ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 830 ವಾಣಿಜ್ಯ ಕಟ್ಟಡಗಳು ಸೀಜ್..

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ  ಮುನೀಶ್ ಮೌದ್ಗಿಲ್ ರವರು ತಿಳಿಸಿದ್ದಾರೆ. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು … Read more

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

ಬೆಂಗಳೂರು(ದೊಡ್ಡಬಳ್ಳಾಪುರ): ಕ್ರಮ ಕೈಗೊಳ್ಳಲು ಸಾಕ್ಷ್ಯಗಳನ್ನು ಕೇಳುತ್ತಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡರ ಮುಂದೆ ಈಗ  ಎಲ್ಲಾ ಸಾಕ್ಷ್ಯಗಳಿವೆ..ಆದರೆ ನಿರ್ದಾಕ್ಷಿಣ್ಯ  ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ..? ಇದು ಕನ್ನಡ ಫ್ಲ್ಯಾಶ್ ನ್ಯೂಸ್ ಸಚಿವರಿಗೆ ಹಾಕುತ್ತಿರುವ ನೇರ ಪ್ರಶ್ನೆ.. ಏಕಂದ್ರೆ ದೊಡ್ಡ ಬಳ್ಳಾಪುರದ  ದೊಡ್ಡಬೆಳವಂಗಲ ಗ್ರಾಮದ ಹುಲಿಕುಂಟೆಯ ಸರ್ವೆ ನಂಬರ್ 150ರಲ್ಲಿ ಖಾಸಗಿ ಬಿಲ್ಡರ್ಸ್ ಗಳ ಲಾಭಿಗೆ ಒಳಗಾಗಿ ಖಾತೆ ವರ್ಗಾವಣೆ ಮಾಡಿದ ಆರೋಪಕ್ಕೆ ತುತ್ತಾಗಿರುವ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ ಹಾಗೂ ತಹಸಿಲ್ದಾರ್ ವಿಭಾ ರಾಠೋಡ್  ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳು … Read more

“ವಿಸ್ತಾರ” ಪುನರಾಂಭಕ್ಕೆ ದೊಡ್ಡ ಹಿನ್ನಡೆ..!! “ಚಾನೆಲ್” ಮಾಲೀಕತ್ವದ ಕಂಪೆನಿಯ ಸ್ವತ್ತುಗಳು ಜಪ್ತಿ..!?

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ವಿಸ್ತಾರ ನ್ಯೂಸ್ ಚಾನೆಲ್ ನ ನಿರ್ದೇಶಕರಲ್ಲಿ ಒಬ್ಬರೆನ್ನಲಾಗಿದ್ದ ಹರಿಪ್ರಕಾಶ್ ಕೋಣೆಮನೆ ವಿರುದ್ಧ ಮಾಹಿತಿ ಮತ್ತು  ಪ್ರಸಾರ ಸಚಿವಾಲಯಕ್ಕೆ ದೂರು ಸಲ್ಲಿಕೆಯಾಗಿದೆ ಎಂದು ಮಾದ್ಯಮಗಳು ವರದಿ ಮಾಡಿವೆ.ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ಪಾಲುದಾರರೂ ಆಗಿರುವ ಮೈಸೂರು ಮರ್ಕಂಟೈಲ್  ಕಂಪೆನಿಯ  ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಡಾ.ಎಚ್.ಎಸ್ ಶೆಟ್ಟಿ ಅವರು ದೂರು ನೀಡಿದ್ದಾರೆನ್ನಲಾಗಿದ್ದು,ಅನುಮತಿ ಇಲ್ಲದೆ ಕಂಪೆನಿಯ ಷೇರುಗಳನ್ನು ಹಸ್ತಾಂತರಿಸಿದ್ದಾರೆನ್ನುವುದು ಕೋಣೆಮನೆ ಮೇಲೆ ಕೇಳಿಬಂದಿರುವ ಆಪಾದನೆ. ಅನುಮತಿ ಇಲ್ಲದೆ ಷೇರುಗಳನ್ನು ಇನ್ನೊಬ್ಬರಿಗೆ ಮಾರಬಾರದೆನ್ನುವುದು ಕಂಪೆನಿ ರೂಲ್ಸ್.ಆದರೆ … Read more

