EXCLUSIVE..”ಸೈಲೆಂಟ್” ಸುನೀಲ,”ರವಿಶಂಕರ್” ಗುರೂಜಿ ಭೇಟಿ ಮಾಡಿದ್ದೇಕೆ…ಆಶೀರ್ವಾದ ಪಡೆದಿದ್ದೇಕೆ…ಇಲ್ಲಿದೆ ಆ ಸೀಕ್ರೇಟ್..

ಶೀಘ್ರವೇ ರಾಜಕೀಯಕ್ಕೆ ಅಧೀಕೃತ ಎಂಟ್ರಿ…..ಜಿಬಿಎ ಎಲೆಕ್ಷನ್‌ ನಲ್ಲಿ ಸ್ಪರ್ದೆ ಖಚಿತ…..ಅಡಚಣೆ ಎದುರಾಗದಿರುವಂತೆ ಹರಿಸಿ ಆಶೀರ್ವದಿಸಿ ಎಂದು ಮನವಿ.. ಸೈಲೆಂಟ್‌ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಬೆಂಗಳೂರು ಪಾತಕ ಜಗತ್ತು ಕಂಡ ಅತ್ಯಂತ ನಟೋರಿಯಸ್ ಹೆಸರು ಸುನೀಲನದು.ಯಾವ ವ್ಯಕ್ತಿಯ ಹೆಸರು ಕೇಳಿದ್ರೆ ಒಂದು ಕ್ಷಣ ಅಲರ್ಟ್‌ ಆಗ್ತಿತ್ತೋ ಅದೇ ಹೆಸರು ಇವತ್ತು ಮತ್ತೊಂದು ಮಗ್ಗಲು ಬದಲಿಸಲಿಕ್ಕೆ ಯತ್ನಿಸುತ್ತಿದೆ. ಈ ಕಾರಣಕ್ಕೆ ಸೈಲೆಂಟ್‌ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಒಂದಷ್ಟು ಅವಧಿಯಿಂದ ಯಾವುದೇ ಆಕ್ಟಿವಿಟಿಸ್‌ ಇಲ್ಲದೆ  ಸೈಲೆಂಟ್‌ ಆಗಿದ್ದ ಸುನೀಲ ಸುದ್ದಿಯಾಗೊಕ್ಕೆ ಕಾರಣವೇ … Read more

DDPU ಪಾಲಾಕ್ಷಪ್ಪ ವರ್ಗಾವಣೆ ರದ್ದಾಗಿದ್ದೇಕೆ..?! ಸಚಿವ ಮಧು ಬಂಗಾರಪ್ಪ “ಆಪ್ತ”ರ ಶ್ರೀರಕ್ಷೆ-ಕೃಪೆನಾ..?

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚೆತ್ತುಕೊಳ್ಳದಿದ್ದರೆ ಅವರ ಇಲಾಖೆಯಲ್ಲಿರಬಹುದಾದ ಕೆಲ ಭ್ರಷ್ಟ ರಿಂದಾಗಿಯೇ ಕೆಟ್ಟ ಹೆಸರು ಪಡೆಯೋದರಲ್ಲಿ ಅನುಮಾನವಿಲ್ಲ. (ಈ ವಿಷಯದ ಬಗ್ಗೆ ಅರಿವಿಲ್ಲದಿದ್ದರೆ…ಅಥವಾ ಅವರ ಗಮನಕ್ಕೆ ಬಾರದೆ ಇದ್ದರೆ ಪರ್ವಾಗಿಲ್ಲ..ಆದರೆ ಗೊತ್ತಿದ್ದರೂ ಸುಮ್ಮನಿದ್ದರೆ ಅದಕ್ಕೆ ಅವರೇ ಅವಕಾಶ ಮಾಡಿಕೊಟ್ಟಂತಲ್ಲವೇ..?) ಏಕೆಂದರೆ ಅವರ ಕಚೇರಿಯಲ್ಲಿರುವ ಕೆಲ “ಆಪ್ತರು-ಅಧಿಕಾರಿ”ಗಳು ಸಚಿವರ ಗಮನಕ್ಕೆ ಬಂದೋ..ಬಾರದೆಯೋ  ಟ್ರಾನ್ಸ್‌ ಫರ್‌‌  ಮಾಡಿಸುವ, ಮಾಡಿದ್ದನ್ನು ಕ್ಯಾನ್ಸಲ್‌ ಮಾಡಿಸುವ, ,ಡೆಪ್ಯುಟೇಷನ್ ಮಾಡುವ ಡೀಲಿಂಗ್‌ ದಂಧೆಯಲ್ಲಿ ತೊಡಗಿಕೊಂಡಿದ್ದಾರೆನ್ನುವ ಮಾತು ಕೇಳಿಬರುತ್ತಿದೆ.. ಶಿಕ್ಷಣ ಇಲಾಖೆಯಲ್ಲಿ ಈ ಡೀಲಿಂಗ್‌ … Read more

