EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

ಅಲೆನ್‌ ಕೆರಿಯರ್‌ ಇನ್ಸಿಟ್ಯೂಟ್‌  ನ ಬ್ರಹ್ಮಾಂಡ ಶೈಕ್ಷಣಿಕ ಅಕ್ರಮ ಬಯಲು- ಎಲ್ಲಾ ಸೆಂಟರ್ಸ್‌ ಮುಚ್ಚುವಂತೆ ಶಿಕ್ಷಣ ಇಲಾಖೆಯಿಂದ ಖಡಕ್‌ ಆದೇಶ- ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ಸರ್ಕಾರದ ಮಟ್ಟದಲ್ಲಿ ತೀವ್ರ ಲಾಭಿ..!.. ಎಲೆನ್ ಕೆರಿಯರ್ ಇನ್ಸಿಟ್ಯೂಟ್ … ಈ ಹೆಸರು ಕೇಳದಿರೋರೇ ಕಡಿಮೆ  ಬಿಡಿ..ನಿಮ್ಮ ಮಕ್ಕಳನ್ನು ಡಾಕ್ಟರ್ಸ್.ಎಂಜಿನಿಯರ್ಸ್‌ ಮಾಡಿಸುತ್ತೇವೆ ಎಂದು ಪತ್ರಿಕೆಗಳಲ್ಲಿ ಪುಟಗಟ್ಟಲೇ ಜಾಹೀರಾತು ಕೊಟ್ಟು ಪೋಷಕರು-ವಿದ್ಯಾರ್ಥಿಗಳಲ್ಲಿ ಸಾಮೂಹಿಕ ಸನ್ನಿ ಸೃಷ್ಟಿಸಿದ ಸಂಸ್ಥೆ.ಮಕ್ಕಳ ಭವಿಷ್ಯದ ಬಗ್ಗೆ  ಬಣ್ಣ ಬಣ್ಣದ ಕನಸುಗಳನ್ನು ಬಿತ್ತಿ, ಪ್ರತಿ ವಿದ್ಯಾರ್ಥಿಯಿಂದಲೂ ಲಕ್ಷಾಂತರ … Read more

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

ಬೆಂಗಳೂರಿಗರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ ) ಜತೆಗೆ ಕಾಯ್ದುಕೊಂಡಿದ್ದ ದಶಕದವರೆಗಿನ  ಭಾವನಾತ್ಮಕ ಸಂಬಂಧದ ಕೊಂಡಿ ಇವತ್ತೇ ಶಾಶ್ವತವಾಗಿ ಕಳಚಿ ಬೀಳಲಿದೆ.ನಾಳೆಯಿಂದ ಎಲ್ಲವೂ ಹೊಸ ಹೊಸದು…ಯಾವ ಹಳೆಯ ಆಡಳಿತಾತ್ಮಕ ವಿಚಾರಗಳು ಅಸ್ಥಿತ್ವದಲ್ಲಿ ಇರುವುದೇ ಇಲ್ಲ.. ಏಕೆಂದರೆ ನಾಳೆಯಿಂದ ಬೆಂಗಳೂರಿನ ನಾಗರಿಕರ ಪಾಲಿಗೆ ಬಿಬಿಎಂಪಿ ಒಂದು ಕನಸಾಗಿಯೇ ಉಳಿಯಲಿದೆ. ಶಾಶ್ವತಕ್ಕೂ ನೇಪಥ್ಯಕ್ಕೆ ಸರಿಯಲಿದೆ ಬಿಬಿಎಂಪಿ ಇತಿಹಾಸ. ನಾಳೆಯಿಂದ ಬಿಬಿಎಂಪಿ ಹೆಸರೇಳಲು ಅವಕಾಶ ಸಿಗುವುದಿಲ್ಲ.ಕಾರಣ, ಬಿಬಿಎಂಪಿಯ ಯುಗಾಂತ್ಯ-ಹೊಸ ಆಡಳಿತದ ಯುಗಾರಂಭ. ಹೌದು..ಬೆಂಗಳೂರಿನ ಆಡಳಿತದಲ್ಲಿ  ಹೊಸ ಅಧ್ಯಾಯ ಶುರುವಾಗಲಿದೆ. ಹಳೆಯ ಆಡಳಿತ … Read more