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ಯಾಂಪಸ್ ನಲ್ಲಿ ಇವತ್ತು ಒಂದೇ ವಿಷಯದ ಬಗ್ಗೆ ಚರ್ಚೆ..ಅದು ಪ್ರಧಾನ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಕಚೇರಿ ಮೇಲೆ ನಡೆದ ಇ.ಡಿ ರೇಡ್.. ಬಹುಷಃ  ಬಿಬಿಎಂಪಿಯಲ್ಲೇ ಪ್ರಹ್ಲಾದ್ ಅವರಷ್ಟು ಪ್ರಭಾವಶಾಲಿ ಅಧಿಕಾರಿ ಇನ್ನೊಬ್ಬನಿರಲಾರರೇನೋ..?!.ಅಂಥಾ ಅಧಿಕಾರಿಗೇನೆ ಇ.ಡಿ ತೋಡಿದ ಖೆಡ್ಡಾಕ್ಕೆ ಕೇವಲ ಬಿಬಿಎಂಪಿಯಷ್ಟೇ ಅಲ್ಲ, ಸರ್ಕಾರವೇ ಒಂದ್ ಕ್ಷಣ ಅದುರೋಗಿದೆ.ಏಕಂದ್ರೆ ಎಲ್ಲರಿಗು ಗೊತ್ತಿರುವಂತೆ ಪ್ರಹ್ಲಾದ್  ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅತ್ಯಾಪ್ತ ವರ್ಗದಲ್ಲಿ ಗುರುತಿಸಿಕೊಂಡಿದ್ದ ಅಧಿಕಾರಿ. ನಿಮಗೆ ಗೊತ್ತಿರಲಿ ಅಂಥಾ ಹೇಳುತ್ತೇವೆ ಕೇಳಿ, … Read more

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಹೇಳಿ ಸಚಿವ ಕೃಷ್ಣಭೈರೇಗೌಡ ಅವರೇ, ದೊಡ್ಡಬಳ್ಳಾಪುರ AC ದುರ್ಗಶ್ರೀ, ತಹಸಿಲ್ದಾರ್  ವಿಭಾ ವಿದ್ಯಾ ರಾಥೋಡ್  ವಿರುದ್ಧ ಕ್ರಮ ಕೈಗೊಳ್ಳಲು ಇದಕ್ಕಿಂತ ಸಾಕ್ಷ್ಯಬೇಕಾ?!   ದೊಡ್ಡಬಳ್ಳಾಪುರ: ಯಾರೇ ಅಧಿಕಾರಿಗೆ ಆಗಲಿ,ಯಾವುದೇ ಹೊಸ ಸ್ಥಳಕ್ಕೆ ಬಂದು,ಹೊಸ ಜವಾಬ್ದಾರಿ ವಹಿಸಿಕೊಂಡರೂ ಅಲ್ಲಿನ ವಾತಾವರಣಕ್ಕೆ ಒಗ್ಗಿ ಹೋಗಲು,ಕೆಲಸ ಅರ್ಥ ಮಾಡಿಕೊಳ್ಳಲು ಒಂದಷ್ಟು ಕಾಲಾವಕಾಶ ಬೇಕಾಗುತ್ತದೆ.ಆದರೆ ದೊಡ್ಡಬಳ್ಳಾಪುರ ಉಪವಿಭಾಗಕ್ಕೆ ಎಸಿ ಆಗಿ ಬಂದ ದುರ್ಗಶ್ರೀ ಅವರ ವಿಷಯದಲ್ಲಿ ಆಗಿದ್ದೇ ಸಂಪೂರ್ಣ ಉಲ್ಟಾ.ತಾಲುಕು ಕಚೇರಿ ಮೂಲಗಳ ಪ್ರಕಾರವೆ ಕಚೇರಿಗೆ ಬಂದು ತುಂಬಾ ಸಮಯವೇನು ಆಗದಿದ್ದರೂ ದುರ್ಗಶ್ರೀ ಮೇಡಮ್ … Read more

EXCLUSIVE.. ಹೊಸ ವರ್ಷದಂದೇ ಸರ್ಕಾರದಿಂದ 4 ಸಾರಿಗೆ ನಿಗಮಗಳಿಗೆ 2,000 ಕೋಟಿ ಬಂಪರ್ ಗಿಫ್ಟ್..

ವಾ. ಸಾರಿಗೆ-646 ಕೋಟಿ, ಕ.ರಾ.ರ.ಸಾ.ನಿಗಮ-623.80 ಕೋಟಿ, ಬೆಂ.ಮ.ಸಾ.ಸಂಸ್ಥೆ-589.20 ಕೋಟಿ, ಕ.ಕ.ರಾ.ರ.ಸಾರಿಗೆಗೆ 141 ಕೋಟಿ ಬಂಪರ್. ಬೆಂಗಳೂರು: ಬಿಎಂಟಿಸಿ,ಕೆಎಸ್ ಆರ್ ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರ ಹೊಸ ವರ್ಷದ ಬಂಪರ್ ಗಿಫ್ಟ್ ನೀಡಿದೆ. 2025ನ್ನು ಸಂಭ್ರಮದಿಂದ ಆಚರಿಸಿಕೊಳ್ಳಲು ಅನುವಾಗುವಂತೆ ನಾಲ್ಕು ನಿಗಮಗಳಿಗೆ 2000 ಕೋಟಿ ಹಣ ಬಿಡುಗಡೆ ಮಾಡಿದೆ.ಈ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.ಪರಿಸ್ಥಿತಿ ಹೀಗೆಯೇ ಮುಂದುವ ರುದ್ರೆ … Read more

