ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ ಅರೆಸ್ಟ್: ಎಂಪಿ ಸೀಟು ಕೊಡಿಸ್ತೀನಿ ಅಂತ 2 ಕೋಟಿ ವಂಚನೆ!

ಲೋಕಸಭೆಗೆ ಟಿಕೆಟ್ ಕೊಡಿಸ್ತೀನಿ ಎಂದು 2 ಕೋಟಿ ರೂ. ಬೇಡಿಕೆ ಇಟ್ಟ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಸೋದರ ಗೋಪಾಲ್ ಜೋಶಿ ಅವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚೌಹಾಣ್ ಅವರ ಪತ್ನಿ ಸುನೀತಾ ಚೌಹಾಣ್ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ಆಧರಿಸಿ ಪೊಲೀಸರು ಬಂಧಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಷಿ ಅವರನ್ನು ಶನಿವಾರ ಹುಬ್ಬಳ್ಳಿಯಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋಪಾಲ ಜೋಷಿ … Read more

ಕಾವೇರಿ-5 ನೇ ಹಂತದ ಯೋಜನೆ ಮಾಡಿದ್ದು ಬಿಜೆಪಿ, ಹೆಸರು ತೆಗೆದುಕೊಳ್ಳುತ್ತಿರುವುದು ಕಾಂಗ್ರೆಸ್‌: ಆರ್‌.ಅಶೋಕ

ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್‌ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕಾವೇರಿ 5 ನೇ ಹಂತದ ಯೋಜನೆಯನ್ನು ತಾವೇ ಮಾಡಿದ್ದು ಎಂದು ಜಂಭ ಕೊಚ್ಚಿಕೊಂಡಿದ್ದಾರೆ. 2018 ರ ಜನವರಿ 24 ರಂದು ಈ … Read more

ಬಿಜೆಪಿ ಆಡಳಿತದಲ್ಲಿ 619 ಕೋಮುಗಲಭೆಯ ಕೇಸ್ ವಾಪಸ್: ಕಾಂಗ್ರೆಸ್ ಆರೋಪ

ರಾಜ್ಯದಲ್ಲಿ ಪಿಎಫ್ಐ, ಎಸ್ ಡಿಪಿಐ, ಭಜರಂಗದಳ, ಶ್ರೀರಾಮಸೇನೆ ಮತ್ತು ಇತರೆ ಸಂಘಟನೆಗಳ ಕಾರ್ಯಕರ್ತರ ಮೇಲೆ 949 ಕೋಮುಗಲಭೆ ಸಂಬಂಧಿ ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ 619 ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಿಪ್ಪ ಆಡಳಿತದಲ್ಲಿ ಅತೀ ಹೆಚ್ಚು 385 ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಸರ್ಕಾರ ನೀಡಿದ ಲಿಖಿತ ಉತ್ತರ … Read more

POLITICAL EXCLUSIVE..”ಡಿ.ಕೆ” ಗೆ “ಠಕ್ಕರ್” ಕೊಡಲು “ಸತೀಶ್ ಜಾರಕಿಹೊಳಿ” ಹೆಸ್ರು “ತೇಲಿ”ಬಿಟ್ಟವರು “ಇವರೇ”ನಾ..? ಏಕೆ..?

ಬೆಂಗಳೂರು:ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದೆ..ಮಗ್ಗಲು ಬದಲಿಸುತ್ತಿದೆ.ದಸರಾ ಮುಗಿದ ಮೇಲೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುತ್ತಿದೆ ಎಂಬ ಭವಿಷ್ಯವಾಣಿ ಬಗ್ಗೆನೇ ಎಲ್ಲರ ಕುತೂಹಲ ನೆಟ್ಟಿದೆ.ಆ ಕ್ಷಿಪ್ರ ರಾಜಕೀಯ ಬೆಳವಣಿಗೆ ಏನು ಎನ್ನುವ ಕುತೂಹಲದ ಬಗ್ಗೆ ಎಲ್ಲರೂ ತಲೆಕೆಡಿಸಿಕೊಂಡಿ ರುವಾಗಲೆ ಮತ್ತೊಂದು ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ದಸರಾ ಬಳಿಕ ರಾಜ್ಯ ರಾಜಕಾರಣ ಮತ್ತೊಂದು ಮಗ್ಗಲು ಬದಲಿಸಲಿದೆ ಎನ್ನುವ  ಭವಿಷ್ಯ ವಾಣಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ..? ಅಥವಾ ಬಲವಂತವಾಗಿ ಅವರಿಂದ ಕೊಡಿಸಲಾಗುತ್ತಾ ಎನ್ನುವುದರತ್ತಲೇ … Read more

