ಸಾರಿಗೆ ಮುಷ್ಕರ ಎಫೆಕ್ಟ್-ನೂರಾರು ಸಿಬ್ಬಂದಿಗೆ ಶಿಸ್ತುಕ್ರಮದ ನೊಟೀಸ್‌ ಜಾರಿ-ಅಮಾನತ್ತು ಪಕ್ಕಾ..!

ಬೆಂಗಳೂರು: ಏನ್‌ ಆಗಬಾರದು ಎಂದುಕೊಂಡಿದ್ವೋ..ಏನ್‌ ಆಗುತ್ತೆ ಎಂದು ಅಂದಾಜಿಸಲಾಗಿತ್ತೋ ಅದೇ ಆಗೋಗಿದೆ.ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತುಕ್ರಮ ಜಾರಿಯಾಗಬಹುದು ಎನ್ನುವ ಅಂದಾಜನ್ನೇನು ಮಾಡಲಾಗಿತ್ತೋ ಅದರ ಪ್ರಕಾರವೇ ಆಗೋಗಿದೆ.ಕಳೆದ ಬಾರಿ ಮುಷ್ಕರದಲ್ಲಿ ಪಾಲ್ಗೊಂಡವರ ವಿರುದ್ದ ಏನೆಲ್ಲಾ ಶಿಸ್ತುಕ್ರಮ ಜಾರಿ ಮಾಡಲಾಗಿತ್ತೋ ಅದೇ ಮಾದರಿಯಲ್ಲಿ ಸರ್ಕಾರ ಮುಷ್ಕರದಲ್ಲಿ ಭಾಗಿಯಾದ ಎಲ್ಲರಿಗೂ ಶಿಸ್ತುಕ್ರಮದ ನೊಟೀಸ್‌ ಜಾರಿ ಮಾಡಿದೆ.ಇದರ ಮುಂದುವರೆದ ಭಾಗವಾಗಿ ಮುಷ್ಕರದಲ್ಲಿ ಭಾಗಿಯಾದ ಎಲ್ಲರೂ ಅಮಾನತ್ತು ಆಗುವುದು ಪಕ್ಕಾ ಎನ್ನುವಂತಾಗಿದೆ. ಸಾರಿಗೆ ಮುಷ್ಕರ ನಡೆಸದಂತೆ ಹೈ ಕೋರ್ಟ್‌ ಮುಷ್ಕರಕ್ಕೆ ನಿರ್ದರಿಸಿದ ದಿನದಂದೇ … Read more

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ಸಾರಿಗೆ ಹೋರಾಟಗಳ ಇತಿಹಾಸದಲ್ಲಿ ಕರಾಳ ಅಧ್ಯಾಯ- ವೇತನ ಪರಿಷ್ಕರಣೆಯೂ ಇಲ್ಲ:ಬೇಡಿಕೆ ಡಿಕೆಗಳ ಈಡೇರಿಕೆನೂ ಇಲ್ಲ..ಪರಸ್ಪರರ ಮೇಲೆ ದೂರು-ಸಂಘಟನೆಗಳಲ್ಲಿನ ಒಡಕಿಗೆ ಸಿಎಂ ಅಚ್ಚರಿ..ಮಾತುಕತೆ ವೈಫಲ್ಯಕ್ಕೆ ಸಂಘಟನೆಗಳ ನಡುವಿನ ಬಿರುಕು-ಭಿನ್ನಾಭಿಪ್ರಾಯ-ಸಂಘರ್ಷವೇ ಕಾರಣವಾಗಿದ್ದು ದುರಂತ-ದೌರ್ಭಾಗ್ಯಪೂರ್ಣ. ಬೆಂಗಳೂರು: ಸಾರಿಗೆ ಮುಷ್ಕರ ನಡೆಯೋದಾಗ್ಲಿ, ನಡೆದರೂ ಹೆಚ್ಚಿನ ಸಂಖ್ಯೆಯ ಸಾರಿಗೆ ಸಿಬ್ಬಂದಿ ಅದರಲ್ಲಿ ಪಾಲ್ಗೊಳ್ಳುವುದಾಗಲಿ ಬಹುತೇಕ ಡೌಟ್‌ ಎನಿಸ್ತದೆ.ಮುರಿದುಬಿದ್ದ ಮಾತುಕತೆ, ಹೈಕೋರ್ಟ್ ನ ಕಟ್ಟಪ್ಪಣೆ ಕೂಡ ಇದಕ್ಕೆ ಪ್ರಮುಖ.ಅದೆಲ್ಲವನ್ನು ಮೀರಿ  ಮಾತುಕತೆಯ ವೈಫಲ್ಯಕ್ಕೆ ಕಾರಣವಾಯಿತೆನ್ನಲಾದ ಸಂಗತಿಗಳು  ಸಾರಿಗೆ ಹೋರಾಟದ ಇತಿಹಾಸದಲ್ಲಿ ಅತ್ಯಂತ ಕೆಟ್ಟದಾಗಿ ನೆನಪಿಸಿಕೊಳ್ಳಬೇಕಾದ ಕ್ಷಣಗಳಾಗಿ … Read more

