shivamogga politics exclusive..talkwar over kseshwarappa from mla chennabasappa(chenni) “ಶಿಷ್ಯನಿಂದಲೇ “ಗುರು”ವಿಗೆ “ಗುನ್ನಾ”..ಕೆಎಸ್‌ ಈಶ್ವರಪ್ಪ ವಿರುದ್ಧ ಎಮ್ಮೆಲ್ಲೆ ಚನ್ನಬಸಪ್ಪ ಹರಿಹಾಯ್ದಿದ್ದೇಕೆ..? ಹತಾಷೆಯ ಹೇಳಿಕೆಯೋ..!ಸೋಲಿನ ಭೀತಿಯ ಮುನ್ಸೂಚನೆನೋ..?

ಶಿವಮೊಗ್ಗ:ರಾಜಕಾರಣದಲ್ಲಿ ಎಲ್ಲವೂ ಸಹ್ಯ..ಸಾಧ್ಯ ಎನ್ನುವ ಮಾತಿದೆ..ಜತೆಗಿದ್ದವರು ದೂರವಾಗ್ತಾರೆ..ಶತೃಗಳು ಮಿತ್ರರಾಗ್ತಾರೆ..ಹಾಗೆಯೇ ಮಿತ್ರರ ನಡುವೆ ವೈರತ್ವ ಬೆಳೆದುಬಿಡುತ್ತೆ..ಆದರೆ ಇದು ಶಾಶ್ವತವಲ್ಲ ಎನ್ನೋದು ಮಾತ್ರ ಸತ್ಯ.ಪಕ್ಷ-ನಾಯಕರು ಎಂದುಕೊಂಡು ಕಾರ್ಯಕರ್ತರು ಕಚ್ಚಾಡಿಕೊಳ್ತಿದ್ರೆ ನಾಯಕರು ಮಾತ್ರ ತಮ್ಮ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ತಿರ್ತಾರೆ..ಇದು ರಾಜಕೀಯದ ಭಾಗ ಬಿಡಿ.. ಇದಕ್ಕೆ ಶಿವಮೊಗ್ಗದ ರಾಜಕಾರಣವೂ ಹೊರತಲ್ಲ..ಏಕಂದ್ರೆ, ಯಾವ ಶಿಷ್ಯನಿಗೆ ಯಾರು, ರಾಜಕೀಯ ಗುರು ಅಂಥ ಕರೆಸಿಕೊಂಡಿದ್ರೋ ಅದೇ ಗುರುವನ್ನು ಇವತ್ತು ಅವರ ಶಿಷ್ಯೋತ್ತಮ ಎನಿಸಿಕೊಂಡಿದ್ದವರೇ ಸಾರ್ವಜನಿಕವಾಗಿ ವಾಚಾಮಗೋಚರವಾಗಿ ಟೀಕಿಸುವ,ಎಚ್ಚರಿಸುವ ಮಾತನ್ನಾಡಿದ್ದಾರೆ.ಇದು ಶಿವಮೊಗ್ಗ ರಾಜಕಾರಣದ ಮಟ್ಟಿಗೆ ಮಾತ್ರ ಅತ್ಯಂತ ಗಂಭೀರ ಹಾಗೂ … Read more

“ಚಿಂತಕರ ಚಾವಡಿ”(ವಿಧಾನಪರಿಷತ್‌) ಗೆ ಕ್ರೇಜಿಸ್ಟಾರ್‌ ರವಿಚಂದ್ರನ್‌..ಅಧಿಕಾರಕ್ಕೆ ಆಸೆಪಡದ “ಕನಸುಗಾರ”ನಿಗೆ MLC ಭಾಗ್ಯ..!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ಮಾಪಕ ನಿರ್ದೇಶಕ ಹಾಗೂ ತಂತ್ರಜ್ಞ ವಿ. ರವಿಚಂದ್ರನ್ ಅವರಿಗೆ ವಿಧಾನ ಪರಿಷತ್ ಪ್ರವೇಶಿಸುವ ಅವಕಾಶಗಳು ದಟ್ಟವಾಗಿವೆ. ಕಾಂಗ್ರೆಸ್ ಹೈಕಮಾಂಡ್ ರವಿಚಂದ್ರನ್ ಅವರ ನಾಮನಿರ್ದೇಶನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಇದರ ಜೊತೆಗೆ ಇನ್ನಿಬ್ಬರಿಗೂ ವಿಧಾನ ಪರಿಷತ್ ಪ್ರವೇಶಿಸುವ ಅವಕಾಶ ಬಹುತೇಕ ನಿಕ್ಕಿಯಾಗಿದೆಯಂತೆ. ಇತ್ತೀಚೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರವಿಚಂದ್ರನ್ ಅವರ ನಡುವೆ ಒಂದಷ್ಟು ಸುತ್ತಿನ ಮಾತುಗಳು ಮಾತುಕತೆಗಳು ನಡೆದಿದ್ದರ ಇಂದಿನ ರಹಸ್ಯವೇನು ಎನ್ನುವುದು ಈ ನಾಮನಿರ್ದೇಶನದಿಂದ ಸ್ಪಷ್ಟವಾಗಿದೆ. … Read more

