರಿಂದ ಎನ್.ಎ ಹ್ಯಾರೀಸ್ ಗೆ ಅಂತಿಮವಾಗಿ ಬಿಡಿಎ ಅಧ್ಯಕ್ಷಗಾದಿ ಪಾಲಿಸಬಹುದೆನ್ನಲಾಗ್ತಿದೆ.


Political News

ತಮಿಳುನಾಡು ಮತದಾರರ ಪಟ್ಟಿಯಲ್ಲಿ ಭಾರಿ ಕಡಿತ; 74 ಲಕ್ಷ ಮತದಾರರ ಹೆಸರು ನಾಪತ್ತೆ!

ವಿಧಾನಸೌಧಕ್ಕೆ ನಿರ್ಬಂಧ ಹೇರಿದ್ರೂ ಮಾದ್ಯಮಗಳೇಕೆ ಮೌನ? ನಿದ್ರೆಯಲ್ಲಿದೆಯಾ ಸಂಘ-ಕ್ಲಬ್..

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ: 5 ಲಕ್ಷ ಲಂಚ ಪಡೆಯುವಾಗ ಅರೆಸ್ಟ್!

ಟ್ರಂಪ್‌ ಆರ್ಥಿಕ ಸಂಘರ್ಷ: ಸುಪ್ರೀಂ ಕೋರ್ಟ್ ತಡೆ ನಡುವೆಯೂ ಶೇ.10ರಷ್ಟು ಆಮದು ಸುಂಕ ಜಾರಿ!

“ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ” ಟ್ರಂಪ್ ಹೇಳಿಕೆ

ಎಐ ಶೃಂಗಸಭೆಯಲ್ಲಿ ಹೈಡ್ರಾಮಾ: ಅರೆಬೆತ್ತಲೆ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು!

ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್!

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

Scroll to Top