advertise here

Search

ಕಾನೂನು ವಿವಿ ಪ್ರಶ್ನೆಪತ್ರಿಕೆ ಸೋರಿಕೆ: ಮೂವರು ಅರೆಸ್ಟ್..

ಬೆಂಗಳೂರು/ಹುಬ್ಬಳ್ಳಿ: ಪರೀಕ್ಷೆಗೂ ಮೊದಲೇ ಕಾನೂನು ವಿವಿಯ ಪ್ರಶ್ನೆ‌ಪತ್ರಿಕೆ ಸೋರಿಕೆ ಕೇಸ್ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 23 ರಂದು ನಡೆದ ಕರ್ನಾಟಕ‌ ರಾಜ್ಯ ಕಾನೂನು‌ ವಿಶ್ವವಿದ್ಯಾಲಯದ ಪ್ರಶ್ನೆ‌ಪತ್ರಿಕೆ ಸೋರಿಕೆ ಮಾಡಲಾಗಿದ್ದ ಪ್ರಕರಣ ಸಂಬಂಧ ಜಗದೀಶ್, ವರುಣ್ ಕುಮಾರ್ ಹಾಗು ಡಾ.ನಾಗರಾಜ್ ಎನ್ನುವವರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಆನೇಕಲ್ , ಚಿಂತಾಮಣಿ ಮತ್ತು ಕೋಲಾರ ಮೂಲದವರು ಎನ್ನಲಾಗಿದೆ… ಪರೀಕ್ಷೆಗೂ ಮೊದಲೇ ವಾಟ್ಸಾಫ್ ನಲ್ಲಿ ಪ್ರಶ್ನೆ‌ಪತ್ರಿಕೆ ಹರಿದಾಡಿತ್ತೆನ್ನಲಾಗಿದ್ದು ಟೆಲಿಗ್ರಾಂ ಗ್ರೂಪ್ … Read more

“ಡಾಲಿ” ಧನಂಜಯ್ ಮದುವೆಯಲ್ಲಿ ಅಂಡರ್ ವರ್ಲ್ಡ್ ಡಾನ್ “ಸೈಲೆಂಟ್ ಸುನೀಲ” ಪ್ರತ್ಯಕ್ಷ

ಬೆಂಗಳೂರು: ಸೈಲೆಂಟ್ ಆಗಿದ್ದ ಸುನೀಲ ಮತ್ತೆ ಪ್ರತ್ಯಕ್ಷನಾಗಿದ್ದಾನೆ.. ನೇಪಥ್ಯಕ್ಕೆ ಸರಿದೇ ಹೋದನೆಂದುಕೊಂಡಿದ್ದ ಆತ ಮುನ್ನಲೆಗೆ ಬಂದಿದ್ದೇನೆ. ಅಂದ್ಹಾಗೆ ಆತ ದಿಢೀರ್ ಪ್ರತ್ಯಕ್ಷನಾಗಿ ಅಚ್ಚರಿ ಮೂಡಿಸಿದ್ದು, ಜತೆಗೆ ಗಾಬರಿ ಸೃಷ್ಟಿಗೂ ಕಾರಣವಾಗಿದ್ದು ಕನ್ನಡದ ಸಿನೆಮಾ ಸ್ಟಾರ್ ಡಾಲಿ ಧನಂಜಯ್ ಅವರ ಮದುವೆಯಲ್ಲಿ.. ಯಾರೂ ಎಕ್ಸ್ ಪೆಕ್ಟ್ ಮಾಡದ ಹೊತ್ತಲ್ಲಿ ಮದುವೆ ಮನೆಯಲ್ಲಿ ಪ್ರತ್ತಕ್ಷನಾದ ಸುನೀಲ ಎಲ್ಲರನ್ನೂ ತಬ್ಬಿಬ್ಬುಗೊಳಿಸಿಬಿಟ್ಟಿದ್ದು ಮಾತ್ರ ಸುಳ್ಳಲ್ಲ. ಭೂಗತ ಪಾತಕಿ, ಬೆಂಗಳೂರು ಅಂಡರ್ ವರ್ಲ್ಡ್ ನ ಡಾನ್ ಸೈಲೆಂಟ್ ಸುನೀಲ ಸುಮ್ಮನಿದ್ರು ಸುದ್ದಿನೇ..ಸ್ವಲ್ಪ ಕೊಸರಾಡಿದ್ರೂ ಸುದ್ದಿನೇ..ಕಳೆದ … Read more

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ತಾಂತ್ರಿಕ ಸಲಹೆಗಾರರ ನೇಮಕವೇ ನಿಯಮಬಾಹಿರನಾ..?!

