advertise here

Search

CRICKET NEWS..DHRUV JUREL STORY.. ಟೀಮ್ ಇಂಡಿಯಾದ “ಧ್ರುವ” ನಕ್ಷತ್ರ “ಜುರೇಲ್” ಹಿಂದಿದೆ ಅಮ್ಮನ ತ್ಯಾಗ.. ಅಪ್ಪನ ಶಿಸ್ತು..!

heart touching story… ಒಂದು ಚಿನ್ನದ ನೆಕ್ಲೆಸ್.. ಮಗನ ಭವಿಷ್ಯವನ್ನೇ ಬಂಗಾರವನ್ನಾಗಿಸಿದ ನೈಜ ಕಥೆ..! ಸುಮಾರು 11 ವರುಷಗಳ ಹಿಂದೆ… 13 ವರ್ಷದ ಬಾಲಕ ಒಂದು ಸಾಧಾರಣ ಮೊತ್ತದ ಕ್ರಿಕೆಟ್ ಬ್ಯಾಟ್ ಮತ್ತು ಕಿಟ್‍ಗಾಗಿ ಅಪ್ಪ- ಅಮ್ಮನ ಜೊತೆ ಹಠ ಮಾತ್ರವಲ್ಲ.. ರಂಪಾಟವನ್ನೇ ಮಾಡಿದ್ದ. ನಾನು ಕ್ರಿಕೆಟ್ ಆಡಬೇಕು.. ನನಗೆ ಬ್ಯಾಟ್ ಬೇಕು ಎಂದು ಕಿರುಚಾಡುತ್ತಿದ್ದ ಮಗನ ಮೇಲೆ ತಾಳ್ಮೆ ಕಳೆದುಕೊಂಡ ಅಪ್ಪ ಸರಿಯಾಗಿಯೇ ಪೆಟ್ಟು ಕೊಟ್ಟಿದ್ದ. ಇದರಿಂದ ಇನ್ನಷ್ಟು ಸಿಟ್ಟು ಮಾಡಿಕೊಂಡ ಆ ಬಾಲಕ ಸೀದಾ … Read more

ಆಸ್ಟ್ರೇಲಿಯಾ ಸರಣಿಗೆ ಭಾರತ ಎ ತಂಡ ಪ್ರಕಟ: ಋತುರಾಜ್ ಗೆ ನಾಯಕ ಪಟ್ಟ!

ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ 15 ಸದಸ್ಯರ ಭಾರತ `ಎ’ ತಂಡ ಪ್ರಕಟಿಸಿರುವ ಬಿಸಿಸಿಐ, ಋತುರಾಜ್ ಗಾಯಕ್ವಾಡ್ ಅವರನ್ನು ನಾಯಕರನ್ನಾಗಿ ಆಯ್ಕೆಮಾಡಲಾಗಿದೆ. ಬಿಸಿಸಿಐ ಆಯ್ಕೆ ಸಮಿತಿ ಆಸ್ಟ್ರೇಲಿಯಾದಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಸೋಮವಾರ ಭಾರತ ಎ ತಂಡವನ್ನು ಪ್ರಕಟಿಸಿತು. ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ. ಭಾರತ ಎ ತಂಡ ಋತುರಾಜ್ ಗಾಯಕ್ವಾಡ್ (ನಾಯಕ), ಅಭಿಮನ್ಯು ಈಶ್ವರನ್ (ಉಪನಾಯಕ), ಸಾಯಿ ಸುದರ್ಶನ್, ನಿತಿಶ್ ಕುಮಾರ್ ರೆಡ್ಡಿ, ದೇವದತ್ ಪಡಿಕ್ಕಲ್, ರಿಕ್ಕಿ ಭುವಿ, ಬಾಬಾ … Read more

ಉದಯೋನ್ಮುಖರ ಏಷ್ಯಾಕಪ್ ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಭಾರತ `ಎ’ಗೆ ರೋಚಕ 7 ವಿಕೆಟ್ ಜಯ

ಸಂಘಟಿತ ಪ್ರದರ್ಶನ ನೀಡಿದ ಭಾರತ `ಎ’ ತಂಡ 7 ರನ್ ಗಳಿಂದ ಪಾಕಿಸ್ತಾನ ಶಹೀನ್ಸ್ ತಂಡದ ವಿರುದ್ಧ ರೋಚಕ ಜಯ ಸಾಧಿಸಿ ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಓಮನ್ ನ ಅರ್ಮೆತ್ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡ 8 ವಿಕೆಟ್ ಕಳೆದುಕೊಂಡು 183 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಪಾಕಿಸ್ತಾನ ಶಹೀನ್ಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ … Read more

1988ರ ನಂತರ ಮೊದಲ ಬಾರಿ ಭಾರತದಲ್ಲಿ ಗೆಲುವು ದಾಖಲಿಸಿದ ನ್ಯೂಜಿಲೆಂಡ್! ಭಾರತಕ್ಕೆ 8 ವಿಕೆಟ್ ಸೋಲು!

