ಎಲ್ಲಿಯ “ವಿಜಯ್”…! ಎಲ್ಲಿಯ “ಉಪೇಂದ್ರ”..! ಇಬ್ಬರ  ಹೋಲಿಕೆ ಸರಿನಾ..?

ಪಕ್ಷ ಕಟ್ಟಿದ ದಿನದಿಂದಲೇ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದ ವಿಜಯ್‌ ಜತೆ, ಮನೆಯಲ್ಲೇ ಕೂತು ಬದಲಾವಣೆ ಬಗ್ಗೆ ಕಂಠಶೋಷಣೆ ಮಾಡಿಕೊಳ್ಳುವ  ಉಪೇಂದ್ರ ಹೋಲಿಕೆ ಸರಿನಾ..! ತಮಿಳ್ನಾಡು(tamilnadu) ರಾಜಕೀಯದಲ್ಲಿ ಬಹುದೊಡ್ಡ ಕ್ರಾಂತಿ ನಡೆದು ಸಿನೆಮಾ ನಟ(cinema star) ವಿಜಯ್‌ (vijay)  ಸಿಎಂ ಆಗುತ್ತಿದ್ದಂತೆ ನಮ್ಮ ಕರ್ನಾಟಕದಲ್ಲಿ  ಮಾದ್ಯಮಗಳಿಗೆ (karnataka medais)ಅದ್ಹೇಕೆ, ರಿಯಲ್‌ ಸ್ಟಾರ್‌ ಹಾಗೂ ಬುದ್ದಿವಂತ ನಟ ಉಪೇಂದ್ರ (real star upendra) ಅವರ ಬೆನ್ನು ಹತ್ತಿ ಕಾಡುವ ಕೆಟ್ಟ ಛಟ-ಚಾಳಿ ಮೈ ಗಂಟಿದೆಯೋ ಗೊತ್ತಾಗ್ತಿಲ್ಲ … Read more

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

Bagalkot

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಈ ರಾಜಕೀಯ ಭರಾಟೆಯ ನಡುವೆ ಬಾಗಲಕೋಟೆ ಜಿಲ್ಲೆಯ ಪ್ರಮುಖ, ದಶಕಗಳಷ್ಟು ಹಳೆಯದಾದ ಜ್ವಲಂತ ಸಮಸ್ಯೆಗಳ ದೊಡ್ಡ ಪಟ್ಟಿಯೊಂದು ಮುನ್ನೆಲೆಗೆ ಬಂದಿದ್ದು, ರಾಜಕೀಯ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಚುನಾವಣೆ ಬಂದಾಗಲೆಲ್ಲಾ ರಾಜಕಾರಣಿಗಳು ಭರವಸೆಗಳ … Read more

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

Bagalkot

ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ಈ ನಡುವೆ ಬಾಗಲಕೋಟೆ ಉಪಚುನಾವಣೆಯ ಕುರಿತು ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಸಮಿತಿಯು ಸಿದ್ಧಪಡಿಸಿದ ಎಕ್ಸ್‌ಕ್ಲೂಸಿವ್ ಗ್ರೌಂಡ್ ರಿಪೋರ್ಟ್ ರಾಜ್ಯ ಹೈಕಮಾಂಡ್ ಕೈಸೇರಿದೆ. ಈ ವರದಿಯಲ್ಲಿ ಕ್ಷೇತ್ರದ ನೈಜ ಚಿತ್ರಣವನ್ನು ಬಿಚ್ಚಿಡಲಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವುದಾಗಿ ಸ್ಪಷ್ಟವಾಗಿ ಪ್ರಸ್ತಾಪಿಸಲಾಗಿದೆ. ಗೆಲುವಿನ ಅವಕಾಶ … Read more

