advertise here

Search

ಭಾರತ ಜಾತ್ಯತೀತ ರಾಷ್ಟ್ರ ಆಗಿರೋದು ಇಷ್ಟ ಇಲ್ವಾ?: ಸುಪ್ರೀಂಕೋರ್ಟ್ ಪ್ರಶ್ನೆ


ಭಾರತ ಜಾತ್ಯಾತೀತ ರಾಷ್ಟ್ರ ಆಗಿರುವುದು ನಿಮಗೆ ಬೇಡವಾ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿಗೆ ಅವರನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

ಸಮಾಜವಾದ ಮತ್ತು ಜಾತ್ಯತೀತ ಎಂಬ ಪದಗಳು ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಮಾಜವಾದ ಮತ್ತು ಜಾತ್ಯತೀಯ ಭಾರತ ಸಂವಿಧಾನದ ಆಧಾರಸ್ತಂಭಗಳಲ್ಲಿ ಒಂದಾಗಿದೆ ಎಂದು ಈ ಹಿಂದೆ ಹಲವಾರು ಬಾರಿ ನೀಡಿದ ತೀರ್ಪಿನಲ್ಲಿ ಉಲ್ಲೇಖಿಸಿದೆ ಎಂದು ಹೇಳಿತು.

ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ, 1976ರಲ್ಲಿ ಸಂಸತ್ ನಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗದೇ 42ನೇ ಸಂವಿಧಾನ ತಿದ್ದುಪಡಿಯಲ್ಲಿ ಈ ಬದಲಾವಣೆ ಮಾಡಲಾಗಿದ್ದು, ಸಮಾಜವಾದ ಮತ್ತು ಜಾತ್ಯಾತೀತ ಪದಗಳನ್ನು ಸೇರಿಸಲಾಗಿದೆ ಎಂದು ವಕೀಲ ವಿಷ್ಣು ಶಂಕರ್ ಜೈನ್ ಅವರ ವಾದವನ್ನು ಆಲಿಸಿತು.

ನ್ಯಾಯಮೂರ್ತಿ ಸಂಜೀವ್ ಖನ್ನಾ, ಎರಡೂ ಪದಗಳ ಅರ್ಥವನ್ನು ಪಾಶ್ಚಿಮಾತ್ಯ ಶೈಲಿಯಲ್ಲಿ ಅರ್ಥ ಮಾಡಿಕೊಳ್ಳಬೇಡಿ. ಸಮಾಜವಾದ ಎಂದರೆ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಬೇಕು ಎಂಬುದಾಗಿದೆ. ಜಾತ್ಯಾತೀತ ಎಂದರೆ ಎಲ್ಲಾ ಜಾತಿ ಮತ್ತು ಧರ್ಮವರನ್ನು ಒಳಗೊಂಡಂತೆ ಎಂಬ ಅರ್ಥ. ಅದನ್ನು ವಿಶೇಷ ರೀತಿಯಲ್ಲಿ ವ್ಯಾಖ್ಯಾನಿಸುವ ಅಗತ್ಯವಿಲ್ಲ. ಇದರ ಬಗ್ಗೆ ಸಾಕಷ್ಟು ತೀರ್ಪುಗಳು ಬಂದಿರುವುದನ್ನು ನೀವು ಗಮನಿಸಬೇಕು ಎಂದು ಸಲಹೆ ನೀಡಿದರು.

ALSO READ :  ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ: ಮೃತರ ಕುಟಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್!

ಮಾಜಿ ಪ್ರಧಾನಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿಕೆಯಿದ ಈ ನಿಯಮಗಳ ಮೇಲೆ ಪರಿಣಾಮ ಬೀರಿತು. ನ್ಯಾಯಮೂರ್ತಿಗಳೇ ಈ ಪದವನ್ನು ಸೂಕ್ತವಾಗಿ ವಿಶ್ಲೇಷಿಸಿರುವುದರಿಂದ ಪ್ರತ್ಯೇಕವಾಗಿ ನಾನು ಏನನ್ನೂ ಹೇಳಲು ಬಯಸುವುದಿಲ್ಲ ಎಂದು ಪ್ರತಿವಾದಿ ಅಶ್ವಿನಿ ಉಪಾಧ್ಯಾಯ ತಿಳಿಸಿದರು.

ಈ ವೇಳೆ ವಿಷ್ಣು ಶಂಕರ್ ಜೈನ್ ವಾದ ಮಂಡಿಸಲು ಹೋದಾಗ, ನಿಮಗೆ ದೇಶ ಜಾತ್ಯಾತೀತ ರಾಷ್ಟ್ರವಾಗಿರುವುದು ಇಷ್ಟ ಇಲ್ಲವೇ ಎಂದು ಪ್ರಶ್ನಿಸಿದಾಗ, ನಾವು ಭಾರತ ಜಾತ್ಯಾತೀತ ರಾಷ್ಟ್ರ ಅಲ್ಲ ಎಂದು ಹೇಳುತ್ತಿಲ್ಲ. ಆದರೆ ವಿಧೇಯಕವನ್ನು ಪ್ರಶ್ನಿಸುತ್ತಿದ್ದೇವೆ ಎಂದರು.


Political News

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

Scroll to Top