ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊ ಡೆಲಿವರಿ ಕಂಪನಿಗಳ ವಿರುದ್ಧ ತನಿಖೆಗೆ ಆಗ್ರಹ

ಜೊಮೊಟೊದ ಬ್ಲಿಂಕಿಟ್, ಜೆಪ್ಟೊ, ಸ್ವಿಗ್ಗಿ ಸಂಸ್ಥೆಗಳು ಫುಡ್ ಡೆಲಿವರಿ ವಿಧಿಸುತ್ತಿರುವ ಶುಲ್ಕದ ಬಗ್ಗೆ ತನಿಖೆ ನಡೆಸಬೇಕು ಎಂದು ದೇಶದ ಅತೀ ದೊಡ್ಡ ಚಿಲ್ಲರೆ ಸಾಗಾಟದಾರರ ಒಕ್ಕೂಟ ಭಾರತೀಯ ಸ್ಪರ್ಧಾತ್ಮಕ ಆಯೋಗವನ್ನು ಆಗ್ರಹಿಸಿದೆ. ಆಹಾರ ಧಾನ್ಯಗಳಿಂದ ಹಿಡಿದು ಎಲೆಕ್ಟ್ರಾನಿಕ್ ವಸ್ತುಗಳನ್ನು ಕೇವಲ 10 ನಿಮಿಷದಲ್ಲಿ ತಲುಪಿಸುತ್ತೇವೆ ಎಂಬ ಭರವಸೆ ನೀಡುವ ಡೆಲಿವರಿ ಕಂಪನಿಗಳು ಖರೀದಿ ವ್ಯವಸ್ಥೆಯನ್ನೇ ಬದಲಿಸಿವೆ. ಅಮೆಜಾನ್ ಕಂಪನಿ ಇ-ಕಾಮರ್ಸ್ ಕಾಲಿಟ್ಟ ನಂತರ ಪ್ರತಿಯೊಂದು ವಸ್ತುಗಳು ಮನೆ ಬಾಗಿಲಿಗೆ ಡೆಲಿವರಿ ನೀಡುತ್ತಿವೆ. ನೆಸ್ಟ್ಲೆ, ಹಿಂದೂಸ್ತಾನ್ ಯುನಿಲಿವರ್ ನಂತಹ … Read more

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ವೈದ್ಯ ಮತ್ತು 6 ವಲಸೆ ಕಾರ್ಮಿಕರ ಹತ್ಯೆ

ಸ್ಥಳೀಯ ವೈದ್ಯ ಹಾಗೂ 6 ವಲಸಿಗ ಕಾರ್ಮಿಕರನ್ನು ಉಗ್ರರು ಹತ್ಯೆಗೈದ ಘಟನೆ ಜಮ್ಮು ಕಾಶ್ಮೀರದ ಗಂಡ್ರೇಬೆಲ್ ಜಿಲ್ಲೆಯ ಸೋನಾಬರ್ಗ್ ನಲ್ಲಿ ನಡೆದಿದೆ. ಭಾನುವಾರ ಸಂಜೆ ನಿರ್ಮಾಣ ಹಂತದ ಸುರಂಗದ ಮೇಲೆ ದಾಳಿ ಮಾಡಿದ ಉಗ್ರರು 6 ಮಂದಿಯನ್ನು ಹತ್ಯೆಗೈದಿದ್ದಾರೆ. ಭಾರತೀಯ ಸೇನೆ ಘಟನೆ ನಡೆದ ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಜೆಡ್-ಮಾರ್ಥ್ ಸುರಂಗದ ಕಾಮಗಾರಿ ನಡೆಯುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಗೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಆಘಾತ ವ್ಯಕ್ತಪಡಿಸಿದ್ದು, ನಾಗರಿಕರ … Read more

