EXCLUSIVE… BBMP ಯಿಂದ “ಬೀದಿ ನಾಯಿ ಕಲ್ಯಾಣ” ವೋ..!! “ಲೂಟಿ”ಯೋ..?! 1 ಮೈಕ್ರೋಚಿಪ್-195 ರೂ: 1,84,671 ಬೀದಿನಾಯಿ: 3 ಕೋಟಿ 81 ಲಕ್ಷ ವೆಚ್ಚ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಹಗರಣದ ಸ್ವರೂಪ ಪಡೆಯುವ ಶಂಕೆ ಮೂಡಿಸಿರುವ  ಮತ್ತೊಂದು ಸುದ್ದಿ ಸದ್ದು ಮಾಡಿದೆ. ಬೀದಿನಾಯಿಗಳಿಗೆ ಅಳವಡಿಸಲು ಹೊರಟಿರುವ ಮೈಕ್ರೋಚಿಪ್ ಈಗ ಹಗರಣದ ಸ್ವರೂಪ ಪಡೆದುಕೊಳ್ಳುತ್ತಿದೆ.ಅನಗತ್ಯ ಹಾಗೂ ಅಪಾಯಕಾರಿಯಾಗಿರುವ ಮೈಕ್ರೋಚಿಪ್ ಅಳವಡಿಕೆ ನಿಯಮಬಾಹಿರ ಕೃತ್ಯ ಎಂದು ಪ್ರಾಣಿಪ್ರಿಯರು ಈಗ ವರಾತ ತೆಗೆದಿದ್ದಾರೆ. ನಾಯಿಗಳ ಸೆನ್ಸಸ್ ನಲ್ಲಿ ನಡೆಯಿತೆನ್ನಲಾದ ಹಗರಣದ ನಂತರ ಪಶುಪಾಲನಾ ಇಲಾಖೆಯಲ್ಲಿ ನಡೆಯೊಕ್ಕೆ ಹೊರಟಿರುವ ಹಗರಣ ಇದೆನ್ನಲಾಗಿದೆ. ಬೃಹತ್ತಾಗಿ ಬೆಳೆದಿರುವ ಬೆಂಗಳೂರಿನಲ್ಲಿ  ಬೀದಿನಾಯಿಗಳು ಎಷ್ಟಿವೆ ಎಂದು ಕೇಳಿದ್ರೆ ಕರಾರುವಕ್ಕಾಗಿ ಹೇಳೊಕ್ಕೆ … Read more

ಈ ಕನ್ನಡ ವಿರೋಧಿ IFS ರಮೇಶ್ ಕುಮಾರ್ ಬಗ್ಗೆ ಸರ್ಕಾರಕ್ಕೇಕೆ “ಮಮಕಾರ”..! “ಭ್ರಷ್ಟಾಚಾರ” ಆರೋಪವಿದ್ದಾಗ್ಯೂ ರಕ್ಷಿಸುತ್ತಿರೋದು ಯಾರು “ಸಚಿವ”ರೇ..?

