advertise here

Search

ಪ್ರೆಸ್‌ ಕ್ಲಬ್-2023 ಪ್ರಶಸ್ತಿ ಪ್ರಕಟ: ಡಿಕೆ ಶಿವಕುಮಾರ್ “ವರ್ಷದ ವ್ಯಕ್ತಿ”-ಶಾಮನೂರು ಶಿವಶಂಕರಪ್ಪಗೆ  “ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ”-ಕಾರ್ಮಿಕ ಸಚಿವ  ಸಂತೊಷ್ ಲಾಡ್ ,ಡಾ. ಕೆ. ಗೋವಿಂದರಾಜುಗೆ “ಪ್ರೆಸ್‌ಕ್ಲಬ್ ಪ್ರಶಸ್ತಿ”


29 ಪತ್ರಕರ್ತರಿಗೆ “ಪ್ರೆಸ್‌ಕ್ಲಬ್ ಜೀವಮಾನ ಸಾಧನೆ” ಪ್ರಶಸ್ತಿ:ಡಿಸೆಂಬರ್ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ   ಕಾರ್ಯಕ್ರಮ  ಉದ್ಘಾಟನೆ-ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ರಿಂದ  ಪ್ರಶಸ್ತಿ ಪ್ರಧಾನ  

ಬೆಂಗಳೂರು:ಪ್ರತಿ ವರ್ಷದಂತೆ ಈ ಬಾರಿಯೂ  ಪ್ರೆಸ್‌ಕ್ಲಬ್ ಆಫ್ ಬೆಂಗಳೂರು  ತನ್ನ ವಾರ್ಷಿಕ ಪ್ರಶಸ್ತಿ ಘೋಷಿಸಿದೆ.ಹಾಗೆಯೇ ಪತ್ರಿಕೋದ್ಯಮದಲ್ಲಿ  ಗಣನೀಯ ಸಾಧನೆ ಮಾಡಿದ ಪತ್ರಕರ್ತರನ್ನು ಗೌರವಿಸುವ ಸಂಪ್ರದಾಯ ಮುಂದುವರೆಸಿದೆ. ಈ ಪೈಕಿ   ಕಾಂಗ್ರೆಸ್  ಅಧಿಕಾರಕ್ಕೆ ಬರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಚುನಾವಣಾ ಚಾಣಕ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.ಹಾಗೆಯೇ  ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಹಿರಿಯ ರಾಜಕಾರಣಿ ಶಾಸಕ ಹಾಗೂ ಮಾಜಿ ಸಚಿವ ಶ್ರೀ ಶಾಮನೂರು ಶಿವಶಂಕರಪ್ಪ  ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದರ ಜತೆಗೆ ಪತ್ರಿಕಾರಂಗದಲ್ಲಿ ಸುದ್ದಿಮನೆ ಒಳಗೆ ಕುಳಿತು ಮಾಡುವಷ್ಟೇ ಪರಿಶ್ರಮವನ್ನು ಪತ್ರಿಕೆಗಳು ಪ್ರತಿಯೋರ್ವರ ಮನೆ-ಮನಗಳನ್ನು ತಲುಪುವುದರಲ್ಲಿ ನಿರ್ಣಾಯಕ ಪಾತ್ರ ವಹಿಸುವ ಪತ್ರಿಕಾ ವಿತರಕರಿಗೆ ಇದೇ ಮೊದಲ ಬಾರಿಗೆ  ಅಪಘಾತವಿಮೆ ಯೋಜನೆ ಪ್ರಕಟಿಸಿದ ಕಾರ್ಮಿಕ ಸಚಿವ  ಸಂತೊಷ್ ಲಾಡ್ ಹಾಗೂ ಏಷ್ಯಾ ಬ್ಯಾಸ್ಕೇಟ್ ಬಾಲ್ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಗೊಂಡ ಮೊದಲ ಕನ್ನಡಿಗ ಡಾ. ಕೆ. ಗೋವಿಂದರಾಜು ಅವರಿಗೆ ಪ್ರೆಸ್‌ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ತಿಳಿಸಿದೆ.