EXCLUSIVE:”ಅಪ್ಪ” “ಕಾಂಗ್ರೆಸ್” ನಲ್ಲಿ……”ಮಗ” “ಬಿಜೆಪಿ”ಗೆ …ಪೊಲಿಟಿಕಲ್‌ ಗೇಮ್‌ ನಲ್ಲಿ ಆರ್‌.”ಅಶೋಕ್” ಸಕ್ಸೆಸ್..!

ರಾಜಕೀಯವೇ ಹಾಗೆ..ಇಲ್ಲಿ ಎಲ್ಲವೂ ಹೀಗೆಯೇ ನಡೆಯುತ್ತೆ ಎಂದು ಹೇಳೊಕ್ಕೆ ಸಾಧ್ಯವೇ ಇಲ್ಲ…ಈಗ ಇದ್ದ ಸ್ಥಿತಿ ಮರುಕ್ಷಣ ಇರೊಲ್ಲ..ಈಗಿನ ಶತೃ ಮರುಕ್ಷಣ ಮಿತ್ರನಾಗುತ್ತಾನೆ..ಮಿತ್ರ ಮರುಕ್ಷಣದಲ್ಲಿ ಶತೃವಾಗಿಬಿಡುತ್ತಾನೆ…ಶತೃವಿನ ಶತೃ..ಮಿತ್ರನಾಗಿಬಿಡ್ತಾನೆ..ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ ಇದೆ..ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ರಾಜಕೀಯ ಪ್ರಹಸನ ಈ ಬಗ್ಗೆ ಬರೆಯುವಂತೆ ಮಾಡಿದೆ.ತನ್ನ ರಾಜಕೀಯ ಚಾಣಾಕ್ಷತನದಿಂದ ಆರ್.‌ಅಶೋಕ್‌ ತನ್ನ ರಾಜಕೀಯ ಭವಿಷ್ಯಕ್ಕೆ ಸವಾಲಾಗಬಹುದಾಗಿದ್ದ ಸಮಸ್ಯೆಯೊಂದನ್ನು ಅನಾಯಾಸವಾಗಿ ಬಗೆಹರಿಸಿಕೊಂಡಿದ್ದಾರೆ. ಅದ್ಹೇಗೆ ಅನ್ತೀರಾ.. ಅದರ ರೋಚಕ ಕಥಾನಕ ನೀವೇ ಓದ್ಬಿಡಿ.. ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪ್ರಹಸನ … Read more

EXCLUSIVE..”ಸೈಲೆಂಟ್” ಸುನೀಲ,”ರವಿಶಂಕರ್” ಗುರೂಜಿ ಭೇಟಿ ಮಾಡಿದ್ದೇಕೆ…ಆಶೀರ್ವಾದ ಪಡೆದಿದ್ದೇಕೆ…ಇಲ್ಲಿದೆ ಆ ಸೀಕ್ರೇಟ್..