ನ್ಯೂಜಿಲೆಂಡ್ ತಂಡ ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು 8 ವಿಕೆಟ್ ಗಳಿಂದ ಭಾರತ ತಂಡವನ್ನು ಸೋಲಿಸಿ ಭಾರತದ ನೆಲದಲ್ಲಿ 36 ವರ್ಷಗಳ ನಂತರ ಮೊದಲ ಗೆಲುವಿನ ದಾಖಲೆ ಬರೆದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 107 ರನ್ ಸುಲಭ ಗುರಿ ಪಡೆದಿದ್ದ ನ್ಯೂಜಿಲೆಂಡ್ ತಂಡ ಪಂದ್ಯದ 5ನೇ ಹಾಗೂ ಅಂತಿಮ ದಿನವಾದ ಭಾನುವಾರ ಭೋಜನ ವಿರಾಮಕ್ಕೂ ಮುನ್ನವೇ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ನ್ಯೂಜಿಲೆಂಡ್ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆದರೆ ವಿಲ್ … Read more

ಬೆಂಗಳೂರು ಟೆಸ್ಟ್: ಸರ್ಫರಾಜ್ ಚೊಚ್ಚಲ ಶತಕ, ಕಿವೀಸ್ ಗೆ 107 ರನ್ ಗುರಿ

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಸಿಡಿಸಿದ ಚೊಚ್ಚಲ ಶತಕದ ಹೊರತಾಗಿಯೂ ಭಾರತ ತಂಡ ನಾಟಕೀಯ ಕುಸಿತ ಅನುಭವಿಸಿದೆ. ಇದರಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆ ಗೆಲ್ಲಲು 107 ರನ್ ಗಳ ಸುಲಭ ಸವಾಲೊಡ್ಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ 4ನೇ ದಿನವಾದ ಶನಿವಾರ 3 ವಿಕೆಟ್ ಗೆ 231 ರನ್ ಗಳಿಂದ ಎರಡನೇ ಇನಿಂಗ್ಸ್ ಮುಂದುವರಿಸಿದ ಭಾರತ ತಂಡ ದಿನದಾಟದ ಅಂತ್ಯಕ್ಕೂ ಮುನ್ನವೇ 462 ರನ್ ಗೆ ಆಲೌಟಾಗಿದೆ. … Read more

ಬೆಂಗಳೂರು ಟೆಸ್ಟ್: 46 ರನ್ ಗೆ ಆಲೌಟಾದ ಭಾರತ ತವರಿನಲ್ಲಿ ಕಳಪೆ ದಾಖಲೆ!

ನ್ಯೂಜಿಲೆಂಡ್ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಭಾರತದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ ತಂಡ 46 ರನ್ ಗೆ ಆಲೌಟಾಗಿದೆ. ತವರಿನಲ್ಲಿ ಭಾರತ ತಂಡ ದಾಖಲಿಸಿದ ಅತ್ಯಂತ ಕಳಪೆ ಮೊತ್ತವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಳೆಯಿಂದ ಮೊದಲ ದಿನದಾಟ ರದ್ದಾಗಿದ್ದರಿಂದ ಪಂದ್ಯದ ಎರಡನೇ ದಿನವಾದ ಗುರುವಾರ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 31.2 ಓವರ್ … Read more

ವನಿತೆಯರ ಟಿ-20 ವಿಶ್ವಕಪ್: 8 ಕ್ಯಾಚ್ ಬಿಟ್ಟು ಸೋತ ಪಾಕಿಸ್ತಾನ, ಹೊರಬಿದ್ದ ಭಾರತ!

ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ತಂಡ ಹೀನಾಯವಾಗಿ ಸೋತಿದ್ದರಿಂದ ಭಾರತ ತಂಡ ವನಿತೆಯರ ಟಿ-20 ವಿಶ್ವಕಪ್ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ. ಈ ಮೂಲಕ 8 ಆವೃತ್ತಿಗಳ ಪೈಕಿ ಇದೇ ಮೊದಲ ಬಾರಿ ಭಾರತ ವನಿತೆಯರು ಗುಂಪು ಹಂತದಲ್ಲೇ ನಿರ್ಗಮಿಸಿ ಮುಖಭಂಗಕ್ಕೆ ಒಳಗಾಗಿದೆ. ಭಾರತ ತಂಡ ಭಾನುವಾರದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ರನ್ ಗಳಿಂದ ಸೋಲುಂಡಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್ ಸೋತಿದ್ದರಿಂದ ಭಾರತಕ್ಕೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಲಭಿಸುವ ಸಾಧ್ಯತೆ ಇತ್ತು. ಆದರೆ ನ್ಯೂಜಿಲೆಂಡ್ … Read more

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಬುಮ್ರಾಗೆ ಉಪನಾಯಕ ಪಟ್ಟ!

ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ರೋಹಿತ್ ಶರ್ಮ ಸಾರಥ್ಯದ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಶುಕ್ರವಾರ ರಾತ್ರಿ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 16ರಂದು ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ತಂಡದಲ್ಲಿ ಕೆಎಲ್ ರಾಹುಲ್, ಶುಭಮನ್ ಗಿಲ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದು, 157 ಕಿ.ಮೀ. ವೇಗದ ಬೌಲರ್ … Read more

Punith