advertise here

Search

ವಿಕ್ಟೋರಿಯಾದಲ್ಲಿ ಸ್ಕ್ಯಾನಿಂಗ್‌ ಭಾಗ್ಯವಿಲ್ಲ! ಬಡ ರೋಗಿಗಳ ಪಾಲಿಗೆ ‘ನರಕ’ವಾದ ಮಹಾ ಆಸ್ಪತ್ರೆ

victoria hospital mri scanning

ಬೆಂಗಳೂರು: ರಾಜಧಾನಿಯ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ, ಸಾವಿರಾರು ಬಡವರ ಪಾಲಿನ ಆಶಾಕಿರಣವಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈಗ ರೋಗಿಗಳ ಆರ್ತನಾದ ಮುಗಿಲು ಮುಟ್ಟಿದೆ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯ ಎಂಆರ್‌ಐ (MRI) ಸ್ಕ್ಯಾನಿಂಗ್ ಯಂತ್ರ ಕೆಟ್ಟು ನಿಂತಿದ್ದು, ಚಿಕಿತ್ಸೆಗಾಗಿ ದೂರದೂರುಗಳಿಂದ ಬಂದ ರೋಗಿಗಳು ದಿಕ್ಕು ತೋಚದಂತಾಗಿದ್ದಾರೆ.

ಬಿಲ್ಡಿಂಗ್‌ನಿಂದ ಬಿಲ್ಡಿಂಗ್‌ಗೆ ಅಲೆದಾಟ: ರೋಗಿಗಳ ಪರದಾಟ

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಅಪಘಾತಕ್ಕೀಡಾದವರು ಮತ್ತು ಶಸ್ತ್ರಚಿಕಿತ್ಸೆಯ ನಿರೀಕ್ಷೆಯಲ್ಲಿರುವ ರೋಗಿಗಳಿಗೆ ಎಂಆರ್‌ಐ ವರದಿ ಅತ್ಯಗತ್ಯ. ಆದರೆ, ಯಂತ್ರ ಸ್ಥಗಿತಗೊಂಡಿರುವುದರಿಂದ ಸ್ಟ್ರೆಚರ್ ಮತ್ತು ವೀಲ್ ಚೇರ್ ಹಿಡಿದುಕೊಂಡು ರೋಗಿಗಳ ಸಂಬಂಧಿಕರು ಒಂದು ಕಟ್ಟಡದಿಂದ ಇನ್ನೊಂದು ಕಟ್ಟಡಕ್ಕೆ ಅಲೆಯುತ್ತಿದ್ದಾರೆ.

ಇದನ್ನೂ ಓದಿ | ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸುಲಿಗೆ: ಅಕ್ರಮ ಪ್ರಶ್ನಿಸಿದ ಮಾಧ್ಯಮಗಳ ಮೇಲೆಯೇ ಡಾ. ಗಿರೀಶ್ ರೆಡ್ಡಿ ದರ್ಪ!

ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಅಥವಾ ಕಡಿಮೆ ದರದಲ್ಲಿ ಸಿಗಬೇಕಿದ್ದ ಸ್ಕ್ಯಾನಿಂಗ್ ಸೌಲಭ್ಯ ಸ್ಥಗಿತಗೊಂಡಿರುವುದು ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ವರದಾನವಾಗಿದೆ. ಅನಿವಾರ್ಯವಾಗಿ ರೋಗಿಗಳು ಹೊರಗಿನ ಲ್ಯಾಬ್‌ಗಳಿಗೆ ಹೋಗಿ ಸಾವಿರಾರು ರೂಪಾಯಿ ಕೊಟ್ಟು ಸ್ಕ್ಯಾನಿಂಗ್ ಮಾಡಿಸಿಕೊಳ್ಳುತ್ತಿದ್ದಾರೆ. ಬಡವರ ಹೊಟ್ಟೆ ಮೇಲೆ ಹೊಡೆಯುವ ಇಂತಹ ತಾಂತ್ರಿಕ ದೋಷಗಳನ್ನು ಸರಿಪಡಿಸಲು ಆಸ್ಪತ್ರೆ ಆಡಳಿತ ಮಂಡಳಿ ಯಾಕೆ ವಿಳಂಬ ಮಾಡುತ್ತಿದೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ALSO READ :  ಕಲಬುರಗಿಯಲ್ಲಿ ಕಾರು-ಬೈಕ್-ಲಾರಿ ಸರಣಿ ಅಪಘಾತ: ನಾಲ್ವರ ದುರ್ಮರಣ

ಆಡಳಿತ ಮಂಡಳಿಯ ನಿರ್ಲಕ್ಷ್ಯವೇ?

ನೂರಾರು ರೋಗಿಗಳು ಪ್ರತಿದಿನ ಬರುವ ಇಂತಹ ದೊಡ್ಡ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರದಂತಹ ಜೀವ ಉಳಿಸುವ ಸೌಲಭ್ಯಗಳು ಕೆಟ್ಟು ಹೋದಾಗ, ಬೇಗ ಅದನ್ನು ಸರಿಪಡಿಸಬೇಕಾದ್ದು ಸರ್ಕಾರದ ಕರ್ತವ್ಯವಾಗಿದೆ. ಆದರೆ ಎರಡು ದಿನ ಕಳೆದರೂ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದಿರುವುದು ಆರೋಗ್ಯ ಇಲಾಖೆಯ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ರೋಗಿಗಳು ಕ್ಯೂ ನಿಂತು ಸುಸ್ತಾಗುತ್ತಿದ್ದರೂ, ಅಧಿಕಾರಿಗಳು ಮಾತ್ರ “ತಾಂತ್ರಿಕ ದೋಷ ಸರಿಪಡಿಸುತ್ತಿದ್ದೇವೆ” ಎಂಬ ಹಳೆಯ ರಾಗವನ್ನೇ ಹಾಡುತ್ತಿದ್ದಾರೆ.


Political News

ಮಾರ್ಚ್ ಅಂತ್ಯಕ್ಕೆ ಕರ್ನಾಟಕದ ಗದ್ದುಗೆ ಬದಲಾವಣೆ ಪಕ್ಕಾ?! ಡಿಕೆಶಿಗೆ ಸಿಎಂ ಪಟ್ಟ ಕಟ್ಟಲು ಸಜ್ಜಾದ ಹೈಕಮಾಂಡ್!

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಐತಿಹಾಸಿಕ ಪಯಣಕ್ಕೆ ಸಿಎಂ ಅಭಿನಂದನೆ

ಸಂವಿಧಾನ ರಕ್ಷಣೆಗೆ ಸ್ಪೀಕರ್ ಪೀಠಕ್ಕೆ ಸವಾಲು: ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ

ವಾಣಿಜ್ಯ ಎಲ್‌ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಹೊಸ ನಾಯಕನ ಆಯ್ಕೆಯ ಬೆನ್ನಲ್ಲೇ ತೀವ್ರಗೊಂಡ ಯುದ್ಧ: ಆಪರೇಶನ್ ಎಪಿಕ್ ಫ್ಯೂರಿಗೆ 10ನೇ ದಿನ

‘ಹೈಕಮಾಂಡ್ ನಿರ್ಧಾರವೇ ಅಂತಿಮ’: ನಾಯಕತ್ವದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಫುಲ್ ಸ್ಟಾಪ್!

‘ಖಾಲಿ ಚೊಂಬು’ ಕೊಟ್ಟ ಕಾಂಗ್ರೆಸ್: ಬಜೆಟ್ ದಿನದಂದು ಬಿಜೆಪಿ ನಾಯಕರ ಪ್ರತಿಭಟನೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ!

Scroll to Top