ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಕೆಎಸ್ ಆರ್ ಟಿಸಿ ಡ್ರೈವರ್ ಬಲಿ..!?
ಶಿವಮೊಗ್ಗ ಜಿಲ್ಲೆ ಸಾಗರ ಡಿಪೋದ ಶ್ರೀಶೈಲ ಬಿರಾದಾರ್ ಕಿರುಕುಳಕ್ಕೆ ಡ್ರೈವರ್ ನಾಗಪ್ಪ ಬಲಿ..! ಶಿವಮೊಗ್ಗ/ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ನಿಗಮಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ರೂ ಅದೆಲ್ಲಕ್ಕಿಂತ ಮೊದಲು ಅಮೂಲಾಗ್ರ ಬದಲಾವಣೆ ಆಗಬೇಕಿರುವುದು ಅಧಿಕಾರಿಗಳ ಆಡಳಿತ ವೈಖರಿ-ಸಿಬ್ಬಂದಿ ಜತೆಗಿನ ವ್ಯವಹಾರದಲ್ಲಿ..ಕೆಳ ಹಂತದ ಸಿಬ್ಬಂದಿಯನ್ನು ಕಾಲಕಸಕ್ಕಿಂತ ಕಡೆಯಾಗಿ ನೋಡುವ ಅಧಿಕಾರಿಗಳ ದೌರ್ಜನ್ಯ-ಆಟಾಟೋಪಕ್ಕೆ ಶಿವಮೊಗ್ಗ ವಿಭಾಗೀಯ ಕಚೇರಿಯ ಸಾಗರ ಡಿಪೋದ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆಪಾದನೆ ಕೇಳಿಬಂದಿದೆ. ಶಿವಮೊಗ್ಗ ವಿಭಾಗೀಯ ಕಚೇರಿಗೆ ಶಿವಮೊಗ್ಗ, ಸಾಗರ,ಶಿಕಾರಿಪುರ, ಭದ್ರಾವತಿ ಸೇರಿದಂತೆ ಐದು … Read more