**ಡಾ.ಪಿ ನಿರಂಜನ್ ಅವರ ನೇಮಿಸಿಕೊಳ್ಳಲಿಕ್ಕೆ ಅಧ್ಯಕ್ಷ ನರೇಂದ್ರಸ್ವಾಮಿ  ನಿಯಮಗಳನ್ನೆಲ್ಲಾ ಗಾಳಿಗೆ ತೂರಿದ್ದೇಕೆ..?! **ಮಂಡಳಿಯಲ್ಲೇ ಅರ್ಹರಿರುವಾಗ ನಿವೃತ್ತರನ್ನೇ ನೇಮಿಸಿಕೊಳ್ಳುವ ಅಗತ್ಯವೇನಿದೆ..?! **ಮಂಡಳಿ ಸಭೆಯೇ ನಡೆದಿಲ್ಲ,ಅದ್ಹೇಗೆ ಡಾ.ಪಿ ನಿರಂಜನ್ ಅವರ ನೇಮಕಕ್ಕೆ ಅಂಕಿತ ಸಿಕ್ತು..!? **ಸರ್ಕಾರದ ಗಮನಕ್ಕೆ ತಾರದೆ ನೇಮಕ ನಡೆದಿದ್ದೇಗೆ..? ಸದಸ್ಯ ಕಾರ್ಯದರ್ಶಿ ಲಿಂಗರಾಜ್ ಸುಳ್ಳು ಹೇಳುತ್ತಿದ್ದಾರಾ..?! ಬೆಂಗಳೂರು:ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(KARNATAKA POLLUTION CONTROLE BOARD) ಗೆ ನೂತನ ಸಾರಥಿಯಾಗಿರುವ ಮಳವಳ್ಳಿ ಶಾಸಕ ಎಂ.ನರೇಂದ್ರ ಸ್ವಾಮಿ(CHAIRMAN NARENDRASWAMY) ಅವಸರವಸರವಾಗಿ ತೆಗೆದುಕೊಳ್ಳುತ್ತಿರುವ ನಿರ್ದಾರಗಳು ಅವರಿಗೇನೆ ಮುಳುವಾಗುವ ಸಾಧ್ಯತೆಗಳಿವೆ ಎನ್ನಿಸುತ್ತೆ.ಈಗಾಗಲೇ … Read more

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತು ಹೈಕಮಾಂಡ್ ಗೆ  ಪಕ್ಷದ ಇತಿಹಾಸದಲ್ಲೇ ಹಿಂದೆಂದು ಇಷ್ಟೊಂದು ಕಷ್ಟಕರವಾಗಿರಲಿಲ್ಲವೇನೋ ಅನ್ನಿಸುತ್ತೆ.ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಗೊಂದಲಕ್ಕೆ ಸಿಲುಕಿಕೊಂಡಿದೆ.ಯತ್ನಾಳ್ ಬಣದ ಬೇಡಿಕೆಯಂತೆ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಿಸಬೇಕೋ, ಬಿವೈ ವಿಜಯೇಂದ್ರ ಅವರನ್ನೇ ಮುಂದುವರೆಸಬೇಕೋ ಎನ್ನುವ ಪ್ರಶ್ನೆ ತೀವ್ರವಾಗಿ ಕಾಡಲಾರಂಭಿಸಿದೆ.ಇದೆಲ್ಲದರ ನಡುವೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಎಲ್ಲವನ್ನು ಸರಿದೂಗಿಸಬಲ್ಲ ಕೆಪಾಸಿಟಿ ಇರುವ ಲೀಡರ್ಸ್ ಗಳು ಯಾರೆನ್ನುವ ಪ್ರಶ್ನೆಗೆ ಹೈಕಮಾಂಡ್ ಬಳಿ ಇರುವ ಕೆಲವೇ ಕೆಲವು ಹೆಸರುಗಳಲ್ಲಿ ಸಿ.ಟಿ ರವಿ,ಅರವಿಂದ ಬೆಲ್ಲದ್ ಮುಂಚೂಣಿಯಲ್ಲಿವೆ … Read more

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

ಬೆಂಗಳೂರು: ಇದು ಎಷ್ಟರ ಮಟ್ಟಿಗೆ ಸತ್ಯವೋ..ಸುಳ್ಳೋ ಗೊತ್ತಿಲ್ಲ.ಆದರೆ ರಾಜಕೀಯ ಪಡ ಸಾಲೆಯಲ್ಲಿ ಇಂತದ್ದೊಂದು ಮಾತು ತುಂಬಾ ಗಂಭೀರವಾಗಿ ಕೇಳಿಬರುತ್ತಿದೆ. ಬಣಜಗಳ ದಿಂದ ದಿಕ್ಕೆಟ್ಟು ಹೋಗಿರುವ ಬಿಜೆಪಿ ಪಕ್ಷವನ್ನು ಹಳಿಗೆ ತರೊಕ್ಕೆ ಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ ಎನ್ನುವ ಪರಿಸ್ತಿತಿ ನಿಜಕ್ಕೂ ಇದೆಯೇ..? ಆ ಪತ್ರಿಕಾ ದಿಗ್ಗಜರನ್ನೇ ಕರೆತಂದು ಸರಿ ಮಾಡ ಬೇಕೆನಿಸುವ ವಿಚಾರ ಏಕೆ ಬಂದಿದೆ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಕಾಡಲಾರಂಭಿಸಿವೆ. ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಎನ್ನುವುದಕ್ಕಿಂತ ಏನೂ ಸರಿಯಿಲ್ಲ ಎನ್ನುವಂಥ ಪರಿಸ್ತಿತಿಯಿದೆ.ಬಣ ಜಗಳ ಸರಿ … Read more