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

ಬೆಂಗಳೂರು:ನಾಳೆ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶಿಸಿದೆ. ಸಾರಿಗೆ ಮುಷ್ಕರ ಸಂಬಂಧ  ಇಂದು ನಡೆದ ವಿಚಾರಣೆ ವೇಳೆ  ಕೋರ್ಟ್ ಈ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಕೆ ಎಸ್ ಮುದಗಲ್ ಮತ್ತು ಎಂಜಿಎಸ್ ಕಮಲ್ ರ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ. ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ವಾದ  ಮಂಡಿಸಿದ್ರೆ.  ಸರ್ಕಾರದ ಪರ ನಿಲೋಫರ್ ಅಕ್ಬರ್ ವಾದ ಮಂಡಿಸಿದರು. ಕೊರೊನಾ‌ ಸಂಧರ್ಭದಲ್ಲಿ ಸರ್ಕಾರ ಹಲವು ಸಿಬ್ಬಂದಿಯನ್ನ ವಜಾಗೊಳಿಸಿದೆ..ಬಹುತೇಕರನ್ನ ಪುನಃ ಸೇವೆಗೆ ಮರು ನೇಮಕ ಮಾಡಿಲ್ಲ.. ಹೀಗಾಗಿ ಬಾಕಿ … Read more

ಶೇಕಡಾ 25 ಕೊಡ್ಲೇಬೇಕು…ಶೇಕಡಾ 8-10 ಕ್ಕೆ ನಾವ್ ರೆಡಿ…ಶೇಕಡಾ 12ಕ್ಕೆ ಫೈನಲ್ ಸಾಧ್ಯತೆಯಂತೆ..!?

ಬೆಂಗಳೂರು:ನಾಳೆಯಿಂದ ಸಾರಿಗೆ ಮುಷ್ಕರ ನಡೆಯುತ್ತಾ..? ಸಂಚಾರಿ ನಾಡಿ ಸಾರಿಗೆ ವ್ಯವಸ್ಥೆ ಸ್ಥಬ್ದವಾಗುತ್ತಾ..? 23 ಸಾವಿರ ಬಸ್ ಗಳು ರಸ್ತೆಗಿಳಿಯೊಲ್ವಾ..? 1.2 ಲಕ್ಷ ಸಿಬ್ಬಂದಿ ಕೆಲಸ ಮಾಡೊಲ್ವಾ… ಕೋಟ್ಯಾಂತರ ಗಳಿಕೆ ಖೋತವಾಗುತ್ತಾ..? ಇಷ್ಟೆಲ್ಲಾ ಪ್ರಶ್ನೆಗಳಿಗೆ ಇವತ್ತೆ ಸ್ಪಷ್ಟ ಚಿತ್ರಣ ದೊರೆಯಲಿದೆ.ಈ ನಡುವೆ ಶೇಕಡಾ 25 ರಷ್ಟು ವೇತನ ಪರಿಷ್ಕರಣೆ ಮಾಡಲೇಬೇಕೆನ್ನುವುದು ಸಾರಿಗೆ ಸಂಘಟನೆಗಳ ಬಿಗಿಪಟ್ಟಾಗಿದ್ರೆ ಶೇಕಡಾ 8 ರಿಂದ 10ಕ್ಕೆ ನಾವ್ ರೆಡಿ ಅನ್ತಿದೆಯಂತೆ ಸರ್ಕಾರ..ಇಂದು ಸಂಜೆ-ರಾತ್ರಿವರೆಗೆ ಜಗ್ಗಾಡಿ, ತೂಗಿ ಅಳೆದು ಶೇಕಡಾ 12-13 ಕ್ಕೆ ವೇತನ ಪರಿಷ್ಕರಣೆ … Read more