ತಿಂಗಳೆಲ್ಲಾ ದುಡಿದ್ರೂ ಸುದ್ದಿಮನೆ ಮಿತ್ರರಿಗೇಕಿಲ್ಲ “ಸಂಪೂರ್ಣ” ಸಂಬಳ..!?

ಇದು… ಕನ್ನಡ ಸುದ್ದಿ ಚಾನೆಲ್‌ ಗಳ ಸಾಲಿಗೆ ಮತ್ತೊಂದಾಗಿ ಸೇರ್ಪಡೆಯಾಗುವ ಸಾಧ್ಯತೆ ಸೃಷ್ಟಿಸಿದ್ದ ಡಿಜಿಟಲ್‌ ಚಾನೆಲ್‌ ವೊಂದರ ಬೆಳವಣಿಗೆ ದೃಷ್ಟಿಯಿಂದ  ನಿಜಕ್ಕೂ ಒಳ್ಳೆಯ  ಸುದ್ದಿಯಲ್ಲ.. ಏಕೆಂದರೆ ಕೆಲವು ವಿಶ್ವಸನೀಯ ಮೂಲಗಳ ಪ್ರಕಾರ, ಅಲ್ಲಿ ದುಡಿಯುತ್ತಿರುವ ಕೆಲವು ಮಾದ್ಯಮ ಸಿಬ್ಬಂದಿಗೆ ವೇತನವನ್ನೇ ನೀಡಿಲ್ಲ ಎನ್ನುವ ಮಾಹಿತಿ  ಸುದ್ದಿಜಗತ್ತಿನಲ್ಲಿ ಪಸರ್‌ ಆಗಿದೆ. ಆರ್ಥಿಕವಾಗಿ ಆ ಡಿಜಿಟಲ್‌ ಚಾನೆಲ್‌ ನ ಸ್ತಿತಿ ಚೆನ್ನಾಗಿದ್ದರೂ ಸಿಬ್ಬಂದಿಯನ್ನು ಮಾತ್ರ ಸಂಬಳ ಕೊಡದೆ ಸತಾಯಿಸಲಾಗುತ್ತಿದೆಯಂತೆ. ಒಂದಷ್ಟು ಜನರಿಗೆ ಸಂಬಳ ಕೊಟ್ಟು ಇನ್ನೊಂದಷ್ಟು ಸಿಬ್ಬಂದಿ ವೇತನವನ್ನು ತಡೆಹಿಡಿದಿಟ್ಟುಕೊಳ್ಳಲಾಗಿದೆಯಂತೆ. … Read more

ಯುವ ಕಾಂಗ್ರೆಸ್ ಮುಖಂಡೆ “ದೀಪಿಕಾ ರೆಡ್ಡಿ” ವಿರುದ್ಧದ “ಮಂಜುನಾಥ ಗೌಡ” ಅವರ ಶಿಸ್ತು ಕ್ರಮ ರಾಜಕೀಯ ಕಾರಣವೋ? ವೈಯುಕ್ತಿಕ ಹಿತಾಸಕ್ತಿನೋ..?1

ಬೆಂಗಳೂರು:ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಭಿನ್ನಮತ-ಗುಂಪುಗಾರಿಕೆ ಹೈಕಮಾಂಡ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಸನ್ನಿವೇಶದಲ್ಲಿ ಯುವ ಕಾಂಗ್ರೆಸ್ ನಲ್ಲಿನ ಕಚ್ಚಾಟ ಬೀದಿಗೆ ಬಿದ್ದಿದೆ.ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಕೆ ಶಿವಕುಮಾರ್ ಬಲಗೈ ಭಂಟ ಎಂದೇ ಕರೆಯಿಸಿಕೊಳ್ಳುವ ಎಚ್.ಎಸ್ ಮಂಜುನಾಥ್ ಗೌಡ ಪಕ್ಷ ತನಗೆ ಕೊಟ್ಟಿರುವ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಆಪಾದನೆಗೆ ಗುರಿಯಾಗಿದ್ದಾರೆ.ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯದ ಮಟ್ಟದಲ್ಲಿ ಲಕ್ಷಾಂತರ ಮತ ಪಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳಲ್ಲಿ ಒಬ್ಬರಾದ ದೀಪಿಕಾ ರೆಡ್ಡಿ ವಿರುದ್ಧ ಹರಿಹಾಯ್ದು ಇಕ್ಕಟ್ಟಿಗೆ ಸಿಲುಕುವ ಪರಿಸ್ತಿತಿ … Read more