EXCLUSIVE..ತೆಲಂಗಾಣದ ನಂತರ ಉತ್ತರ ಪ್ರದೇಶ-ಆಂದ್ರಪ್ರದೇಶಗಳಲ್ಲೂ “ಶಕ್ತಿ” ಯೋಜನೆ ಅನುಷ್ಟಾನ..!

ಜನವರಿ ಮೊದಲ ವಾರದಲ್ಲಿ ಆಂದ್ರಪ್ರದೇಶ ಮತ್ತು ಫೆಬ್ರವರಿ 2ನೇ ವಾರದಲ್ಲಿ ಉತ್ತರ ಪ್ರದೇಶ ರಾಜ್ಯಗಳ ನಿಯೋಗ ಕರ್ನಾಟಕಕ್ಕೆ ಭೇಟಿ ಸಾಧ್ಯತೆ ಬೆಂಗಳೂರು/ತೆಲಂಗಾಣ: ಕರ್ನಾಟಕ(KARNATAKA)ವನ್ನು ಅನೇಕ ವಿಚಾರಗಳಲ್ಲಿ ಕೆಟ್ಟದಾಗಿ ಬಿಂಬಿಸುವ ಪ್ರವೃತ್ತಿ ರಾಜಕೀಯದಲ್ಲಿ ನಡೆಯುತ್ತಲೇ ಬಂದಿದೆ.ಕರ್ನಾಟಕದಲ್ಲಿ ಜಾರಿಗೊಳಿಸಲಾದ “ಉಚಿತ”ಗಳಿಂದ ರಾಜ್ಯ ಬರ್ಬಾದ್ ಆಗಿದೆ.ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಂಬಿಸಿ ಅದನ್ನು  ಚುನಾವಣೆ ವೇಳೆ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸೇರಿದಂತೆ ಅನೇಕ ವಿಪಕ್ಷಗಳು ಚುನಾವಣಾ ಅಸ್ತ್ರವನ್ನಾಗಿಸಿಕೊಂಡಿದ್ದವು.ಆದರೆ ತೆಲಂಗಾಣ(TELANGANA) ದಲ್ಲಿ ಕಾಂಗ್ರೆಸ್(CONGRESS) ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಘೋಷಿಸಿದ್ದ ಭರವಸೆಗಳನ್ನು  ಜಾರಿ ಮಾಡಿದ ಬೆನ್ನಲ್ಲೇ … Read more

ಪಿಯು ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರನ್ನೇ ದಾರಿ ತಪ್ಪಿಸುವ, ತಪ್ಪೆಸಗುವಂತೆ ಪ್ರಚೋದಿಸುವ ಹಿತಾಸಕ್ತಿಗಳಿವೆಯಾ?

ನಿಜಕ್ಕೂ ದುರ್ಬಳಕೆ ಆಗುತ್ತಿದೆಯಾ.. ದಕ್ಷ-ಪ್ರಾಮಾಣಿಕ ಐಎಎಸ್ ಅಧಿಕಾರಿ ಸಿಂಧೂ ರೂಪೇಶ್ ಅವರ ಒಳ್ಳೆಯತನ? ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ 18ನೇ ತಿರುವಿನಲ್ಲಿರುವ  ಪದವಿ ಪೂರ್ವ ಶಿಕ್ಷಣ ಇಲಾಖೆ (DEPARTMENT OF SCHOOL EDUCATION-PRE UNIVERSITY) ಗೆ  ಶೈಕ್ಷಣಿಕವಾಗಿ ತನ್ನದೇ ಆದ ಹಿನ್ನಲೆಯಿದೆ.ಭವ್ಯ ಇತಿಹಾಸವಿದೆ. ನಿರ್ದೇಶಕರಾಗಿ ಬರುವ ಅಧಿಕಾರಿಗಳು ತಮ್ಮದೇ ಕನಸು-ಆಶಯ-ನಿರೀಕ್ಷೆಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಲೇ ಬಂದಿದ್ದಾರೆ.ಶೈಕ್ಷಣಿಕವಾಗಿ ಅನುಕೂಲವಾಗಬಲ್ಲ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಸಹಕಾರಿಯಾಗಬಲ್ಲ  ಒಂದಷ್ಟು ಕೆಲಸಗಳನ್ನು ಮಾಡುತ್ತಲೇ ಬಂದಿದ್ದಾರೆ.ಅದೇ ನಿಟ್ಟಿನಲ್ಲಿ ಈಗಿನ ನಿರ್ದೇಶಕರ ಪ್ರಯತ್ನ ಮುಂದುವರೆದಿದ್ದರೂ ಅವರನ್ನು … Read more