EXCLUSIVE…ಜನರ ದುಡ್ಡು…ಕಾಂಗ್ರೆಸ್ ಸರ್ಕಾರದ ಜಾತ್ರೆ…ಗ್ಯಾರಂಟಿ ಅನುಷ್ಟಾನ ಸಮಿತಿಯ ತಿಂಗಳ ಖರ್ಚು 17, 30,800 ರೂ..

ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು. ರಾಜ್ಯದ ಬೊಕ್ಕಸವನ್ನು ಬರಿದು ಮಾಡಿರುವುದಷ್ಟೇ ಅಲ್ಲ ಆರ್ಥಿಕತೆಯನ್ನು ದಿವಾಳಿ ಮಾಡಿವೆ ಎನ್ನುವ ಆಪಾದನೆ ವಿಪಕ್ಷಗಳಿಂದಷ್ಟೇ ಅಲ್ಲ, ಅದಕ್ಕಾಗಿ ತಮ್ಮ ಜೇಬಿನಿಂದ ಹಣ ಪಾವತಿಸುತ್ತಿರುವ ತೆರಿಗೆದಾರನಿಂದಲೂ ಕೇಳಿಬಂದಿದೆ.ಗ್ಯಾರಂಟಿಗೇ ಜನರ ತೆರಿಗೆ ಹಣದ ರೂಪದಲ್ಲಿ ನೂರಾರು ಕೋಟಿ ಖರ್ಚಾಗುತ್ತಿರುವ ವೇಳೆಯೇ ಮತ್ತೊಂದು ಸ್ಪೋಟಕ ಎನ್ನುವಂತ ಸುದ್ದಿ ಹೊರಬಿದ್ದಿದೆ.ಇದನ್ನು ಕೇಳಿ ತೆರಿಗೆದಾರರು ಮತ್ತಷ್ಟು ಶಾಕ್ ಆದರೂ ಆಶ್ವರ್ಯವಿಲ್ಲ.ಏಕೆಂದರೆ ಇದು ಗ್ಯಾರಂಟಿ ಯೊಜನೆ ಅನುಷ್ಟಾನಕ್ಕೇನೆ ಒಂದು ಕಮಿಟಿ..ಅದಕ್ಕೊಬ್ಬ ಅಧ್ಯಕ್ಷ..ಅದಕ್ಕೆ ಒಂದಷ್ಟು ಉಪಾಧ್ಯಕ್ಷರು,ಅವರ ಕೆಳಗೆ ಇನ್ನೊಂದಷ್ಟು ಜನ,….ಹೀಗೆ ಹನುಮನ … Read more

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ತಾಂತ್ರಿಕ ಸಲಹೆಗಾರರ ನೇಮಕವೇ ನಿಯಮಬಾಹಿರನಾ..?!

