ವಾರದೊಳಗೆ ಅನ್ನಭಾಗ್ಯದ ಹಣ ಜಮೆ: ಆಹಾರ ಸಚಿವ ಕೆಎಚ್ ಮುನಿಯಪ್ಪ

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯಡಿ ನೀಡುತ್ತಿರುವ ಅನ್ನಭಾಗ್ಯದ ಅಕ್ಕಿ ಹಣ ವಾರದೊಳಗೆ ಪಾವತಿಯಾಗಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಕೋಲಾರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವರ್‌ ಸಮಸ್ಯೆಯಿಂದಾಗಿ 2 ತಿಂಗಳಿಂದ ಅಕ್ಕಿ ಹಣ ಬಿಡುಗಡೆ ಮಾಡಲು ಆಗಿರಲಿಲ್ಲ. ಇದೀಗ ಸಮಸ್ಯೆ ಬಗೆಹರಿದಿದ್ದು, ವಾರದೊಳಗೆ ಹಣ ಪಾವತಿಯಾಗಲಿದೆ ಎಂದರು. ಸಾಮಾನ್ಯವಾಗಿ ಪ್ರತಿ ತಿಂಗಳು 10ನೇ ತಾರೀಖಿನಿಂದ ಬಿಡುಗಡೆಯಾಗುತ್ತಿದ್ದು, ಸರ್ವರ್‌ ಸಮಸ್ಯೆಯಿಂದಾಗಿ ಅಕ್ಕಿ ಹಣ ಬಂದಿಲ್ಲ. ಸರಕಾರದಲ್ಲಿ ಹಣದ ಕೊರತೆಯಿಲ್ಲ. … Read more

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆ: ತಪ್ಪಿದ ದುರಂತ

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ದುರಂತವೊಂದು ತಪ್ಪಿದ ಘಟನೆ ಉತ್ತರಾಖಂಡ್ ನ ರೂರ್ಕಿಯಲ್ಲಿ ಜರುಗಿದೆ. ಗೂಡ್ಸ್ ರೈಲಿನ ಲೋಕೋ ಪೈಲೆಟ್ ಗ್ಯಾಸ್ ಸಿಲಿಂಡರ್ ಕಂಡು ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ. ಇದರಿಂದ ರೈಲು ಹಳಿ ತಪ್ಪುವ ಅಪಾಯದಿಂದ ಪಾರಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ಚೆನ್ನೈನಲ್ಲಿ ಮೈಸೂರು ದರ್ಬಾಂಗ ರೈಲು ದುರಂತ ಸಂಭವಿಸಿದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ. ಇದರಿಂದ ದೇಶದಲ್ಲಿ ರೈಲು ಅನಾಹುತಗಳು ಸಂಭವಿಸುವಂತೆ ಮಾಡುವ ಪ್ರಯತ್ನಗಳು ಪದೇಪದೆ ಬೆಳಕಿಗೆ ಬರುತ್ತಿರುವುದು ಆಘಾತಕಾರಿ … Read more

ಪ್ರಿಯಕರ ಜೊತೆ ಸೇರಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಾಯಿ!

ಪ್ರಿಯಕರನ ಜೊತೆಗೂಡಿ ಹೆತ್ತ ಇಬ್ಬರು ಮಕ್ಕಳನ್ನೇ ತಾಯಿಯೊಬ್ಬಳು ಕೊಂದ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಕೆಂಪೇಗೌಡ ವೃತ್ತದ ಬಳಿಯ ನಿವಾಸಿ ಸ್ವೀಟಿ (21) ಮತ್ತು ಪ್ರಿಯಕರ ಗ್ರಗೋರಿ ಫ್ರಾನ್ಸಿಸ್ ಜೊತೆಗೂಡಿ ಕಬಿಲ್ ಹಾಗೂ 11 ತಿಂಗಳ ಕಬಿಲನ್ ನನ್ನು ಹತ್ಯೆ ಮಾಡಿದ್ದು, ಇದೀಗ ಪೊಲೀಸರ ವಶದಲ್ಲಿದ್ದಾರೆ. ಸ್ವೀಟಿಗೆ ಈ ಹಿಂದೆ ಶಿವು ಎಂಬಾತನ ಜೊತೆ ಮದುವೆ ಆಗಿದ್ದು, ಎರಡು ಮಕ್ಕಳಿದ್ದವು. ಮಕ್ಕಳಾದ ನಂತರ ಶಿವುವನ್ನು ತೊರೆದು ಗ್ರೆಗೋರಿ ಫ್ರಾನ್ಸಿಸ್ ಜೊತೆ ವಾಸಿಸುತ್ತಿದ್ದಳು. ಮಕ್ಕಳಿಂದ ಪ್ರಿಯಕರ ಜೊತೆ … Read more

ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ: ಬೀರೂರಿನ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ

ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ ಪರಾಕ್ ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ಇತಿಹಾಸ ಪ್ರಸಿದ್ಧ ಮೈಲಾಂಗರಲಿಂಗೇಶ್ವರ ಕಾರ್ಣಿಕ ನುಡಿದಿದೆ. ವಿಜಯದಶಮಿಯ ಮಾರನೇ ದಿನವಾದ ಭಾನುವಾರ ಮಹಾನವಮಿ ಬಯಲಿನಲ್ಲಿ ನಡೆದ ಮೈಲಾರಲಿಂಗ ಸ್ವಾಮಿ ದೇವಸ್ಥಾನದಲ್ಲಿ ರಾತ್ರಿಯಿಂದ ಹೂವಿನ ಪಲಕ್ಕಿಯೊಂದಿಗೆ ಮೆರವಣಿಗೆ ನಡೆದಿದ್ದು, ಭಾನುವಾರ ಬೆಳಿಗ್ಗೆ ದಶರಥ ಪೂಜಾರ್ ಕಾರ್ಣಿಕ ನುಡಿದಿದ್ದಾರೆ. ಮೈಲಾರಲಿಂಗೇಶ್ವರ ದರ್ಶನಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಅಗಮಿಸಿರುವ ಭಕ್ತರು. ಹಲವು ಬಾರಿ ಕಾರ್ಣಿಕದ … Read more

ದಾಖಲೆ 7ನೇ ಬಾರಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಅರಮನೆಯಲ್ಲಿ ದಾಖಲೆಯ 7ನೇ ಬಾರಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಶನಿವಾರ ಮಧ್ಯಾಹ್ನ 2.10ರ ಸುಮಾರಿಗೆ ಕುಂಭ ಲಗ್ನದಲ್ಲಿ ನಂದಿಧ್ವಜಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಪೂಜೆ ಸಲ್ಲಿಸಿದರು. ಈ ಮೂಲಕ ಮುಡಾ ಹಗರಣದಲ್ಲಿ ದಸರಾಗೆ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಸುಳ್ಳಾಗಿಸಿದರು. ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ನಂತರ ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ದೊರೆಯಲಿದೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಸರ್ಕಾರದ ವತಿಯಿಂದ ಮೈಸೂರು ದಸರಾ … Read more

ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿ ಅರೆಸ್ಟ್: ನಾಲ್ವರು ಯುವತಿಯರ ರಕ್ಷಣೆ!

ಈವೆಂಟ್ ಮ್ಯಾನೇಜ್ ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಬೆಂಗಳೂರಿನ ಪಟ್ಟೆಗಾರಪಾಳ್ಯ ನಿವಾಸಿ ಪ್ರಕಾಶ್ ಹಾಗೂ ಪತಿ ಪಾರಿಜಾತ ಬಂಧಿತ ದಂಪತಿ. ರಾಕೇಶ್ ಮತ್ತು ಪೂಜಾ ಎಂದು ಹೆಸರು ಬದಲಿಸಿಕೊಂಡಿದ್ದ ಆರೋಪಿಗಳು ಉದ್ಯೋಗ ಕೊಡಿಸುವ ನೆಪದಲ್ಲಿ ಬಡ ಹೆಣ್ಣುಮಕ್ಕಳನ್ನ ವೇಶ್ಯಾವಾಟಿಕೆ ಅಡ್ಡೆಗೆ ತಳ್ಳುತ್ತಿದ್ದರು. ಉತ್ತರ ಕರ್ನಾಟಕ ಮೂಲದ ಬಡ ಹೆಣ್ಣು ಮಕ್ಕಳನ್ನ ಬೆಂಗಳೂರಿಗೆ ಕರೆತಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸುತ್ತಿದ್ದರು. ಕರ್ನಾಟಕದ ಯುವತಿಯರನ್ನು ತಮಿಳುನಾಡು, … Read more