ಯಶವಂತಪುರ ಬೈ ಎಲೆಕ್ಷನ್‌ ಕನ್ಫರ್ಮ್….? S.T.ಸೋಮಶೇಖರ್‌ ಪಕ್ಕಾ..ಆದ್ರೆ ಎದುರಾಳಿ ಮೈತ್ರಿ ಅಭ್ಯರ್ಥಿ ಯಾರು…? ಜವರಾಯಿಗೌಡ/ನಿಖಿಲ್‌ ಕುಮಾರಸ್ವಾಮಿನಾ..?!

*3 ಬಾರಿ ಸೋತರೂ ಮತ್ತೊಂದು ಗೆಲುವಿನ ಅವಕಾಶದ ನಿರೀಕ್ಷೆಯಲ್ಲಿ ಜವರಾಯಿಗೌಡ.. *ಜವರಾಯಿಗೌಡರನ್ನೇ ಅಭ್ಯರ್ಥಿಯನ್ನಾಗಿಸಿ ದಳಪತಿಗಳು ಕೊಟ್ಟ ಮಾತನ್ನು ಉಳಿಸಿಕೊಳ್ತಾರಾ..? *ಜವರಾಯಿಗೌಡರಿಗಿಂತ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದ್ದೇವೆ ಎಂದು ಶಾಕ್‌ ಕೊಡ್ತಾರಾ..? *ಬಿಜೆಪಿ ಜವರಾಯಿಗೌಡ ಅವರನ್ನೇ ತಮ್ಮ ಮೈತ್ರಿ ಅಭ್ಯರ್ಥಿ ಎಂದು ಒಪ್ಪಿಕೊಳ್ಳುತ್ತಾ..? *ದಳಪತಿಗಳು ಕೈ ಕೊಟ್ರ ಜವರಾಯಿಗೌಡ ನಿಲುವೇನು..? ಬೇರೆ ಅಭ್ಯರ್ಥಿಯನ್ನು ಒಪ್ಪಿಕೊಳ್ತಾರಾ..? ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರು ಪಕ್ಷದ ಸಿದ್ದಾಂತಕ್ಕೆ ವಿರುದ್ಧವಾಗಿ ಮತ ಚಲಾಯಿಸುತ್ತಿದ್ದಂತೆ ಆಯಾ ಕ್ಷೇತ್ರ ಗಳಲ್ಲಿ ಬೈ ಎಲೆಕ್ಷನ್ ಆಗೋದು ಪಕ್ಕಾ … Read more

“ಅಡ್ಡಮತದಾನ”ಕ್ಕೆ ಕೋಟ್ಯಾಂತರ ಆಮಿಷ: ಮೈತ್ರಿ ಅಭ್ಯರ್ಥಿ ಸೇರಿ ನಾಲ್ವರ ವಿರುದ್ಧ FIR

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರಿಗೆ ಆಮೀಷ ಒಡ್ಡಲಾಯಿತು ಎನ್ನುವ  ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು ನೀಡಿದ್ದ ದೂರಿನ ಅನ್ವಯ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.ವಿಧಾನಸೌಧ ಪೊಲೀಸ್ ಠಾಣೆಯಲ್ಲಿ  ಕೇಸ್ ದಾಖಲಿಸಲಾಗಿದ್ದು ದೂರಿನ ಹಿನ್ನಲೆಯಲ್ಲಿ ಎಫ್ ಐ ಆರ್ ಲಾಡ್ಜ್ ಮಾಡಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ  ಪಕ್ಷೇತರ ಶಾಸಕರಿಗೆ ಬಿಜೆಪಿ ಮುಖಂಡರು ಅಡ್ಡಮತದಾನ ಮಾಡೊಕ್ಕೆ ಕೋಟ್ಯಾಂತರ ಆಮಿಷ ಒಡ್ಡಿದ್ದಾರೆ.ಆ ಪೈಕಿ  ಮಾಜಿ ಗೃಹ ಸಚಿವ ಎಂ.ಪಿ ಪ್ರಕಾಶ್ ಪುತ್ರಿ ಹಾಗೂ … Read more