**ಡಾ.ಪಿ ನಿರಂಜನ್ ಅವರ ನೇಮಿಸಿಕೊಳ್ಳಲಿಕ್ಕೆ ಅಧ್ಯಕ್ಷ ನರೇಂದ್ರಸ್ವಾಮಿ  ನಿಯಮಗಳನ್ನೆಲ್ಲಾ ಗಾಳಿಗೆ ತೂರಿದ್ದೇಕೆ..?! **ಮಂಡಳಿಯಲ್ಲೇ ಅರ್ಹರಿರುವಾಗ ನಿವೃತ್ತರನ್ನೇ ನೇಮಿಸಿಕೊಳ್ಳುವ ಅಗತ್ಯವೇನಿದೆ..?! **ಮಂಡಳಿ ಸಭೆಯೇ ನಡೆದಿಲ್ಲ,ಅದ್ಹೇಗೆ ಡಾ.ಪಿ ನಿರಂಜನ್ ಅವರ ನೇಮಕಕ್ಕೆ ಅಂಕಿತ ಸಿಕ್ತು..!? **ಸರ್ಕಾರದ ಗಮನಕ್ಕೆ ತಾರದೆ ನೇಮಕ ನಡೆದಿದ್ದೇಗೆ..? ಸದಸ್ಯ ಕಾರ್ಯದರ್ಶಿ ಲಿಂಗರಾಜ್ ಸುಳ್ಳು ಹೇಳುತ್ತಿದ್ದಾರಾ..?! ಬೆಂಗಳೂರು:ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(KARNATAKA POLLUTION CONTROLE BOARD) ಗೆ ನೂತನ ಸಾರಥಿಯಾಗಿರುವ ಮಳವಳ್ಳಿ ಶಾಸಕ ಎಂ.ನರೇಂದ್ರ ಸ್ವಾಮಿ(CHAIRMAN NARENDRASWAMY) ಅವಸರವಸರವಾಗಿ ತೆಗೆದುಕೊಳ್ಳುತ್ತಿರುವ ನಿರ್ದಾರಗಳು ಅವರಿಗೇನೆ ಮುಳುವಾಗುವ ಸಾಧ್ಯತೆಗಳಿವೆ ಎನ್ನಿಸುತ್ತೆ.ಈಗಾಗಲೇ … Read more

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

*****ಆಯಕಟ್ಟಿನ ಹುದ್ದೆ  ಭರವಸೆ ಈಡೇರಿಸುವ ಭರಾಟೆಯಲ್ಲಿ  ನಿಯಮ ಗಾಳಿಗೆ ತೂರಿತಾ ಸಿದ್ದರಾಮಯ್ಯ ಸರ್ಕಾರ.. *****ಅಧ್ಯಕ್ಷರಾಗಲು ಬೇಕಿರುವುದು ಬಿಇ( ಪರಿಸರ ವಿಜ್ನಾನ)-ನರೇಂದ್ರಸ್ವಾಮಿ ಓದಿರುವುದು ಬಿ.ಇ( ಸಿವಿಲ್) ಅಂತೆ.. ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಾದಿಯ ವಾಸ್ತುವೇ ಸರಿ ಇಲ್ಲ ಎನಿಸುತ್ತದೆ.ಯಾರೇ ಹೊಸದಾಗಿ ಅಧ್ಯಕ್ಷರಾಗಿ ಬಂದರೂ ಅವರ ಸುತ್ತ ವಿವಾದ ಸುತ್ತಿಕೊಳ್ಳುತ್ತಲೇ ಇರುತ್ತದೆ.ಹೊಸ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆ ಮಳವಳ್ಳಿ ಶಾಸಕ ಎಂ.ನರೇಂದ್ರಸ್ವಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದ ಬೆನ್ನಲ್ಲೇ ಎದುರಾಗಿರುವ ಗೊಂದದ  ಹಿನ್ನಲೆಯಲ್ಲಿ ಇಂತದ್ದೊಂದು ಪ್ರಶ್ನೆ ಕಾಡುವುದು ಸಹಜ..ಆದರೆ ಇದು … Read more

ದಸರಾ ನಂದಿಧ್ವಜದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ? ಜೀವನ್ಮರಣ ಹೋರಾಟದಲ್ಲಿ ಮಹದೇವಣ್ಣ

  ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ  ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ … Read more

ಮಾದ್ಯಮಗಳಿಗೆ ವಿಧಾನಸೌಧಕ್ಕೆ ನೋ ಎಂಟ್ರಿ..? ಮಂತ್ರಿಮಹೋದಯರ ಭದ್ರತೆಗೆ ಧಕ್ಕೆಯಾಗುವ ನೆವ..?!ಎಸಿಪಿ ಯಿಂದ ಆಡಳಿತ ಸುಧಾರಣಾ ಇಲಾಖೆಗೆ ಪತ್ರ..?!