ಬಿಗ್ ಬಾಸ್ ಸೆಟ್ ಗೆ ಮರಳಿದ ಸಲ್ಮಾನ್ ಖಾನ್: 60 ಸಿಬ್ಬಂದಿಯ ಬಿಗಿ ಭದ್ರತೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಬೆದರಿಕೆ ನಡುವೆಯೂ ಬಿಗ್ ಬಾಸ್ ರಿಯಾಲಿಟಿ ಶೋ ಸೆಟ್ ಬಿಗಿ ಭದ್ರತೆ ನಡುವೆ ಆಗಮಿಸಿ ನಿರೂಪಣೆ ಪುನರಾರಂಭಿಸಿದ್ದಾರೆ. 58 ವರ್ಷದ ಸಲ್ಮಾನ್ ಖಾನ್ ಬಿಗ್ ಬಾಸ್ ನ 18ನೇ ಆವೃತ್ತಿಯಲ್ಲಿ ವೀಕೆಂಡ್ ಕಾರ್ಯಕ್ರಮದ ನಿರೂಪಣೆಗಾಗಿ ಶುಕ್ರವಾರ ಸಂಜೆ 7 ಗಂಟೆಗೆ ಆಗಮಿಸಿದ್ದಾರೆ. ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಸುಮಾರು 3 ಗಂಟೆಗಳ ಕಾಲ ನಡೆಸಿಕೊಡಲಿದ್ದಾರೆ. ಸಲ್ಮಾನ್ ಖಾನ್ ಗೆ ಬಿಗ್ ಬಾಸ್ ಸೆಟ್ ನಲ್ಲಿಯೇ … Read more

5 ಕೋಟಿ ರೂ.ಗೆ ಡಿಮ್ಯಾಂಡ್: ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸದಾಗಿ ಮತ್ತೊಂದು ಬೆದರಿಕೆ ಕರೆ ಬಂದಿದ್ದು, 5 ಕೋಟಿ ರೂ. ಕೊಟ್ಟು ಲಾರೆನ್ಸ್ ಬಿಶ್ನೋಯಿ ಜೊತೆಗಿನ ವೈರತ್ವಕ್ಕೆ ಕೊನೆ ಮಾಡಿ ಎಂದು ಬೆದರಿಸಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ಗ್ರೂಪ್ ಗೆ ಬಂದಿರುವ ಸಂದೇಶದಲ್ಲಿ ಲಾರೆನ್ಸ್ ಬಿಶ್ನೋಯಿ ಗುಂಪಿನವರು ಎಂದು ಶಂಕಿಸಲಾದ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಸಲ್ಮಾನ್ ಖಾನ್ ಒಂದು ವೇಳೆ 5 ಕೋಟಿ ರೂ. ನೀಡದೇ ಇದ್ದರೆ ಇತ್ತೀಚೆಗೆ ಹತ್ಯೆಯಾದ ಶಾಸಕ ಬಾಬಾ ಸಿದ್ದಿಕಿಗೆ ಆದ ಸ್ಥಿತಿಗಿಂತ … Read more

ನಟಿ ಅಮೂಲ್ಯ ಸೋದರ, ನಿರ್ದೇಶಕ ದೀಪಕ್ ಅರಸ್ 42 ವಯಸ್ಸಿಗೆ ನಿಧನ

ನಟಿ ಅಮೂಲ್ಯ ಸೋದರ ಹಾಗೂ ಕನ್ನಡ ಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದ ಕಾರಣ ಗುರುವಾರ ನಿಧನರಾಗಿದ್ದು, ಅವರಿಗೆ 42 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ದೀಪಕ್ ಅರಸ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ದೀಪಕ್ ಅರಸ್ ಮನಸಾಲಜಿ, ಶುಗರ್ ಫ್ಯಾಕ್ಟರಿ ಎಂಬ ಎರಡು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಅಲ್ಲದೇ ಟೂರ್ ಅಂಡ್ ಟ್ರಾವೆಲ್ಸ್ ನಡೆಸುತ್ತಿದ್ದರು.

ನವೆಂಬರ್ 1ರಿಂದ ಟಿಕೆಟ್ ಬುಕ್ಕಿಂಗ್ ಅವಧಿ 120 ದಿನದಿಂದ 60 ದಿನಕ್ಕೆ ಇಳಿಕೆ!

ರೈಲ್ವೆ ಟಿಕೆಟ್ ಮುಂಗಡ ಬುಕ್ಕಿಂಗ್ ಅವಧಿಯಲ್ಲಿ 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ನವೆಂಬರ್ 1ರಿಂದ ನೂತನ ನಿಯಮ ಜಾರಿಗೆ ಬರಲಿದೆ. ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನ ಅಂದರೆ 4 ತಿಂಗಳ ಮುನ್ನವೇ ಮಾಡಬಹುದಿತ್ತು. ಆದರೆ ನೂತನ ಆದೇಶದ ಪ್ರಕಾರ 60 ದಿನ ಅಂದರೆ ಎರಡು ತಿಂಗಳಿಗೆ ಮಾತ್ರ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ. ಅಕ್ಟೋಬರ್ 31ರವರೆಗೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನಗಳ ಅವಧಿಯವರೆಗೆ ಚಾಲ್ತಿಯಲ್ಲಿರುತ್ತದೆ. ಪರಿಷ್ಕೃತ … Read more

ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಭಾರತ ಸರ್ಕಾರದ ಏಜೆಂಟ್ ಸಂಪರ್ಕ: ಕೆನಡಾ ಗಂಭೀರ ಆರೋಪ

ಭಾರತ ಸರ್ಕಾರದ ಏಜೆಂಟ್ ಗಳು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕೆನಡಾ ಗಂಭೀರ ಆರೋಪ ಮಾಡಿದೆ. ಈ ಮೂಲಕ ಪರಸ್ಪರ ರಾಯಭಾರ ಅಧಿಕಾರಿಗಳನ್ನು ಹೊರಹಾಕಿದ ಬೆನ್ನಲ್ಲೇ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಭಣವಾಗಿದೆ. ಖಾಲಿಸ್ತಾನಿ ಮುಖಂಡ ಹಾಗೂ ಕೆನಡಾ ನಿವಾಸಿ ಹರ್ದೀಪ್ ನಿಜ್ಜಾರ್ ಹತ್ಯೆ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಈ ಹಿಂದೆ ಆರೋಪಿಸಿದ್ದ ಕೆನಡಾ ಸರ್ಕಾರ ಇದೀಗ ವಿಷಯವನ್ನು ಮರುಪ್ರಸ್ತಾಪಿಸಿದ್ದು, ಪ್ರತ್ಯೇಕ ರಾಷ್ಟ್ರಕ್ಕಾಗಿ ಹೋರಾಟ ನಡೆಸುತ್ತಿರುವ … Read more

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ … Read more

ನ್ಯೂಯಾರ್ಕ್ ಗೆ ಹೊರಟ್ಟಿದ್ದ 239 ಪ್ರಯಾಣಿಕರಿದ್ದ ವಿಮಾನ ದೆಹಲಿಗೆ ಮಾರ್ಗ ಬದಲಾವಣೆ!

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನಿಂದ ಅಮೆರಿಕದ ನ್ಯೂಯಾರ್ಕ್ ಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಎಐ 119 ವಿಮಾನ 239 ಪ್ರಯಾಣಿಕರನ್ನು ಹೊತ್ತು ಮುಂಬೈನಿಂದ ಹೊರಟ್ಟಿದ್ದು, ವಿಮಾನ ಹೊರಟ ಕೆಲವೇ ಕ್ಷಣಗಳಲ್ಲಿ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೂಡಲೇ ದೆಹಲಿಗೆ ಮಾರ್ಗ ಬದಲಾಯಿಸಲಾಯಿತು. ವಿಮಾನದಲ್ಲಿದ್ದ ಪ್ರತಿಯೊಬ್ಬ ಪ್ರಯಾಣಿಕ ಹಾಗೂ ಸಿಬ್ಬಂದಿಯ ಭದ್ರತಾ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ಆತಂಕ ಕಂಡು ಬಾರದ ಕಾರಣ ವಿಮಾನ ಮತ್ತೆ ನ್ಯೂಯಾರ್ಕ್ ಕಡೆ … Read more

ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ: ಹೊಸ ಸರ್ಕಾರ ರಚನೆಗೆ ಸಿದ್ಧತೆ

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಕಳೆದ 10 ವರ್ಷಗಳಿಂದ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ಭಾನುವಾರ ಅಂತ್ಯಗೊಂಡಿದೆ. ಇತ್ತೀಚೆಗೆ ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ ಅಂತ್ಯಗೊಂಡಿದ್ದು, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿ ಆಡಳಿತವನ್ನು ವಾಪಸ್ ಪಡೆಯುವ ಬಗ್ಗೆ ಭಾನುವಾರ ಅಧಿಸೂಚನೆ ಹೊರಡಿಸಿದೆ. ಸಂವಿಧಾನದ ನಿಯಮ 239 ಮತ್ತು 239ಎ ಅನ್ವಯ ಕೇಂದ್ರ ಸರ್ಕಾರ ಹೊರಡಿಸಿದ್ದ ಕೇಂದ್ರಾಡಳಿತ ಪ್ರದೇಶದ ಆದೇಶ 2019, ಅಕ್ಟೋಬರ್ 31ರಂದು ರದ್ದಾಗಲಿದೆ. ಆದರೆ … Read more