advertise here

Search

ನವೆಂಬರ್ 1ರಿಂದ ಟಿಕೆಟ್ ಬುಕ್ಕಿಂಗ್ ಅವಧಿ 120 ದಿನದಿಂದ 60 ದಿನಕ್ಕೆ ಇಳಿಕೆ!


ರೈಲ್ವೆ ಟಿಕೆಟ್ ಮುಂಗಡ ಬುಕ್ಕಿಂಗ್ ಅವಧಿಯಲ್ಲಿ 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ನವೆಂಬರ್ 1ರಿಂದ ನೂತನ ನಿಯಮ ಜಾರಿಗೆ ಬರಲಿದೆ.

ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನ ಅಂದರೆ 4 ತಿಂಗಳ ಮುನ್ನವೇ ಮಾಡಬಹುದಿತ್ತು. ಆದರೆ ನೂತನ ಆದೇಶದ ಪ್ರಕಾರ 60 ದಿನ ಅಂದರೆ ಎರಡು ತಿಂಗಳಿಗೆ ಮಾತ್ರ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ. ಅಕ್ಟೋಬರ್ 31ರವರೆಗೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನಗಳ ಅವಧಿಯವರೆಗೆ ಚಾಲ್ತಿಯಲ್ಲಿರುತ್ತದೆ.

ಪರಿಷ್ಕೃತ ಬದಲಾವಣೆಗಳು ವಿಭಿನ್ನ ಮುಂಗಡ ಕಾಯ್ದಿರಿಸುವಿಕೆ ಮಿತಿ ತಾಜ್ ಎಕ್ಸ್‌ಪ್ರೆಸ್ ಮತ್ತು ಗೋಮತಿ ಎಕ್ಸ್‌ಪ್ರೆಸ್‌ನಂತಹ ಕೆಲವು ಹಗಲಿನ ಎಕ್ಸ್‌ಪ್ರೆಸ್ ರೈಲುಗಳಿಗೆ ಅನ್ವಯಿಸುವುದಿಲ್ಲ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದು, ಹೊಸ ಬದಲಾವಣೆ ನ.1 ರಿಂದ ಜಾರಿಯಾಗಲಿದೆ.

ALSO READ :  ಪ್ರೆಸ್‌ ಕ್ಲಬ್-2023 ಪ್ರಶಸ್ತಿ ಪ್ರಕಟ: ಡಿಕೆ ಶಿವಕುಮಾರ್ "ವರ್ಷದ ವ್ಯಕ್ತಿ"-ಶಾಮನೂರು ಶಿವಶಂಕರಪ್ಪಗೆ  "ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ"-ಕಾರ್ಮಿಕ ಸಚಿವ  ಸಂತೊಷ್ ಲಾಡ್ ,ಡಾ. ಕೆ. ಗೋವಿಂದರಾಜುಗೆ "ಪ್ರೆಸ್‌ಕ್ಲಬ್ ಪ್ರಶಸ್ತಿ"

ವಿದೇಶಿ ಪ್ರವಾಸಿಗರಿಗೆ 365 ದಿನಗಳ ಮುಂಗಡ ಬುಕ್ಕಿಂಗ್‌ ಆಯ್ಕೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ರೈಲ್ವೇ ಯಾವ ಕಾರಣಕ್ಕೆ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಅವಧಿಯನ್ನು ಕಡಿತ ಮಾಡಿದೆ ಎನ್ನುವನ್ನು ತಿಳಿಸಿಲ್ಲ.

ಅಧಿಕೃತ ಟಿಕೆಟ್ ಬುಕಿಂಗ್ ಪಾಲುದಾರ IRCTC ಜೊತೆಗೆ, ಮೇಕ್‌ಮೈಟ್ರಿಪ್, ಪೇಟಿಎಂ ಮತ್ತು ರೈಲ್ ಯಾತ್ರಿ ಮುಂತಾದ ಥರ್ಡ್-ಪಾರ್ಟಿ ಪ್ಲಾಟ್‌ ಫಾರ್ಮ್‌ಗಳಲ್ಲಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಬಹುದು.

ರೈಲ್ವೇ ಟಿಕೆಟ್‌ ಬುಕ್ಕಿಂಗ್ ಅವಧಿ ಕಡಿತ ಮಾಡಿದ ನಿರ್ಧಾರ ಪ್ರಕಟಗೊಂಡ ಬೆನ್ನಲ್ಲೇ ಐಆರ್ ಟಿಸಿ ಷೇರು ಮೌಲ್ಯ ಶೇ.2.4ರಷ್ಟು ಅಂದರೆ 21.70 ರೂ.ಗೆ ಇಳಿಕೆಯಾಗಿ 870.90 ರೂ. ವ್ಯವಹಾರ ಮುಗಿಸಿತು.


Political News

ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್..-4 ವರ್ಷ ಗಳಿಂದ ಲೂ “ಪ್ರಜ್ಞಾಹೀನ”-ರಾತ್ರೋರಾತ್ರಿ ಶಿಫ್ಟ್ ಗೆ ಡಾ.ಶಿವಲಿಂಗಯ್ಯ ಪ್ಲ್ಯಾನ್..!

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

Scroll to Top