advertise here

Search

ದಾವಣಗೆರೆ ದಕ್ಷಿಣ ಉಪಚುನಾವಣೆ: ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ!

davanagere south bypoll

ದಾವಣಗೆರೆ: ಜಿಲ್ಲೆಯ ರಾಜಕೀಯದ ಭದ್ರಕೋಟೆ ಎಂದೇ ಕರೆಯಲ್ಪಡುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಹೊಸ ಟ್ವಿಸ್ಟ್ ಎದುರಾಗಿದೆ. ಹಿರಿಯ ನಾಯಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಈ ಸ್ಥಾನಕ್ಕೆ ಏಪ್ರಿಲ್ 9ರಂದು ಉಪಚುನಾವಣೆ ನಡೆಯಲಿದೆ. ಈ ಮಧ್ಯೆ, ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲದ ನಡುವೆಯೇ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಸಿ ಎಲ್ಲರ ಹುಬ್ಬೇರಿಸಿದ್ದಾರೆ.

ತಾಯಿ ಹಾಗೂ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರೊಂದಿಗೆ ಆಗಮಿಸಿದ ಸಮರ್ಥ್, ಒಟ್ಟು ಎರಡು ಸೆಟ್ ನಾಮಪತ್ರಗಳನ್ನು ಸಲ್ಲಿಸಿದರು. ಕುತೂಹಲಕಾರಿ ವಿಷಯವೆಂದರೆ, ಅವರು ಒಂದು ಸೆಟ್ ಅನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಗೂ ಇನ್ನೊಂದು ಸೆಟ್ ಅನ್ನು ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಕೆ ಮಾಡಿದ್ದಾರೆ. “ನಮ್ಮ ತಾತ ಈ ಕ್ಷೇತ್ರದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ, ಹೀಗಾಗಿ ಟಿಕೆಟ್ ನಮಗೇ ಸಿಗುವ ವಿಶ್ವಾಸವಿದೆ” ಎಂದು ಸಮರ್ಥ್ ಈ ಸಂದರ್ಭದಲ್ಲಿ ಭರವಸೆ ವ್ಯಕ್ತಪಡಿಸಿದರು.

ALSO READ :  BBMP ಡಿಸಿಎಫ್‌ ವಿರುದ್ಧ 15 % ಕಮಿಷನ್‌ ಆರೋಪ-ಡಿಸಿಎಂಗೆ ದೂರು.

ಬಲವಾದ ಲಾಬಿ ಮತ್ತು ಆಂತರಿಕ ಪೈಪೋಟಿ:

ಈ ಕ್ಷೇತ್ರದಲ್ಲಿ ಶಾಮನೂರು ಕುಟುಂಬದ ಹಿಡಿತ ಸಾಧಿಸಲು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ದೆಹಲಿ ಮಟ್ಟದಲ್ಲಿ ಭಾರಿ ಕಸರತ್ತು ನಡೆಸುತ್ತಿದ್ದಾರೆ. ಆದರೆ, ಮತ್ತೊಂದೆಡೆ ಕಾಂಗ್ರೆಸ್‌ನ ಅಲ್ಪಸಂಖ್ಯಾತ ನಾಯಕರು ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಟಿಕೆಟ್ ಆಕಾಂಕ್ಷಿಯಾಗಿರುವ ಸಾದಿಕ್ ಪೈಲ್ವಾನ್ ಕೂಡ ಇಂದು ನಾಮಪತ್ರ ಸಲ್ಲಿಸಿದ್ದು, ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ | ಜಿಬಿಎ ಟೌನ್‌ ಪ್ಲ್ಯಾನಿಂಗ್‌ನಲ್ಲಿ ‘ಪರ್ಸಂಟೇಜ್‌’ ಪರ್ವ; ಡಿಸಿಎಂ ಹೆಸರಲ್ಲೇ ಅಧಿಕಾರಿಗಳ ಲೂಟಿ ದರ್ಬಾರ್‌!

ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ಸಮರ್ಥ್ ಹೇಳಿದ್ದು, “ಯುಗಾದಿ ಹಬ್ಬದಂದು ಹೊಸ ಚಿಗುರು ಬರಲಿದೆ” ಎಂದು ಪ್ರಭಾ ಮಲ್ಲಿಕಾರ್ಜುನ್ ಮಾರ್ಮಿಕವಾಗಿ ನುಡಿದಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್ ಅಧಿಕೃತ ಬಿ-ಫಾರಂ ಯಾರಿಗೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!