ಕರೆದಾಗ ಬರಬೇಕಂತೆ…ಹೇಳಿದ್ದಲ್ಲಿ ಬೈಟ್ ತಗೋಬೇಕಂತೆ..ಹಿಂದೆಮುಂದೆ ಅಡ್ಡಾಡುವಂತಿಲ್ವಂತೆ..ಹೇಳಿದಷ್ಟನ್ನೇ ಕೇಳ್ಕೊಂಡು ಹೋಗ್ಬೇಕಂತೆ..ಏನಿದು ಇದೆಲ್ಲಾ..?! ಬೆಂಗಳೂರು: ಕುಣಿಯಲಿಕ್ಕಾಗದವಳು ನೆಲ ಡೊಂಕು ಎಂದಳಂತೆ ಎನ್ನುವಂತಾಗಿದೆ ರಾಜ್ಯ ಸರ್ಕಾರದ ಧೋರಣೆ. ತನ್ನಲ್ಲಿರುವ ಹುಳುಕುಗಳನ್ನು ಸರಿ ಮಾಡಲು ಸಾಧ್ಯವಾಗದೆ ಮಾದ್ಯಮಗಳ ಮೇಲೆ ನಿರ್ಬಂದ-ನಿಯಂತ್ರಣ ಹೇರೊಕ್ಕೆ ಮುಂದಾಗಿದೆ ಎನ್ನಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುವ ರೀತಿಯಲ್ಲಿ ರಾಜ್ಯದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಮಾದ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರುವ ಎಲ್ಲಾ ಸಾಧ್ಯತೆ ಕಂಡುಬಂದಿದೆ.ಮಾದ್ಯಮಗಳಿಂದ ಮಂತ್ರಿ ಮಹೋದಯರ ಸುರಕ್ಷತೆ-ಭದ್ರತೆಗೆ ಧಕ್ಕೆ ಆಗುತ್ತಿದೆ. ಸಚಿವಾಲಯದ ಕೆಲಸ ಕಾರ್ಯಗಳಿಗೆ ತೀವ್ರತರದ ತೊಂದರೆ ಆಗುತ್ತಿದೆ ಎನ್ನುವ … Read more

ದಿ-ಫೈಲ್ ಮಹಾಂತೇಶ್ ವಿರುದ್ದ ಬೇಹುಗಾರಿಕೆ…!?

ದಿಕ್ಕಾರವಿರಲಿ, ಸತ್ಯದ ಉಸಿರು ನಿಲ್ಲಿಸುವ ಆಳುವವರ  ದುಸ್ಸಾಹಸಕ್ಕೆ..! ಕುಲಗೆಟ್ಟು ಹೋಗಿರುವ ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಪತ್ರಿಕೋದ್ಯಮವೂ ಬಹುತೇಕ ಕಲುಷಿತಗೊಂಡಿದೆ.ಸಿದ್ದಾಂತ-ಆದರ್ಶ-ವೃತ್ತಿನಿಷ್ಟೆ-ರಾಜಿಯಾಗದ ಮನಸ್ಥಿತಿ-ನಿಷ್ಟವಾದುದನ್ನ ನಿಷ್ಟೂರವಾಗಿ ಹೇಳುವ ಜಾಯಮಾನವನ್ನು ಶೇಕಡಾ 99 ರಷ್ಟು ಮಾದ್ಯಮಗಳು ಕಳಕೊಂಡುಬಿಟ್ಟಿವೆ ಎನ್ನುವುದು ದುರಂತವಾದ್ರೂ ಒಪ್ಪಿಕೊಳ್ಳಲೇಬೇಕಾದ ಸಂಗತಿ.ಇದರ ನಡುವೆಯೂ ಒಂದಷ್ಟು ವೃತ್ತಿಪಾವಿತ್ರ್ಯತೆಯನ್ನು ಮಾದ್ಯಮ ಉಳಿಸಿಕೊಂಡಿದೆ ಎನ್ನುವುದಾದ್ರೆ ಬೆರಳೆಣಿಕೆಯ ವಸ್ತುನಿಷ್ಟ ಪತ್ರಕರ್ತರೇ ಕಾರಣ..ಅಂಥಾ ಕೆಲವೇ ಕೆಲವು ಪತ್ರಕರ್ತರಲ್ಲಿ ಜಿ.ಮಹಾಂತೇಶ್ ಒಬ್ಬರು. ಅವರಲ್ಲಿ ಯಾವ ತರಹದ ವೃತ್ತಿನಿಷ್ಟೆಸತ್ಯಸಂದತೆಯಿನ್ನೂ ಜೀವಂತವಾಗಿದೆ ಎನ್ನುವುದಕ್ಕೆ ಸ್ಪೋಟಕ ಸುದ್ದಿಗಳನ್ನೇ ಪ್ರಧಾನವಾಗಿಟ್ಟುಕೊಂಡು ಕೆಲಸ ಮಾಡುತ್ತಿರುವ ದಿ ಫೈಲ್ … Read more

