advertise here

Search

ನವೆಂಬರ್ 1ರಿಂದ ಟಿಕೆಟ್ ಬುಕ್ಕಿಂಗ್ ಅವಧಿ 120 ದಿನದಿಂದ 60 ದಿನಕ್ಕೆ ಇಳಿಕೆ!


ರೈಲ್ವೆ ಟಿಕೆಟ್ ಮುಂಗಡ ಬುಕ್ಕಿಂಗ್ ಅವಧಿಯಲ್ಲಿ 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ನವೆಂಬರ್ 1ರಿಂದ ನೂತನ ನಿಯಮ ಜಾರಿಗೆ ಬರಲಿದೆ.

ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನ ಅಂದರೆ 4 ತಿಂಗಳ ಮುನ್ನವೇ ಮಾಡಬಹುದಿತ್ತು. ಆದರೆ ನೂತನ ಆದೇಶದ ಪ್ರಕಾರ 60 ದಿನ ಅಂದರೆ ಎರಡು ತಿಂಗಳಿಗೆ ಮಾತ್ರ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ. ಅಕ್ಟೋಬರ್ 31ರವರೆಗೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನಗಳ ಅವಧಿಯವರೆಗೆ ಚಾಲ್ತಿಯಲ್ಲಿರುತ್ತದೆ.

ಪರಿಷ್ಕೃತ ಬದಲಾವಣೆಗಳು ವಿಭಿನ್ನ ಮುಂಗಡ ಕಾಯ್ದಿರಿಸುವಿಕೆ ಮಿತಿ ತಾಜ್ ಎಕ್ಸ್‌ಪ್ರೆಸ್ ಮತ್ತು ಗೋಮತಿ ಎಕ್ಸ್‌ಪ್ರೆಸ್‌ನಂತಹ ಕೆಲವು ಹಗಲಿನ ಎಕ್ಸ್‌ಪ್ರೆಸ್ ರೈಲುಗಳಿಗೆ ಅನ್ವಯಿಸುವುದಿಲ್ಲ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದು, ಹೊಸ ಬದಲಾವಣೆ ನ.1 ರಿಂದ ಜಾರಿಯಾಗಲಿದೆ.

ALSO READ :  CONTROVERSY RISE ABOUT "PRESS CLUB HONOUR"..!? ವಿವಾದ-ಗೊಂದಲದ ಗೂಡಾದ "ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ":ಪ್ರಶಸ್ತಿಗೆ ರಾಜಕೀಯದ ಸೋಂಕು ಬೇಕಾ..?

ವಿದೇಶಿ ಪ್ರವಾಸಿಗರಿಗೆ 365 ದಿನಗಳ ಮುಂಗಡ ಬುಕ್ಕಿಂಗ್‌ ಆಯ್ಕೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ರೈಲ್ವೇ ಯಾವ ಕಾರಣಕ್ಕೆ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಅವಧಿಯನ್ನು ಕಡಿತ ಮಾಡಿದೆ ಎನ್ನುವನ್ನು ತಿಳಿಸಿಲ್ಲ.

ಅಧಿಕೃತ ಟಿಕೆಟ್ ಬುಕಿಂಗ್ ಪಾಲುದಾರ IRCTC ಜೊತೆಗೆ, ಮೇಕ್‌ಮೈಟ್ರಿಪ್, ಪೇಟಿಎಂ ಮತ್ತು ರೈಲ್ ಯಾತ್ರಿ ಮುಂತಾದ ಥರ್ಡ್-ಪಾರ್ಟಿ ಪ್ಲಾಟ್‌ ಫಾರ್ಮ್‌ಗಳಲ್ಲಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಬಹುದು.

ರೈಲ್ವೇ ಟಿಕೆಟ್‌ ಬುಕ್ಕಿಂಗ್ ಅವಧಿ ಕಡಿತ ಮಾಡಿದ ನಿರ್ಧಾರ ಪ್ರಕಟಗೊಂಡ ಬೆನ್ನಲ್ಲೇ ಐಆರ್ ಟಿಸಿ ಷೇರು ಮೌಲ್ಯ ಶೇ.2.4ರಷ್ಟು ಅಂದರೆ 21.70 ರೂ.ಗೆ ಇಳಿಕೆಯಾಗಿ 870.90 ರೂ. ವ್ಯವಹಾರ ಮುಗಿಸಿತು.


Political News

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

Scroll to Top