ಶೀಘ್ರವೇ ರಾಜಕೀಯಕ್ಕೆ ಅಧೀಕೃತ ಎಂಟ್ರಿ…..ಜಿಬಿಎ ಎಲೆಕ್ಷನ್‌ ನಲ್ಲಿ ಸ್ಪರ್ದೆ ಖಚಿತ…..ಅಡಚಣೆ ಎದುರಾಗದಿರುವಂತೆ ಹರಿಸಿ ಆಶೀರ್ವದಿಸಿ ಎಂದು ಮನವಿ.. ಸೈಲೆಂಟ್‌ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಬೆಂಗಳೂರು ಪಾತಕ ಜಗತ್ತು ಕಂಡ ಅತ್ಯಂತ ನಟೋರಿಯಸ್ ಹೆಸರು ಸುನೀಲನದು.ಯಾವ ವ್ಯಕ್ತಿಯ ಹೆಸರು ಕೇಳಿದ್ರೆ ಒಂದು ಕ್ಷಣ ಅಲರ್ಟ್‌ ಆಗ್ತಿತ್ತೋ ಅದೇ ಹೆಸರು ಇವತ್ತು ಮತ್ತೊಂದು ಮಗ್ಗಲು ಬದಲಿಸಲಿಕ್ಕೆ ಯತ್ನಿಸುತ್ತಿದೆ. ಈ ಕಾರಣಕ್ಕೆ ಸೈಲೆಂಟ್‌ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಒಂದಷ್ಟು ಅವಧಿಯಿಂದ ಯಾವುದೇ ಆಕ್ಟಿವಿಟಿಸ್‌ ಇಲ್ಲದೆ  ಸೈಲೆಂಟ್‌ ಆಗಿದ್ದ ಸುನೀಲ ಸುದ್ದಿಯಾಗೊಕ್ಕೆ ಕಾರಣವೇ … Read more

ಎಲ್ಲಿಯ “ವಿಜಯ್”…! ಎಲ್ಲಿಯ “ಉಪೇಂದ್ರ”..! ಇಬ್ಬರ  ಹೋಲಿಕೆ ಸರಿನಾ..?

ಪಕ್ಷ ಕಟ್ಟಿದ ದಿನದಿಂದಲೇ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದ ವಿಜಯ್‌ ಜತೆ, ಮನೆಯಲ್ಲೇ ಕೂತು ಬದಲಾವಣೆ ಬಗ್ಗೆ ಕಂಠಶೋಷಣೆ ಮಾಡಿಕೊಳ್ಳುವ  ಉಪೇಂದ್ರ ಹೋಲಿಕೆ ಸರಿನಾ..! ತಮಿಳ್ನಾಡು(tamilnadu) ರಾಜಕೀಯದಲ್ಲಿ ಬಹುದೊಡ್ಡ ಕ್ರಾಂತಿ ನಡೆದು ಸಿನೆಮಾ ನಟ(cinema star) ವಿಜಯ್‌ (vijay)  ಸಿಎಂ ಆಗುತ್ತಿದ್ದಂತೆ ನಮ್ಮ ಕರ್ನಾಟಕದಲ್ಲಿ  ಮಾದ್ಯಮಗಳಿಗೆ (karnataka medais)ಅದ್ಹೇಕೆ, ರಿಯಲ್‌ ಸ್ಟಾರ್‌ ಹಾಗೂ ಬುದ್ದಿವಂತ ನಟ ಉಪೇಂದ್ರ (real star upendra) ಅವರ ಬೆನ್ನು ಹತ್ತಿ ಕಾಡುವ ಕೆಟ್ಟ ಛಟ-ಚಾಳಿ ಮೈ ಗಂಟಿದೆಯೋ ಗೊತ್ತಾಗ್ತಿಲ್ಲ … Read more

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದಲ್ಲಿರುವ “ಕೈ“ಮುಖಂಡ ರೆಹಮಾನ್ ಖಾನ್ ಮಾಲೀಕತ್ವದ ಪ್ರತಿಷ್ಟಿತ ಡೆಲ್ಲಿ ಪಬ್ಲಿಕ್ ಸ್ಕೂಲ್ ಅಕ್ರಮನಾ..?! ಬೆಂಗಳೂರು:ಈ ನೆಲದಲ್ಲಿನ ಕಾನೂನು ಎಲ್ಲರಿಗೂ ಒಂದೇ ರೀತಿಯಾಗಿ ಅಪ್ಲೈ ಆಗಬೇಕು ಅಲ್ವಾ…? ಪ್ರತಿಷ್ಟಿತರು,ಬಲಾಢ್ಯರಿಗೊಂದು ಜನಸಾಮಾನ್ಯರಿಗೇ ಇನ್ನೊಂದು ಎನ್ನುವಂತ ಗೊಂದಲಕಾರಿ ವ್ಯವಸ್ಥೆ ಏನಾದ್ರೂ ಜಾರಿಯಲ್ಲಿದೆಯೇ..? ಇಂತದ್ದೊಂದು ಅನುಮಾನ ಸಹಜವಾಗಿ ಕಾಡೊಕ್ಕೆ ಕಾರಣ, ಎಲ್ಲಾ ನಿಯಮಗಳ ಮಾಹಿತಿ-ಅರಿವು ಇದ್ದ ಹೊರತಾಗ್ಯೂ ಕಾಂಗ್ರೆಸ್‌ ನ ಪ್ರಭಾವಿ ಮುಖಂಡನ ಮನೆತನ ಶೈಕ್ಷಣಿಕ ಅಕ್ರಮ ನಡೆಸಿರೋದು… ಅಂದ್ಹಾಗೆ ಇಂತದ್ದೊಂದು ಆಪಾದನೆ ಕೇಳಿಬಂದಿರೋದು ಕಾಂಗ್ರೆಸ್‌ ನ ಪ್ರಭಾವಿ ಮುಸ್ಲಿಂ … Read more

