ಕ್ರೈಸ್ತ ಧರ್ಮದ ಸಾರವೇ ಶಾಂತಿ,ಶಿಕ್ಷಣಕ್ಕೆ ಕ್ರೈಸ್ತರ ಕೊಡುಗೆ ಅಪಾರ: ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ,

ಬೆಂಗಳೂರು:ಕ್ರೈಸ್ತ ಸಮುದಾಯ ವಿಶ್ವಕ್ಕೆ ಶಾಂತಿ ಸಾರುವ ಧರ್ಮವಾಗಿದೆ. ಎಲ್ಲ ಧರ್ಮ ಮತ್ತು ವರ್ಗದವರಿಗೆ ಮಕ್ಕಳ ಶಿಕ್ಷಣಕ್ಕೆ ಶಿಕ್ಷಣ ಸಂಸ್ಥೆಗಳನ್ನು ತೆರದು ವಿದ್ಯಾವಂತ ಸಮಾಜ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯ ಅಪಾರ ಕೊಡುಗೆ ನೀಡಿದೆ.ಕ್ರೈಸ್ತರನ್ನು ಗುರುತಿಸುವ ಕೆಲಸವಾಗಬೇಕು ಎಂದು  ಬೆಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ ಆಶಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಕರ್ನಾಟಕ ಕ್ರೈಸ್ತ ಅಲ್ಪಸಂಖ್ಯಾತ ಜಾಗೃತಿ ವೇದಿಕೆ ವತಿಯಿಂದ ಡಾಕ್ಟರೇಟ್ ಪಡೆದ 72 ಕ್ರೈಸ್ತ  ಪದವೀಧರನ್ನು ಸನ್ಮಾನಿಸುವ  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಕರ್ನಾಟಕ ಕ್ರೈಸ್ತ ಅಲ್ಪಸಂಖ್ಯಾತ … Read more

PLEASE ALLOW TO X’MAS MIDNIGHT HOLY MASS…”ಮಧ್ಯರಾತ್ರಿ” ಕ್ರಿಸ್ಮಸ್‌ ಆಚರಣೆಗೇಕೆ ನಿರ್ಬಂಧ,ಕಾಂಗ್ರೆಸ್‌ ಸರ್ಕಾರಕ್ಕೆ ಕ್ರೈಸ್ತರ ಪ್ರಶ್ನೆ:ಅವಕಾಶ ನೀಡದಿದ್ದರೆ ಉಗ್ರ ಪರಿಣಾಮ..!

ಕ್ರೈಸ್ತರ ಪ್ರಮುಖ ಹಬ್ಬವೇ  ಕ್ರಿಸ್ಮಸ್‌..ಈ  ಆಚರಣೆ ಶುರುವಾಗುವುದೇ ಮಧ್ಯರಾತ್ರಿಯಿಂದ..ಅದಕ್ಕೆ ಕಾರಣವೂ ಇದೆ.ಪ್ರಭು ಏಸುಕ್ರಿಸ್ತರ ಜನನವಾಗಿದ್ದೇ ಮಧ್ಯರಾತ್ರಿ.ಆದರೆ ದುರಂತ ನೋಡಿ ಕ್ರಿಸ್ಮಸ್‌ ಭಾರೀ ಸಂಭ್ರಮದಿಂದ ಆಚರಿಸಲ್ಪಡುವ ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಧ್ಯರಾತ್ರಿಯ ಸಂಭ್ರಮಕ್ಕೆ ಅವಕಾಶವೇ ಇಲ್ಲ..ಭದ್ರತೆಯ ನೆವವೊಡ್ಡಿ ಮಧ್ಯರಾತ್ರಿಯ ಆಚರಣೆಗೆ ನಿರ್ಬಂಧ ಹೇರಲಾಗುತ್ತಿದೆ.ಈ ಕೆಟ್ಟ ನಿರ್ಬಂಧದ  ಸಂಪ್ರದಾಯವನ್ನು ಸಿದ್ದು ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಾದ್ರೂ  ತೆಗೆದುಹಾಕಲಿ ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಿರಿಯ ಪತ್ರಕರ್ತರೂ ಆಗಿರುವ ಸಾಮಾಜಿಕ ಕಾರ್ಯಕರ್ತ ಆಲ್ವಿನ್‌ ಮೆಂಡೊನ್ಸಾ ಈ ಒಂದು ಮನವಿಯನ್ನು … Read more