ನಾಳೆ ಪತ್ರಕರ್ತ ಪುಟ್ಟಪ್ಪ ಸಾರಥ್ಯದ “ಪೊಲಿಟಿಕಲ್-360” ಲಾಂಚ್

ಮೈಸೂರಿನ ಪತ್ರಕರ್ತ ಮಿತ್ರ ಪುಟ್ಟಪ್ಪ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾನೆ.ಮೊದಲು ಆತನಿಗೊಂದು ಆಲ್ ದಿ ಬೆಸ್ಟ್…ಅಂದ್ಹಾಗೆ ಪೊಲಿಟಿಕಲ್ 360 ಎನ್ನುವ ಡಿಜಿಟಲ್ ಫ್ಲಾಟ್ ಫಾರ್ಮ್ ನ್ನೇ ಚಾನೆಲ್ ಮಾಡ್ಲಿಕ್ಕೆ ಹೋಗಿ ತನ್ನದಲ್ಲದ ತಪ್ಪಿಗೆ ವಿರೋಧ-ವಿವಾದ ಎಲ್ಲವನ್ನು ಮೈಮೇಲೆ ಎಳೆದುಕೊಂಡು, ಬೈಗುಳ-ಹಿಡಿಶಾಪ ಪಡೆದುಕೊಂಡು ಕೆಲಕಾಲ ಅಜ್ನಾತವಾಸಕ್ಕೆ ತೆರಳಿದ್ದ ಪುಟ್ಟಪ್ಪ ಅದು ಕಲಿಸಿಕೊಟ್ಟ ಜೀವನಾನುಭವದಿಂದ ಸಾಕಷ್ಟು ಮಾಗಿ ಇದೀಗ ಮೈ ಕೊಡವಿ ಎದ್ದುನಿಂತಿದ್ದಾನೆ.ಈ ಬಾರಿ ಗೆಲ್ಲಲೇಬೇಕೆನ್ನುವ ಮಹತ್ವಾಕಾಂಕ್ಷೆ-ಛಲ-ಆತ್ಮವಿಶ್ವಾಸ-ಉಮೇದು-ಇರಾದೆ-ಕನಸು ಎಲ್ಲವನ್ನು ಇಟ್ಟುಕೊಂಡು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾನೆ.ಅದು ನಾಳೆಯೇ( 08-05-2026) ಉಡ್ಡಯನಗೊಳ್ಳಲಿದೆ..ಅಂದ್ಹಾಗೆ ಆತನ … Read more

WHY SENIOR J‌OURNALIST LAXMAN HOOGAR QUIT JOURNALISM/ “ಪತ್ರಿಕೋದ್ಯಮ”ದ ಗಟ್ಟಿ ದ್ವನಿ “ಲಕ್ಷ್ಮಣ್ ಹೂಗಾರ್” ಮೌನಿಯಾಗಿದ್ದೇಕೆ..? ಇಲ್ಲಿವೆ ಅವರೇ ನೀಡುವ ಕಾರಣ..!