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬೆಂಗಳೂರು:ಎಲ್ಲವೂ  ಅಂದಾಜಿಸುತ್ತಿರುವ  ರೀತಿಯೇ ಆದಲ್ಲಿ….ಹಾಕಲಾಗುತ್ತಿರುವ ಲೆಕ್ಕಾಚಾರಗಳ ಪ್ರಕಾರವೆ ನಡೆದರೆ…ರಾಜ್ಯ ರಾಜಕೀಯ ಇತಿಹಾಸದಲ್ಲಿ ಇದೊಂದು ದೊಡ್ಡ ಸ್ಪೋಟಕ ಸುದ್ದಿಯಾಗೋದರಲ್ಲಿ ಅನುಮಾನವೇ ಇಲ್ಲ..ಏಕಂದ್ರೆ ಸುದ್ದಿಯ ಸ್ವರೂಪವೇ ಅಷ್ಟೊಂದು ಅಚ್ಚರಿ-ಗಾಬರಿ-ಸಂಶಯದ ಅಂಶಗಳನ್ನು ಒಳಗೊಂಡಿದೆ.ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗಬಹುದು..ಆಗಿದೆ ಕೂಡ ಎನ್ನುವಂತ ಸನ್ನಿವೇಶದಲ್ಲಿ ಅಂದಾಜಿಸುತ್ತಿರುವ ರೀತಿಯಲ್ಲಿಯೇ ಎಲ್ಲಾ ನಡೆದರೂ ಅಚ್ಚರಿ ಪಡಬೇಕಿಲ್ಲವೇನೋ..?   ರಾಜಕೀಯವೇ ಹೀಗೆ…ಹಾಗೆ…ಯಾವ್ ಸನ್ನಿವೇಶದಲ್ಲಿ ಏನ್ ಆಗ್ತದೆನ್ನುವುದನ್ನು ಊಹಿಸಲಿಕ್ಕೆ ಆಗೊಲ್ಲ..ಹೀಗೆಯೇ ಆಗುತ್ತೆ ಎಂದು ಖಚಿತವಾಗಿ ಹೇಳಲಿಕ್ಕೂ ಬರೊಲ್ಲ..ಇಲ್ಲಿ ಎಲ್ಲವೂ ಆಕ್ಷಿಡೆಂಡಲ್.. ಅನಿರೀಕ್ಷಿತ..ಆದರೆ ಆಗೋದೆಲ್ಲದರ ಹಿಂದೆ ಪೂರ್ವಭಾವಿ ಸಿದ್ಧತೆ ಇದ್ದೇ ಇರುತ್ತದೆ.ಅದು … Read more

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತು ಹೈಕಮಾಂಡ್ ಗೆ  ಪಕ್ಷದ ಇತಿಹಾಸದಲ್ಲೇ ಹಿಂದೆಂದು ಇಷ್ಟೊಂದು ಕಷ್ಟಕರವಾಗಿರಲಿಲ್ಲವೇನೋ ಅನ್ನಿಸುತ್ತೆ.ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಗೊಂದಲಕ್ಕೆ ಸಿಲುಕಿಕೊಂಡಿದೆ.ಯತ್ನಾಳ್ ಬಣದ ಬೇಡಿಕೆಯಂತೆ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಿಸಬೇಕೋ, ಬಿವೈ ವಿಜಯೇಂದ್ರ ಅವರನ್ನೇ ಮುಂದುವರೆಸಬೇಕೋ ಎನ್ನುವ ಪ್ರಶ್ನೆ ತೀವ್ರವಾಗಿ ಕಾಡಲಾರಂಭಿಸಿದೆ.ಇದೆಲ್ಲದರ ನಡುವೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಎಲ್ಲವನ್ನು ಸರಿದೂಗಿಸಬಲ್ಲ ಕೆಪಾಸಿಟಿ ಇರುವ ಲೀಡರ್ಸ್ ಗಳು ಯಾರೆನ್ನುವ ಪ್ರಶ್ನೆಗೆ ಹೈಕಮಾಂಡ್ ಬಳಿ ಇರುವ ಕೆಲವೇ ಕೆಲವು ಹೆಸರುಗಳಲ್ಲಿ ಸಿ.ಟಿ ರವಿ,ಅರವಿಂದ ಬೆಲ್ಲದ್ ಮುಂಚೂಣಿಯಲ್ಲಿವೆ … Read more