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

*****ಆಯಕಟ್ಟಿನ ಹುದ್ದೆ  ಭರವಸೆ ಈಡೇರಿಸುವ ಭರಾಟೆಯಲ್ಲಿ  ನಿಯಮ ಗಾಳಿಗೆ ತೂರಿತಾ ಸಿದ್ದರಾಮಯ್ಯ ಸರ್ಕಾರ.. *****ಅಧ್ಯಕ್ಷರಾಗಲು ಬೇಕಿರುವುದು ಬಿಇ( ಪರಿಸರ ವಿಜ್ನಾನ)-ನರೇಂದ್ರಸ್ವಾಮಿ ಓದಿರುವುದು ಬಿ.ಇ( ಸಿವಿಲ್) ಅಂತೆ.. ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಾದಿಯ ವಾಸ್ತುವೇ ಸರಿ ಇಲ್ಲ ಎನಿಸುತ್ತದೆ.ಯಾರೇ ಹೊಸದಾಗಿ ಅಧ್ಯಕ್ಷರಾಗಿ ಬಂದರೂ ಅವರ ಸುತ್ತ ವಿವಾದ ಸುತ್ತಿಕೊಳ್ಳುತ್ತಲೇ ಇರುತ್ತದೆ.ಹೊಸ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆ ಮಳವಳ್ಳಿ ಶಾಸಕ ಎಂ.ನರೇಂದ್ರಸ್ವಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದ ಬೆನ್ನಲ್ಲೇ ಎದುರಾಗಿರುವ ಗೊಂದದ  ಹಿನ್ನಲೆಯಲ್ಲಿ ಇಂತದ್ದೊಂದು ಪ್ರಶ್ನೆ ಕಾಡುವುದು ಸಹಜ..ಆದರೆ ಇದು … Read more

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ..:ಕೃತ್ಯದ ಹಿಂದೆ DON ಬಿಷ್ಣೊಯ್ ಲಾರೆನ್ಸ್ ಕೈವಾಡ ಶಂಕೆ.!?

ಬಾಲಿವುಡ್(BOLLYWOOD) ಖ್ಯಾತ  ನಟ.ಛೋಟಾ ನವಾಬ್(CHOTA NAWAAB), ಸೈಫ್ ಅಲಿ ಖಾನ್(SAIF ALI KHAN)  ಗೆ ಅಪರಿಚಿತ ದುಷ್ಕರ್ಮಿಗಳು ಚಾಕು(STAB) ಇರಿದಿದ್ದಾರೆ. ಮುಂಬೈ(MUMBAI)ನ ಬಾಂದ್ರಾ(BAANDRA)ದಲ್ಲಿರುವ ಅವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ದರೋಡೆ ನಡೆಸಲು ಬಂದವರೇ ಈ ಕೃತ್ಯ ಎಸಗಿರಬಹುದೆಂದು ಹೇಳಲಾಗುತ್ತಿದೆ.ಪ್ರಕರಣದ ಸ್ವರೂಪ ಗಮನಿಸಿದ್ರೆ ಇದು ಕೇವಲ ದರೋಡೆಗೆ ಅಡ್ಡ ಬಂದ ಕಾರಣಕ್ಕೆ ಸಿಟ್ಟಿನಿಂದ ದುಷ್ಕರ್ಮಿಗಳು ಎಸಗಿರುವ ಕೃತ್ಯ ಎನಿಸದೆ ಗೊತ್ತಿದ್ದವರೇ ನಡೆಸಿರುವ ಕೃತ್ಯ ಎನ್ನುವ ಶಂಕೆ ಕೂಡ ವ್ಯಕ್ತವಾಗಿದೆ.ಸಧ್ಯಕ್ಕೆ ಮನೆಯಲ್ಲಿದ್ದ ಕೆಲಸದವರ  ಮೇಲೆ ಶಂಕೆ ವ್ಯಕ್ತವಾಗಿದ್ದು ಮುಂಬೈ … Read more