BMRCL VIOLATES GOVERNMENT ORDER, ALSO INSULTS TO DR.B.R AMBEDKAR..!?”ಸಂವಿಧಾನಶಿಲ್ಪಿ”ಯನ್ನೇ ಮರೆತುಬಿಡ್ತಾ BMRCL..?!-ಗಣತಂತ್ರ ದಿನದಂದೇ ಅಂಬೇಡ್ಕರ್ ಗೆ ಅಗೌರವ.!?

ಬೆಂಗಳೂರು: ನಮಗೆ ಲಭ್ಯವಾಗಿರುವ ದೃಶ್ಯಾವಳಿಗಳು ನಮ್ಮ ಹೆಮ್ಮೆಯ ಮೆಟ್ರೋದ ಆಡಳಿತದಿಂದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನ-ಅಗೌರವವನ್ನು ಸಾರಿ ಹೇಳುತ್ತದೆ.ಇದು ಸತ್ಯವೇ ಆಗಿದ್ದಲ್ಲಿ ಬಿಎಂಆರ್ ಸಿಎಲ್ ಆಡಳಿತ ಕೇವಲ ಅಂಬೇಡ್ಕರ್ ವಿರೋಧಿ ಅಷ್ಟೇ ಅಲ್ಲ, ಸಂವಿಧಾನವಿರೋಧಿಯೂ ಹೌದೆಂದು ಬೇಸರ-ಅಪಮಾನ-ಆಕ್ರೋಶದಿಂದಲೇ ಹೇಳಬೇಕಾಗುತ್ತದೆ. ದೇಶಕ್ಕೆ ಸಂವಿಧಾನದಂಥ ಮಹಾನ್ ಗ್ರಂಥ ನೀಡಿದ ಡಾ.ಬಿ.ಆರ್ ಅಂಬೇಡ್ಕರ್ ಎನ್ನುವುದೇ ಬಿಎಂಆರ್ ಸಿಎಲ್ ಗೆ ಗೊತ್ತಿಲ್ಲ ಎನ್ನಿಸುತ್ತೆ.ಹಾಗಾಗಿನೇ ಸರ್ಕಾರ ಈ ಬಗ್ಗೆ  ಹೊರಡಿಸಿದ್ದ ಆದೇಶವನ್ನೂ ಗಾಳಿಗೆ ತೂರಿದೆ. ಗಣರಾಜ್ಯೊತ್ಸವ ಸಮಾರಂಭಗಳಂದು ರಾಜ್ಯದ ಸರ್ಕಾರಿ ಕಚೇರಿಗಳು.ಸರಕಾರಿ ಶಾಲಾ … Read more