Deepavali bumper: KSRTC ಗೆ 18 ಕೋಟಿ ಗಳಿಕೆ, ಒಂದೇ ದಿನ ಸಾರ್ವಕಾಲಿಕ ದಾಖಲೆಯ ಟಿಕೆಟ್ ಬುಕ್ಕಿಂಗ್

ಬೆಂಗಳೂರು: ನಷ್ಟದ ಹೊರೆಗೆ ಸಿಲುಕಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KARNATAKA STATE ROAD TRANSPORT CORPORATION) ಗೆ ದೀಪಾವಳಿ ಹಬ್ಬ(DEEPAWALI FESTIAVL) ಸ್ವಲ್ಪ ಮಟ್ಟದ ಚೇತರಿಕೆ ನೀಡಿದೆ.ಇತ್ತೀಚಿನ ವರ್ಷಗಳಲ್ಲಿ ದಾಖಲೆ ಪ್ರಮಾಣದ ಎನ್ನಬಹುದಾದ(ಆದರೆ ಸಾರ್ವಕಾಲಿಕ ದಾಖಲೆಯಲ್ಲ) ಗಳಿಕೆಯನ್ನು ಕೆಎಸ್ ಆರ್ ಟಿಸಿ ಮಾಡಿದೆ. ಗಳಿಕೆಯಲ್ಲಷ್ಟೇ ಅಲ್ಲ, ಪ್ರಯಾಣಿಕರ ಸಂಖ್ಯೆ ಮತ್ತು ಅವತಾರ್ ನಲ್ಲಿ ಟಿಕೆಟ್ ಬುಕ್ಕಿಂಗ್ ನಲ್ಲೂ ಹೊಸ ವಿಕ್ರಮವನ್ನೇ ಸಾಧಿಸಿದೆ. ದೀಪಾವಳಿ ಹಬ್ಬದಾಚರಣೆಯ ಹಿಂದೆ ಮುಂದಿನ ದಿನಗಳಲ್ಲಿ ಸಹಜವಾಗಿಯೇ ಸಾಲು ಸಾಲು ರಜೆಗಳು ಬರುವುದರಿಂದ … Read more

Deepavali pollution Decrease! ಬೆಂಗಳೂರಿಗೆ ಬೆಂಗಳೂರೇ ಪಟಾಕಿ ಹೊಗೆಯಲ್ಲಿ ಕಳೆದೋದರೂ ಕಳೆದ ವರ್ಷದಷ್ಟು ಮಾಲಿನ್ಯ ಆಗಿಲ್ವಂತೆ!?

ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(POLLUTION CONTROLE BOARD) ಕೊಟ್ಟಿರುವ ವಿವರಣೆಯನ್ನು ನಂಬಬೇಕೋ..ಬಿಡಬೇಕೋ ಗೊತ್ತಾಗ್ತಿಲ್ಲ. ವಾಯುಮಾಲಿನ್ಯ(AIR POLLUTION) ಹಾಗೂ ಶಬ್ದ ಮಾಲಿನ್ಯ(NOISE POLLUTION) ವನ್ನು ಮಾನಿಟರ್ ಮಾಡುವ ಯಂತ್ರಗಳೇ ತಾಂತ್ರಿಕವಾಗಿ ಹಾಳಾಗಿವೆಯೇ..? ಅಥವಾ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ..? ಅಥವಾ ದೋಷಪೂರಿತವಾದ ಮಾಹಿತಿ ಕೊಡುತ್ತಿವೆಯೋ..ಒಂದೂ ಗೊತ್ತಾಗ್ತಿಲ್ಲ.ಏಕೆಂದರೆ ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ  ಬೆಂಗಳೂರಲ್ಲಿ ಪಟಾಕಿ(CRACKERS) ಸಿಡಿಸಲಾಗಿದ್ದರೂ  ವಾಯುಮಾಲಿನ್ಯ ಕಳೆದ ಬಾರಿಗಿಂತ ಬಹುತೇಕ ಈ ಬಾರಿ ಕಡಿಮೆಯಾಗಿದೆಯಂತೆ.ಇದನ್ನು ಸ್ವತಹ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೇ ಹೇಳ್ತಿದೆ. ಪಟಾಕಿ ಸಿಡಿಸುವ ಮುನ್ನ … Read more