ಡಿಸೆಂಬರ್ 31 ರಂದು ಬೆಳಗ್ಗೆ 11:30ಕ್ಕೆ ಪ್ರೆಸ್‌ಕ್ಲಬ್ ಆವರಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು  ಉದ್ಘಾಟಿಸಲಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ

ALSO READ :  ಕಾವೇರಿ-5 ನೇ ಹಂತದ ಯೋಜನೆ ಮಾಡಿದ್ದು ಬಿಜೆಪಿ, ಹೆಸರು ತೆಗೆದುಕೊಳ್ಳುತ್ತಿರುವುದು ಕಾಂಗ್ರೆಸ್‌: ಆರ್‌.ಅಶೋಕ

ಇನ್ನುಳಿದಂತೆ ಮಾದ್ಯಮ ಕ್ಷೇತ್ರದಲ್ಲಿ  ಅಪ್ರತಿಮ ಸೇವೆ ಸಲ್ಲಿಸಿರುವ 29 ಪತ್ರಕರ್ತರನ್ನು  ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಈ ಬಾರಿ ಮೇಲ್ಕಂಡ ಪ್ರಶಸ್ತಿಗೆ ಭಾಜನರಾದ ಪತ್ರಕರ್ತರ ವಿವರ ಕೆಳಕಂಡಂತಿದೆ.

1. ಸದಾಶಿವ ಶೆಣೈ. ಕೆ

2. ಆರ್. ಶಂಕರ್

3. ಡಾ. ಕೂಡ್ಲಿ ಗುರುರಾಜ್

4. ಕೆ.ಕೆ ಮೂರ್ತಿ (ಕಂ.ಕ ಮೂರ್ತಿ)

5. ನಾಗರಾಜ. ಎಂ (ಪ್ರಜಾವಾಣಿ)

6. ರೂಪಾ ಆರ್. ರಾವ್

7. ಸತೀಶ್‌ಕುಮಾರ್ ಬಿ.ಎಸ್

8. ರಾಕೇಶ್ ಪ್ರಕಾಶ್ (ಟೈಮ್ಸ್ ಆಫ್ ಇಂಡಿಯಾ)

9. ರಮೇಶ್ ಬಿ.ಎನ್ (ಅಭಿಮನ್ಯು)

10. ಕಿರಣ್ ಹೆಚ್.ವಿ

11. ಚನ್ನಕೃಷ್ಣ ಪಿ.ಕೆ

12. ವಿಜಯ್‌ಕುಮಾರ್ ಮಲಗಿಹಾಳ್

13. ಮನೋಜ್‌ಕುಮಾರ್

14. ಮುತ್ತು. ಪಿ

15. ಶ್ರೀಕಂಠ ಶರ್ಮ. ಆರ್

16. ಸಿದ್ದೇಶ್‌ಕುಮಾರ್ ಹೆಚ್.ಪಿ

17. ಅಫ್ಶಾನ್ ಯಾಸ್ಮಿನ್

18. ಚಂದ್ರಶೇಖರ್. ಎಂ

19. ಭಾಸ್ಕರ್ ಕೆ.ಎಸ್

20. ಸುಭಾಷ್ ಹೂಗಾರ್

21. ಪ್ರಸನ್ನಕುಮಾರ್ ಲೂಯಿಸ್

22. ಶಂಕರೇಗೌಡ ಹೆಚ್.ಡಿ

23. ಜನಾರ್ಧನಾಚಾರಿ ಕೆ.ಎಸ್

24. ಲಿಂಗರಾಜು ಡಿ. ನೊಣವಿನಕೆರೆ

25. ಮೋಹನ್‌ರಾವ್ ಸಾವಂತ್. ಜಿ

26. ಅನಂತರಾಮು ಸಂಕ್ಲಾಪುರ್. ಎಲ್

27. ಕೌಶಿಕ್. ಆರ್ (ಸ್ಪೋರ್ಟ್ಸ್)

28. ಲಕ್ಷ್ಮಿ ಸಾಗರ ಸ್ವಾಮಿಗೌಡ

29. ಚಿದಾನಂದ ಪಟೇಲ್

 


Political News

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

BMTC ಸಿಬ್ಬಂದಿಯಿಂದಲೇ ಬಸ್ ಕ್ಲೀನಿಂಗ್.. ಸ್ವಚ್ಛತೆಗೆಂದೇ ಕೊಟ್ಟ ಟೆಂಡರ್ ಹಣ ಎಲ್ಲೋಯ್ತು!?

Sahyadri science College alumni meet: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಮಹಾಸಮಾಗಮಕ್ಕೆ ಮುಹೂರ್ತ ಫಿಕ್ಸ್

Puneeth rajkumar award: ನ್ಯೂಸ್ ಚಾನೆಲ್‌ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 12 ಕ್ಯಾಮೆರಾಮನ್ ಮಿತ್ರರಿಗೆ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ

Scroll to Top