ಬೆಂಗಳೂರು:ಅರಣ್ಯ ಇಲಾಖೆ ಇನ್ನೂ ಈ ಅಧಿಕಾರಿಯನ್ನು ಅದ್ಹೇಕೆ ಉಳಿಸಿಕೊಂಡಿದೆಯೋ ಅರ್ಥವಾಗುತ್ತಿಲ್ಲ.ಇಷ್ಟೊಂದು ಆರೋಪಗಳು ಬಂದ ಮೇಲೂ ಮುಜುಗರದಿಂದ ತಪ್ಪಿಸಿಕೊಳ್ಳಲಿಕ್ಕಾದ್ರೂ ಈ ಅಧಿಕಾರಿಯ ವಿರುದ್ಧ ಕ್ರಮಕ್ಕೋ..ತನಿಖೆಗೋ ಆದೇಶ ಕೊಡಬೇಕಿತ್ತು.ಆದರೆ ಅದ್ಯಾವುದನ್ನೂ ಮಾಡದೆ ದುಂಡಾವರ್ತನೆ ಮೆರೆಯೊಕ್ಕೆ ಅವಕಾಶ ಮಾಡಿಕೊಟ್ಟಿರುವುದು ಅನೇಕ ಗುಮಾನಿ ಸೃಷ್ಟಿಸಿದೆ. ಅಂದ್ಹಾಗೆ ರಮೇಶ್ ಕುಮಾರ್ ಐಎಫ್ ಎಸ್..ಬಂಡಿಪುರ ಅರಣ್ಯ ವಲಯದ ಮುಖ್ಯ ಅರಣ್ಯಾಧಿಕಾರಿ…ಈ ಅಧಿಕಾರಿ ವಿರುದ್ಧ ಕೇಳಿಬಂದ ಆರೋಪ ಒಂದಾ ಎರಡಾ..? ಅಧಿಕಾರ ದುರ್ಬಳಕೆ,ವ್ಯಾಪಕ  ಭ್ರಷ್ಟಾಚಾರ, ಅನುದಾನ ದುರ್ವಿನಿಯೋಗ ,ಕರ್ತವ್ಯಲೋಪ…ಎಲ್ಲಕ್ಕಿಂತ ಹೆಚ್ಚಾಗಿ ಸಿಎಟಿಯಿಂದ ವರ್ಗಾವಣೆಗೆ ಆದೇಶ ಬಂದಾಗ್ಯೂ ಲಾಭಿ … Read more

ಇದೆಂಥಾ ಅನ್ಯಾಯ… ರಾಮಚಂದ್ರನ್ ಸರ್…!? ಕಳಂಕಿತರ ವಿರುದ್ಧ ಶಿಸ್ತುಕ್ರಮ ಜಾರಿ ಆಗೋದಿಲ್ವೇ..?!

ಬೆಂಗಳೂರು: ನೂತನ ಎಂಡಿ ರಾಮಚಂದ್ರನ್ ಅವರಂತ ಸಭ್ಯ…ಸಂಭಾವಿತ ಅಧಿಕಾರಿಯನ್ನು ಬಿಎಂಟಿಸಿ ಯಲ್ಲಿರುವ ಕೆಲವು ಅದಕ್ಷ-ಅಪ್ರಾಮಾಣಿಕ-ನಿಷ್ಪ್ರಯೋಜಕ ಅಧಿಕಾರಿಗಳು ದಾರಿ ತಪ್ಪಿಸುವ ಕೆಲಸ ಮಾಡ್ತಿದಾರಾ..? ಅಧಿಕಾರಿಗಳ ವಿರುದ್ದ ಎಂತದ್ದೇ ಗಂಭೀರ ಆಪಾದನೆ ಬಂದ್ರೂ ಅವರನ್ನು ಶಿಕ್ಷೆಯಿಂದ ತಪ್ಪಿಸುವಂತ ಕೆಲಸ ಮಾಡುತ್ತಿರುವ ಕೆಲವರು ಅವರ ಸುತ್ತಮುತ್ತ ಇದ್ದಾರಾ.?…ಕನ್ನಡ ಫ್ಲ್ಯಾಶ್ ನ್ಯೂಸ್ ತುಂಬಾ ಜವಾಬ್ದಾರಿಯಿಂದಲೇ ಹೀಗೊಂದು ಮಾತನ್ನು ಅತ್ಯಂತ ವಿಷಾದದಿಂದ ಹೇಳಬೇಕಾಗಿ ಬಂದಿದೆ.ಇದಕ್ಕೆ ಕಾರಣ  ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರದಲ್ಲಿ ಮೊದಲಿಂದಲೂ  ಮುಂದುವರೆದಿರುವ ಗೊಂದಲಮಯ ವಾತಾವರಣ ನೂತನ ಎಂಡಿ ರಾಮಚಂದ್ರನ್ ಅವರ … Read more