“ಕ್ಯಾಮೆರಾ”ದಿಂದ ಶಾಶ್ವತಕ್ಕೂ “ಔಟ್ ಆಫ್ ಫೋಕಸ್” ಆದ ಪತ್ರಿಕಾ ಛಾಯಾಗ್ರಾಹಕ “ಶಿವಮೊಗ್ಗ ನಂದನ್”

“ದೇಹದಿಂದ ಆತ್ಮ ಹೊರ ಹೋಗುವುದೆಂದರೆ ಫ್ರೇಮಿನಿಂದ ಫೋಟೋ ಹೊರ ಹೋದಂತೆ..” ಶಿವಮೊಗ್ಗ ನಂದನ್ ಅವರ ಸಾವನ್ನು ನೆನೆದು ಹಿರಿಯ ಮಾದ್ಯಮ ಮಿತ್ರರಾದ ಶಿವಮೊಗ್ಗದ ಶಿ.ಜು ಪಾಷಾ ಬರೆದಿರುವ  ಈ ಕವಿಸಾಲು ನಂದನ್ ಅವರ ಸಂಪೂರ್ಣ ಬದುಕು-ವ್ಯಕ್ತಿತ್ವ-ವೃತ್ತಿಯನ್ನೇ ಬಿಂಬಿಸುತ್ತದೆ. ಹೌದು…ಶಿವಮೊಗ್ಗ ಕಂಡ ಅತ್ಯದ್ಭುತ ಹಾಗೂ ಅಗಾಧ ಪ್ರತಿಭಾಶಾಲಿ ಛಾಯಾಗ್ರಾಹಕ ದೈಹಿಕವಾಗಿ ಫ್ರೇಮ್ ನಿಂದ ಔಟ್ ಆಫ್ ಫೋಕಸ್ ಆಗಿದ್ದಾರೆ.ಮತ್ತೆಂದೂ ಕ್ಯಾಮೆರಾ ಹಿಡಿಯಲಾರರು. ಕ್ಯಾಮೆರಾ ಧೂಳು ಹಿಡಿಯಬಹದು.ಆದರೆ ಅವರು ತೆಗೆದ ಲಕ್ಷಾಂತರು ಫೋಟೋಗಳು ನಂದನ್ ಅವರ ಇರುವಿಕೆಯನ್ನು ಜೀವಂತವಾಗಿಡಲಿವೆ.. ಶಿವಮೊಗ್ಗದಲ್ಲಿ … Read more

ಮಾದ್ಯಮ ಲೋಕದ “ದಿಗಂತ”ದಲ್ಲಿ ಶಾಶ್ವತಕ್ಕೂ “ಅಸ್ತಂಗತ”ನಾದ “ಶಶಿ”ಧರ್

ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ಇನ್ನು ಕೇವಲ ನೆನಪು-ಗೆಳೆಯನ ಅಗಲಿಕೆಗೆ ಮಾದ್ಯಮ ಸ್ನೇಹಿತರ ಕಂಬನಿ ಶಿವಮೊಗ್ಗ: ಕೆಲವರ ಸಾವುಗಳು ಅತೀವವಾಗಿ ಕಾಡುತ್ತವೆ. ನಮ್ಮಲ್ಲೇ ನಮ್ಮವರಾಗಿದ್ದ, ಹೃದಯಕ್ಕೆ ತೀರಾ ಹತ್ತಿರವಾಗಿದ್ದ ಜೀವವೊಂದು ದೂರವಾದಂತ ನೋವನ್ನು ಕೊಡುತ್ತವೆ. ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಸಾವು ಕೂಡ ಪತ್ರಕರ್ತರಾದಿಯಾಗಿ ಅವರೊಂದಿಗೆ ಒಡನಾಟ ವಿಟ್ಟುಕೊಂಡಿದ್ದವರನ್ನು ಶೋಕದ ಸಾಗರದಲ್ಲಿ ಮುಳುಗಿಸಿದೆ. ಕೆಲವೇ ವರ್ಷಗಳಲ್ಲಿ ಶಿವಮೊಗ್ಗದವರೇ ಆಗೋಗಿದ್ದ ಸ್ನೇಹಿತ-ಆತ್ಮೀಯ ಶಶಿಧರ್ ಗೆ ಕಣ್ಣೀರಾಕದವರೇ ಇಲ್ಲ. ಶಿವಮೊಗ್ಗ ಮಾದ್ಯಮ ಲೋಕದಲ್ಲಿ ಅತ್ಯಂತ ಸ್ನೇಹಪರ … Read more

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 830 ವಾಣಿಜ್ಯ ಕಟ್ಟಡಗಳು ಸೀಜ್..

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ  ಮುನೀಶ್ ಮೌದ್ಗಿಲ್ ರವರು ತಿಳಿಸಿದ್ದಾರೆ. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು … Read more