PG ಮಾಲೀಕನಿಂದಲೇ ಕಾಲೇಜ್ ಸ್ಟೂಡೆಂಟ್ ರೇ*ಪ್

ಬೆಂಗಳೂರು:ಓದಿಕೊಳ್ಳಲಿಕ್ಕೆಂದು ದೂರ ದೂರಿಂದ ಬೆಂಗಳೂರಿಗೆ ಬಂದು ಪಿಜಿ-ಹಾಸ್ಟೆಲ್ ಗಳಲ್ಲಿ ಉಳಿದುಕೊಳ್ಳುವ ವಿದ್ಯಾರ್ಥಿನಿಯರಿಗೆ ಪಿಜಿ-ಹಾಸ್ಟೆಲ್ ಗಳು ಸೇಫಲ್ವಾ..? ಇಂತದ್ದೊಂದು ಅನುಮಾನ ಕಾಡ್ಲಿಕ್ಕೆ ಕಾರಣವಾಗಿರೋದು ರಾಜಧಾನಿ ಹೊರವಲಯದಲ್ಲಿ ನಡೆದಿರುವ ಕಾಲೇಜ್ ಸ್ಟೂಡೆಂಟ್ ಒಬ್ಬಳ ರೇ *ಪ್.. ತನ್ನ ಪಿಜಿಯಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿನಿ ಮೇಲೆ ಕಣ್ಣಾಕಿದ್ದ ಕಾಮಾಂಧ ಆಕೆಯನ್ನು ಪುಸಲಾಯಿಸಿ,ಒಪ್ಪದಿದ್ದಕ್ಕೆ ಕಿಡ್ನ್ಯಾಪ್ ರೀತಿ ಎತ್ತಾಕಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಂದ್ಹಾಗೆ ಈ ಘಟನೆ ನಡೆದಿರುವುದು ಸೋಲದೆವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಹೆಸರಘಟ್ಟ ಮುಖ್ಯ ರಸ್ತೆಯಲ್ಲಿರುವ ಪ್ರತಿಷಿತ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಕಾಲೇಜ್ … Read more

IAS‌ ಸಿಂಧೂ ಬಿ ರೂಪೇಶ್ ಎತ್ತಂಗಡಿ..!-ಕೇಂದ್ರ ಸೇವೆಗೆ ನಿಯೋಜನೆ…!

ಬೆಂಗಳೂರು: ಪಿಯು ಬೋರ್ಡ್ ನ ನಿರ್ದೇಶಕರಾಗಿದ್ದ ಮಹಿಳಾ ಐಎಎಸ್‌ ಅಧಿಕಾರಿ ಸಿಂಧೂ ಬಿ ರೂಪೇಶ್‌ ಅವರನ್ನು ದಿಢೀರ್‌ ವರ್ಗ ಮಾಡಲಾಗಿದೆ.ಇಲಾಖೆ ಯಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡುವ ಅವಕಾಶವಿದ್ದಾಗ್ಯೂ ನಿಷ್ಕ್ರೀಯವಾಗಿದ್ದರೆನ್ನುವ ಆಪಾದನೆ ಹೊತ್ತಿದ್ದ ಐಎಎಸ್ ಅಧಿಕಾರಿ ಸಿಂದೂ ಬಿ ರೂಪೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಎನ್ನುವ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ.ಸಿಂಧೂ ಅವರನ್ನು ಕೇಂದ್ರ ಸೇವೆಗೆ ನಿಯೋಜನೆ ಮಾಡಲಾಗಿದೆ ಎನ್ನಲಾಗ್ತಿದೆ.ಅಲ್ಲಿ ಅವರು 5 ವರ್ಷಗಳ ಕಾಲ ಕೆಲಸ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. … Read more

“ಅವರಿಬ್ಬರು” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ “ಯಶಸ್ವಿ”ನಾ.?!