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

ಬೆಂಗಳೂರು: ಇದು ಎಷ್ಟರ ಮಟ್ಟಿಗೆ ಸತ್ಯವೋ..ಸುಳ್ಳೋ ಗೊತ್ತಿಲ್ಲ.ಆದರೆ ರಾಜಕೀಯ ಪಡ ಸಾಲೆಯಲ್ಲಿ ಇಂತದ್ದೊಂದು ಮಾತು ತುಂಬಾ ಗಂಭೀರವಾಗಿ ಕೇಳಿಬರುತ್ತಿದೆ. ಬಣಜಗಳ ದಿಂದ ದಿಕ್ಕೆಟ್ಟು ಹೋಗಿರುವ ಬಿಜೆಪಿ ಪಕ್ಷವನ್ನು ಹಳಿಗೆ ತರೊಕ್ಕೆ ಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ ಎನ್ನುವ ಪರಿಸ್ತಿತಿ ನಿಜಕ್ಕೂ ಇದೆಯೇ..? ಆ ಪತ್ರಿಕಾ ದಿಗ್ಗಜರನ್ನೇ ಕರೆತಂದು ಸರಿ ಮಾಡ ಬೇಕೆನಿಸುವ ವಿಚಾರ ಏಕೆ ಬಂದಿದೆ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಕಾಡಲಾರಂಭಿಸಿವೆ. ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಎನ್ನುವುದಕ್ಕಿಂತ ಏನೂ ಸರಿಯಿಲ್ಲ ಎನ್ನುವಂಥ ಪರಿಸ್ತಿತಿಯಿದೆ.ಬಣ ಜಗಳ ಸರಿ … Read more

ಚೆನ್ನಪಟ್ಟಣ ಉಪಸಮರ-2024: ಸಿ.ಪಿ ಯೋಗೇಶ್ವರ್ ಎದುರು ಕಣಕ್ಕಿಳಿಯಲು ನಿಖಿಲ್ ಹಿಂದೇಟು..?! ಲೆಕ್ಕಾಚಾರ ಕೆಳಗಾಗಿ ಸೋತರೆ “ಐರನ್ ಲೆಗ್” ಕಳಂಕ ಹೊತ್ತುಕೊಳ್ಳುವ ಆತಂಕ..?!

ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಿಗದಿಯಾಗಿರುವ ಡೆಡ್ ಲೈನ್ ಮುಗಿಯೊಕ್ಕೆ  ಕೆಲ ಗಂಟೆಗಳಷ್ಟೇ ಬಾಕಿ ಇದೆ.ಆದ್ರೂ ಅಖಾಡದಲ್ಲಿ ಏನಾಗಲಿದೆ ಎನ್ನೋದು ಗೊತ್ತಾಗುತ್ತಲೇ ಇಲ್ಲ.ಎಲ್ಲವೂ ಅಚ್ಚರಿ-ನಿಗೂಢದಂತೆ ಕಾಣಿಸುತ್ತದೆ.ನಿನ್ನೆಯವರೆಗೂ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿದ್ದ ಸಿ.ಪಿ ಯೋಗೇಶ್ವರ್ ನಿನ್ನೆ ರಾತ್ರಿ ಕೈ ಸೇರುವ ಮುನ್ಸೂಚನೆ ನೀಡಿ ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಮುಖಂಡರ ನೇತೃತ್ವದಲ್ಲಿ ಕೈ ಸೇರಿದ್ದಾಗಿದೆ.ಕಾಂಗ್ರೆಸ್ ನಿಂದಲೇ ಸ್ಪರ್ದಿಸ್ತಾರೆನ್ನುವ ಮಾತುಗಳು ಬಲವಾಗಿವೆ.ಆದರೆ ಕಡೇ ಕ್ಷಣದಲ್ಲಿ ಏನಾಗುತ್ತದೋ ಗೊತ್ತಾಗುತ್ತಿಲ್ಲ. ಸ್ಪರ್ದೆ ಮಾಡೋದಿದ್ರೆ ಅದು ಕೇವಲ ಬಿಜೆಪಿಯಿಂದ … Read more