ಲಕ್ಷ್ಮಣ್ ಹೂಗಾರ್.. …ಕನ್ನಡ ಪತ್ರಿಕೋದ್ಯಮ ಇವತ್ತಿಗೂ ಮಿಸ್ ಮಾಡಿಕೊಳ್ಳುತ್ತಿರುವ ಹೆಸರಿದು.. ಬಹುತೇಕ ಪತ್ರಕರ್ತರು ಅಗತ್ಯಕ್ಕೋ-ಅನಿವಾರ್ಯಕ್ಕೋ ಪರಿಸ್ಥಿತಿ ಜತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಇಂದಿನ ಪ್ರಕ್ಷುದ್ಧ ಪರಿಸ್ತಿತಿಯಲ್ಲಿ ಲಕ್ಷ್ಮಣ್ ಹೂಗಾರ್ ಎನ್ನುವಂತ ಪತ್ರಕರ್ತನ ಅನುಪಸ್ತಿತಿ ತೀವ್ರವಾಗಿ ಕಾಡದೆ ಇರೊಲ್ಲ…ಇತ್ತೀಚೆಗೆ ಸಾಮಾಜಿಕ ಜಾಲತಾಣ ಗಳಲ್ಲಿ  ಲಕ್ಷ್ಮಣ್ ಹೂಗಾರ್ ಅವರ ಕಣ್ಮರೆ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.ಅಷ್ಟೊಂದು ಆಕ್ಟೀವ್ ಆಗಿದ್ದ ಲಕ್ಷ್ಮಣ್  ಎಲ್ಲಿ ಹೋದರು..? ಎಲ್ಲಿದ್ದಾರೆ..? ಏನಾದರು..?ಏನ್ ಮಾಡುತ್ತಿದ್ದಾರೆ..?ಪತ್ರಿಕೋದ್ಯಮದ ಸಂಗ-ಸಹವಾಸ-ಸಾಂಗತ್ಯವನ್ನೇ ಬಿಟ್ರಾ..? ಪರ್ಯಾಯವನ್ನೇನಾದ್ರೂ ಹುಡುಕಿಕೊಂಡಿದ್ದಾರಾ..? ಪತ್ರಿಕೋದ್ಯಮಕ್ಕಿಂತ ಅವರು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರದಲ್ಲೇ ನೆಮ್ಮದಿಯಾಗಿದ್ದಾರಾ..? ಎನ್ನುವ … Read more

ಏಪ್ರಿಲ್,18ಕ್ಕೆ “ವಿಸ್ತಾರ” ರೀ ಲಾಂಚ್…ಶೀಘ್ರವೇ “ಫ್ರೀಡಂ” ಲೋಕಾರ್ಪಣೆ

ಭವಿಷ್ಯದ ಪರಿಣಾಮಗಳೇನೇ ಇರಲಿ,ಕನ್ನಡ ಮಾದ್ಯಮ ಲೋಕ ಎರಡು ಬೆಳವಣಿಗೆಗಳಿಗೆ ಸಾಕ್ಷಿ ಆಗುತ್ತಿದೆ.  ಒಂದು ಕೆಲ ವರ್ಷಗಳಿಂದೆ ಅಬ್ಬರದಲ್ಲಿ ಆರಂಭವಾದಷ್ಟೇ ವೇಗದಲ್ಲಿ ಬಾಗಿಲು ಮುಚ್ಚಿಕೊಂಡ ವಿಸ್ತಾರ ನ್ಯೂಸ್ ಚಾನೆಲ್ ಏಳು ಬೀಳುಗಳ ತರುವಾಯ ರೀ ಲಾಂಚ್ ಆಗುತ್ತಿರುವುದು ಮೊದಲ ಸಂಗತಿಯಾದರೆ ಡಿಜಿಟಲ್ ಫ್ಲಾಟ್ ಫಾರ್ಮ್ ನಲ್ಲಿ ಮೂಡಿಬರುತ್ತಿದ್ದ ಫ್ರೀಡಂ ನ್ಯೂಸ್ ಚಾನೆಲ್ ಆಗಿ ಲೋಕಾರ್ಪಣೆಗೊಳ್ಳಲು ಅಣಿಯಾಗುತ್ತಿದೆ. ಕನ್ನಡ ಫ್ಲ್ಯಾಶ್ ನ್ಯೂಸೇ ,ವಿಸ್ತಾರ ನ್ಯೂಸ್ ಚಾನೆಲ್ ಬಗ್ಗೆ ಈ ಹಿಂದೆನೇ ಸಾಕಷ್ಟು ಬರೆದಿತ್ತು.ವಿಸ್ತಾರದ ಭವಿಷ್ಯ ಡೋಲಾಯಮಾನವಾದ ಸನ್ನಿವೇಶದಲ್ಲೇ ಎಚ್ಚರಿಸುವ ಕೆಲಸ … Read more

“ಅರ್ಹ”ರನ್ನು ಕಡೆಗಣಿಸ್ತಾ ಚಂದನವನ ಕ್ರಿಟಿಕ್‌ ಅವಾರ್ಡ್ಸ್‌?!