***ಆ “ಸುನಾಮಿ- ಸುಂಟರಗಾಳಿ” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ ಸಕ್ಸೆಸ್   ಪಕ್ಕಾ  ಅಂತೆ..!?*** ***ಮುನಿಸು ಮರೆತು, ಸ್ವಪ್ರತಿಷ್ಟೆ ಬದಿಗಿಟ್ಟು ಅನಂತ ಸುಬ್ಬರಾವ್- ಚಂದ್ರಶೇಖರ್ ಒಂದಾದ್ರೆ ಗೆಲುವು ಗ್ಯಾರಂಟಿ ಅಂತೆ..!***  ***ಮುಷ್ಕರದ  ಯಶಸ್ಸು-ವೈಫಲ್ಯ ಅವಲಂಭಿಸಿರೋದೇ ಸಾರಿಗೆ “ಕೂಟ-ಜಂಟಿಕ್ರಿಯಾಸಮಿತಿ” ಮೇಲೆ ಒಂದಾದ್ರಂತೆ..!***   ಬೆಂಗಳೂರು:ತಮ್ಮ ನ್ಯಾಯಯುತ ಬೇಡಿಕೆ ಹಾಗೂ ಹಕ್ಕೊತ್ತಾಯಕ್ಕಾಗಿ ಆಗಸ್ಟ್ 5 ರಿಂದ ರಾಜ್ಯಾದ್ಯಂತ ಸಾರಿಗೆ ವ್ಯವಸ್ಥೆಯನ್ನು ಅನಿವಾರ್ಯವಾಗಿ ಬಾಧಿತಗೊಳಿ ಸುವಂತ ನಿರ್ದಾರಕ್ಕೆ ಬಂದಿದ್ದಾರೆ ಸಾರಿಗೆ ಸಿಬ್ಬಂದಿ.ಇದರ ಝಲಕ್ ಎನ್ನುವಂತೆ ನಿನ್ನೆ ಅಂದರೆ ಬುಧವಾರ( 30-07-2025) … Read more

ವಿಕ್ಟೋರಿಯಾ ಆಸ್ಪತ್ರೆ (VICTORIA HOSPITAL CAMPUS) ಕ್ಯಾಂಪಸ್ ನಲ್ಲಿ “ಮೊಬೈಲ್”  ನಾಟ್ ರೀಚಬಲ್(MOBILE NETWORK PROBLEM)..?!

ಮೊಬೈಲ್ ನೆಟ್ವರ್ಕ್ ಗೆ ಪರದಾಡುತ್ತಿರುವ ರೋಗಿ ಸಂಬಂಧಿಗಳು-ಇಷ್ಟು ದೊಡ್ಡ ಆಸ್ಪತ್ರೆ ಕ್ಯಾಂಪಸ್ ನಲ್ಲಿ ಮೊಬೈಲ್ ಟವರ್ ಇಲ್ಲ ಎನ್ನಲಾಗುತ್ತಿರುವುದೇ ದುರಾದೃಷ್ಟಕರ. ಬೆಂಗಳೂರು: ಹೇಳಿಕೊಳ್ಳೊಕ್ಕೆ ದೊಡ್ಡ ಹಾಗೂ ಪ್ರತಿಷ್ಟಿತ ಸರ್ಕಾರಿ ಆಸ್ಪತ್ರೆ..ಆದರೆ ರೋಗಿಗಳಿಗೆ ಏನಾದ್ರೂ ಆರೋಗ್ಯ ಸಮಸ್ಯೆಯಾದಲ್ಲಿ,ಏರುಪೇರುಗಳಾದ್ದಲ್ಲಿ ಅದನ್ನು ಸಂಬಂಧಿಗಳಿಗೆ ಸಂವಹನಿಸಲು ಪರದಾಡುವಂತ ಸ್ತಿತಿ ಇದೆ ಎಂದ್ರೆ ಅದಕ್ಕೆ ಏನನ್ನಬೇಕೋ ಗೊತ್ತಾಗ್ತಿಲ್ಲ..ಇದನ್ನು ಕೇಳಿದ್ರೆ ನಿಮ್ಗೆ ಆಶ್ವರ್ಯ ಆಗಬಹುದು..ಹಾಗೆಯೇ ಹೌದಾ..! ಎಂದು ಉಬ್ಬೇರಿಸಿ ಕೇಳಬಹುದು..ಆದ್ರೆ ಇದು ಸತ್ಯ… ಸತ್ಯ..ವಿಕ್ಟೋರಿಯಾ ಕ್ಯಾಂಪಸ್ ನಲ್ಲಿರುವ ಆರೋಗ್ಯ ಕೇಂದ್ರಗಳ ಒಳಗೆ ಮೊಬೈಲ್ ನೆಟ್ವರ್ಕ್ ಗೆ … Read more

ಬಿಗ್ ಇಂಪ್ಯಾಕ್ಟ್..kSRTC ಎಂಡಿ ಸಹಿ ನಕಲು ಮಾಡಿದ್ದಾತ ಸಸ್ಪೆಂಡ್…

ಬೆಂಗಳೂರು: ಇದು ಕನ್ನಡ ಫ್ಲ್ಯಾಶ್ ನ್ಯೂಸ್ ವರದಿಯ ಫಲಶ್ರತಿ.. ಕೆಎಸ್ ಆರ್ ಟಿಸಿಯ ನಿಕಟಪೂರ್ವ ಎಂಡಿ ಅನ್ಬುಕುಮಾರ್ ಅವರ ಸಹಿಯನ್ನು ನಕಲು ಮಾಡಿ ಸಾರಿಗೆ ಸಿಬ್ಬಂದಿಯೋರ್ವರಿಗೆ 1,35,000 ರೂ ವಂಚಿಸಿದ್ದ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯ ಸಿಬ್ಬಂದಿ ರಿಚರ್ಡ್ ಎಂಬಾತನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇಲಾಖೆಯಿಂದ ಕೆಲಸ ಕಳೆದುಕೊಂಡು 7 ವರ್ಷ ವಾಗಿದ್ದ ಶಿವಮೊಗ್ಗ ವಿಭಾಗದ ಸಾಗರ ಡಿಪೋದ ನಾಗರಾಜ್ ಕುಗ್ವೆ ಎನ್ನುವವರಿಗೆ ಮರುನಿಯೋಜನೆ ಮಾಡಿಸಿಕೊಡುತ್ತೇನೆ.ಎಂಡಿ ಅನ್ಬುಕುಮಾರ್ ನನಗೆ ತುಂಬಾ ಕ್ಲೋಸ್..ಅವರಿಂದ ಹೇಳಿಸಿ ಕೆಲಸ ಮಾಡಿಸಿಕೊಡುತ್ತೇನೆ … Read more

eXCLUSIVE….ಕೆಎಸ್ ಆರ್ ಟಿಸಿ MD ಸಹಿ ನಕಲು..!-ಲಕ್ಷಾಂತರ ಸುಲಿಗೆ..! ತನಿಖೆಯಾದರೆ ಮತ್ತಷ್ಟು ಅಕ್ರಮ ಬಹಿರಂಗ..

ಬೆಂಗಳೂರು:ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ವಲ್ಪ ಎಚ್ಚರತಪ್ಪಿದ್ರೂ ಬಹುಷಃ ಅವರನ್ನೇ ಯಾಮಾರಿಸಬಹುದು ಎನ್ನಿಸುತ್ತೆ ಅವರು ಪ್ರತಿನಿಧಿಸುವ ಸಾರಿಗೆ ಇಲಾಖೆಯ ಕೆಲ ಖದೀಮ-ಕಳ್ಳರು.ಈ ಮಾತನ್ನು ಹೇಳೊಕ್ಕೆ ಕಾರಣವೂ ಇದೆ.. ಬಿಎಂಟಿಸಿ ಎಂಡಿ ಆಗಿದ್ದ ಸತ್ಯವತಿ ಅವರ ವಿಷಯದಲ್ಲಿ ಯಾವ ಯಡವಟ್ಟು ನಡೆದಿತ್ತೋ ಅದೇ ಯಟವಟ್ಟು ಮೊನ್ನೆ ಮೊನ್ನೆಯವರೆಗೂ ಕೆಎಸ್ ಆರ್ ಟಿಸಿಯಲ್ಲಿ ಎಂಡಿ ಆಗಿ ಹಾಲಿ ಚುನಾವಣಾ ಆಯೋಗದಲ್ಲಿ ಆಯುಕ್ತರಾಗಿರುವ ಅನ್ಬುಕುಮಾರ್ ಅವರ ವಿಚಾರದಲ್ಲಿಯು ನಡೆದೋಗಿದೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ.ಇದರ ಇನ್ ಡೀಟೈಲ್ ಸ್ಟೊರಿಯನ್ನು ದಾಖಲೆ ಸಮೇತ ಹೊತ್ತು ತಂದಿದೆ … Read more