ಚಂದನವನದಲ್ಲಿ ನೀಡಲಾಗುವ ವಿಮರ್ಷಕರ ಪ್ರಶಸ್ತಿಗೆ ವಿವಾದದ ಕಳಂಕ ತಟ್ಟಿದಂತಿದೆ. ಚಿತ್ರರಂಗದ ವಿದ್ಯಾಮಾನಗಳನ್ನು ದಶಕಗಳಿಂದಲೂ ಗಮನಿಸುತ್ತಾ,ಅದರ ಒಳಹೊರಗನ್ನು ನೇರ-ನಿಷ್ಟೂರ-ತೀಕ್ಷ್ಣವಾಗಿ  ವರದಿ ಮಾಡುತ್ತಿದ್ದ ಬಹುತೇಕ ಹಿರಿಯ ಸಿನಿ ಪತ್ರಕರ್ತರನ್ನೇ ಪಕ್ಕ ಕ್ಕಿಟ್ಟು ಆಯ್ದ ಕೆಲವರೇ ಪ್ರಶಸ್ತಿ ಆಯ್ಕೆ- ಪ್ರಧಾನ ಮಾಡಿ ಮುಗಿಸಿದ್ದಾರೆನ್ನುವ ಅಸಮಾಧಾನ ಸ್ಯಾಂಡಲ್ವುಡ್‌ ನಲ್ಲಿ  ಹೊಗೆಯಾಡತೊಡಗಿದೆ. ಚಂದನವನದ ಸಿನಿ ಪತ್ರಕರ್ತರ ಒಳಗೆ ಇಷ್ಟು ದಿನ ಕುದಿಯುತ್ತಿದ್ದ ಬಂಡಾಯ-ಮುನಿಸು-ವ್ಯತ್ಯಾಸಗಳು ಅದ್ಹೇಕೋ ಸ್ಪೋಟಗೊಳ್ಳುವ ಲಕ್ಷಣ ಗೋಚರಿಸುವಂತಿದೆ. ಹೌದು..ಚಂದನವನದಲ್ಲಿ ಸಿನಿ ಪತ್ರಕರ್ತರೇ ಒಗ್ಗೂಡಿ,ಪ್ರತಿಭೆ-ಸಾಮ ರ್ಥ್ಯ ವುಳ್ಳ ಕಲಾವಿದರು-ತಂತ್ರಜ್ಞರಿಗೆ  ತೂಗಿ ಅಳೆದು ನೀಡುತ್ತಾ ಬಂದಿ … Read more

ಎಂತೆಂಥವರ ನಡುವೆ ಇಂಥವರು ನೆನಪಾಗೊಲ್ವಾ..!?

ಇವತ್ತು ಬೀದರ್‌ ನಲ್ಲಿ ನಡೆದ ಪತ್ರಿಕಾ ಸಮ್ಮೇಳನದಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಪ್ರಶಸ್ತಿಗೆ  ನಿಜವಾಗ್ಲೂ ಯೋಗ್ಯವಾದ-ಸಮರ್ಥವಾದವರಿಗೆ ನಮ್ಮದೊಂದು ಪ್ರಾಮಾಣಿಕವಾದ ಮನಸಿನ ಅಭಿನಂದನೆ..ಪ್ರಶಸ್ತಿಗೆ ಅರ್ಹರೇ ಅಲ್ಲದ ಒಂದಷ್ಟು ಜನರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ ಎನ್ನುವ ಒಂದಷ್ಟು ಪತ್ರಕರ್ತರ ಆರೋಪಗಳ ಸನ್ನಿವೇಶದಲ್ಲೇ  ಯಾಕೋ ಆ ಇಬ್ಬರು ಪತ್ರಕರ್ತರು ತುಂಬಾ ನೆನಪಾದರು.ನಮ್ಮ ನಡುವೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸಾಕ್ಷಿಪ್ರಜ್ಞೆಯಂತೆ ಇರುವ ಎಷ್ಟೋ ಪತ್ರಕರ್ತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಯಾ ಎನ್ನುವ ನೋವು ಕೂಡ ಕಾಡಿತು.( ಸಧ್ಯದಲ್ಲಿ ಆ ಇಬ್ಬರು ಸಕ್ರೀಯ ಪತ್ರಿಕೋದ್ಯಮದಲ್ಲಿ ಇಲ್ಲವಾದರೂ … Read more

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

Bagalkot

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಈ ರಾಜಕೀಯ ಭರಾಟೆಯ ನಡುವೆ ಬಾಗಲಕೋಟೆ ಜಿಲ್ಲೆಯ ಪ್ರಮುಖ, ದಶಕಗಳಷ್ಟು ಹಳೆಯದಾದ ಜ್ವಲಂತ ಸಮಸ್ಯೆಗಳ ದೊಡ್ಡ ಪಟ್ಟಿಯೊಂದು ಮುನ್ನೆಲೆಗೆ ಬಂದಿದ್ದು, ರಾಜಕೀಯ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಚುನಾವಣೆ ಬಂದಾಗಲೆಲ್ಲಾ ರಾಜಕಾರಣಿಗಳು ಭರವಸೆಗಳ … Read more