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದಲ್ಲಿರುವ “ಕೈ“ಮುಖಂಡ ರೆಹಮಾನ್ ಖಾನ್ ಮಾಲೀಕತ್ವದ ಪ್ರತಿಷ್ಟಿತ ಡೆಲ್ಲಿ ಪಬ್ಲಿಕ್ ಸ್ಕೂಲ್ ಅಕ್ರಮನಾ..?! ಬೆಂಗಳೂರು:ಈ ನೆಲದಲ್ಲಿನ ಕಾನೂನು ಎಲ್ಲರಿಗೂ ಒಂದೇ ರೀತಿಯಾಗಿ ಅಪ್ಲೈ ಆಗಬೇಕು ಅಲ್ವಾ…? ಪ್ರತಿಷ್ಟಿತರು,ಬಲಾಢ್ಯರಿಗೊಂದು ಜನಸಾಮಾನ್ಯರಿಗೇ ಇನ್ನೊಂದು ಎನ್ನುವಂತ ಗೊಂದಲಕಾರಿ ವ್ಯವಸ್ಥೆ ಏನಾದ್ರೂ ಜಾರಿಯಲ್ಲಿದೆಯೇ..? ಇಂತದ್ದೊಂದು ಅನುಮಾನ ಸಹಜವಾಗಿ ಕಾಡೊಕ್ಕೆ ಕಾರಣ, ಎಲ್ಲಾ ನಿಯಮಗಳ ಮಾಹಿತಿ-ಅರಿವು ಇದ್ದ ಹೊರತಾಗ್ಯೂ ಕಾಂಗ್ರೆಸ್‌ ನ ಪ್ರಭಾವಿ ಮುಖಂಡನ ಮನೆತನ ಶೈಕ್ಷಣಿಕ ಅಕ್ರಮ ನಡೆಸಿರೋದು… ಅಂದ್ಹಾಗೆ ಇಂತದ್ದೊಂದು ಆಪಾದನೆ ಕೇಳಿಬಂದಿರೋದು ಕಾಂಗ್ರೆಸ್‌ ನ ಪ್ರಭಾವಿ ಮುಸ್ಲಿಂ … Read more

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

ಬೆಂಗಳೂರು: ಇದು ಎಷ್ಟರ ಮಟ್ಟಿಗೆ ಸತ್ಯವೋ..ಸುಳ್ಳೋ ಗೊತ್ತಿಲ್ಲ.ಆದರೆ ರಾಜಕೀಯ ಪಡ ಸಾಲೆಯಲ್ಲಿ ಇಂತದ್ದೊಂದು ಮಾತು ತುಂಬಾ ಗಂಭೀರವಾಗಿ ಕೇಳಿಬರುತ್ತಿದೆ. ಬಣಜಗಳ ದಿಂದ ದಿಕ್ಕೆಟ್ಟು ಹೋಗಿರುವ ಬಿಜೆಪಿ ಪಕ್ಷವನ್ನು ಹಳಿಗೆ ತರೊಕ್ಕೆ ಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ ಎನ್ನುವ ಪರಿಸ್ತಿತಿ ನಿಜಕ್ಕೂ ಇದೆಯೇ..? ಆ ಪತ್ರಿಕಾ ದಿಗ್ಗಜರನ್ನೇ ಕರೆತಂದು ಸರಿ ಮಾಡ ಬೇಕೆನಿಸುವ ವಿಚಾರ ಏಕೆ ಬಂದಿದೆ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಕಾಡಲಾರಂಭಿಸಿವೆ. ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಎನ್ನುವುದಕ್ಕಿಂತ ಏನೂ ಸರಿಯಿಲ್ಲ ಎನ್ನುವಂಥ ಪರಿಸ್ತಿತಿಯಿದೆ.ಬಣ ಜಗಳ ಸರಿ … Read more

CHENNAPATNA BYELECTION, POLITICAL EXCLUSIVE..: ಚನ್ನಪಟ್ಟಣಕ್ಕೆ “ಹೃದಯವಂತ” ಸಂಸದ ಡಾ.ಮಂಜುನಾಥ್ ಪತ್ನಿ ಅನುಸೂಯ “ಮೈತ್ರಿ” ಅಭ್ಯರ್ಥಿ..?!

ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೂಡಿಸಿರುವಷ್ಟು ಕುತೂಹಲವನ್ನು ಬಹುಷಃ ಇನ್ನ್ಯಾವ ಕ್ಷೇತ್ರಗಳ ಉಪ ಚುನಾವಣೆ ಹಿಡಿದಿಟ್ಟುಕೊಂಡಿಲ್ಲ ಎಂದೆನಿಸುತ್ತದೆ. ಎರಡು ಕ್ಷೇತ್ರಗಳಲ್ಲಿನ  ಪ್ರತ್ಯೇಕ ಪಕ್ಷಗಳ  ಅಭ್ಯರ್ಥಿಗಳು ಯಾರೆನ್ನುವುದು ಬಹುತೇಕ ನಿಕ್ಕಿಯಾಗಿದ್ರೂ ಚನ್ನಪಟ್ಟಣ ವಿಚಾರದಲ್ಲಿ ಎದುರಾಳಿ ಪಕ್ಷಗಳು ತಮ್ಮ ಅಭ್ಯರ್ಥಿಗಳು ಯಾರೆನ್ನುವ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.. ಮೊದಲು ನೀವು ಘೋಷಣೆ ಮಾಡಿ ಎಂದು ಕಾಂಗ್ರೆಸ್ ಕುಳಿತಿದ್ರೆ ಜೆಡಿಎಸ್-ಬಿಜೆಪಿ ಮೈತ್ರಿ ಮೊದಲು ನೀವು ಮಾಡಿ ಎಂದು ಸವಾಲಾಕಿ ಕೂತಂತಿದೆ.ಇದೆಲ್ಲದರ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ … Read more

POLITICAL EXCLUSIVE..”ಡಿ.ಕೆ” ಗೆ “ಠಕ್ಕರ್” ಕೊಡಲು “ಸತೀಶ್ ಜಾರಕಿಹೊಳಿ” ಹೆಸ್ರು “ತೇಲಿ”ಬಿಟ್ಟವರು “ಇವರೇ”ನಾ..? ಏಕೆ..?

ಬೆಂಗಳೂರು:ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದೆ..ಮಗ್ಗಲು ಬದಲಿಸುತ್ತಿದೆ.ದಸರಾ ಮುಗಿದ ಮೇಲೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುತ್ತಿದೆ ಎಂಬ ಭವಿಷ್ಯವಾಣಿ ಬಗ್ಗೆನೇ ಎಲ್ಲರ ಕುತೂಹಲ ನೆಟ್ಟಿದೆ.ಆ ಕ್ಷಿಪ್ರ ರಾಜಕೀಯ ಬೆಳವಣಿಗೆ ಏನು ಎನ್ನುವ ಕುತೂಹಲದ ಬಗ್ಗೆ ಎಲ್ಲರೂ ತಲೆಕೆಡಿಸಿಕೊಂಡಿ ರುವಾಗಲೆ ಮತ್ತೊಂದು ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ದಸರಾ ಬಳಿಕ ರಾಜ್ಯ ರಾಜಕಾರಣ ಮತ್ತೊಂದು ಮಗ್ಗಲು ಬದಲಿಸಲಿದೆ ಎನ್ನುವ  ಭವಿಷ್ಯ ವಾಣಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ..? ಅಥವಾ ಬಲವಂತವಾಗಿ ಅವರಿಂದ ಕೊಡಿಸಲಾಗುತ್ತಾ ಎನ್ನುವುದರತ್ತಲೇ … Read more

ಮಾದ್ಯಮಗಳಿಗೆ ವಿಧಾನಸೌಧಕ್ಕೆ ನೋ ಎಂಟ್ರಿ..? ಮಂತ್ರಿಮಹೋದಯರ ಭದ್ರತೆಗೆ ಧಕ್ಕೆಯಾಗುವ ನೆವ..?!ಎಸಿಪಿ ಯಿಂದ ಆಡಳಿತ ಸುಧಾರಣಾ ಇಲಾಖೆಗೆ ಪತ್ರ..?!

ಕರೆದಾಗ ಬರಬೇಕಂತೆ…ಹೇಳಿದ್ದಲ್ಲಿ ಬೈಟ್ ತಗೋಬೇಕಂತೆ..ಹಿಂದೆಮುಂದೆ ಅಡ್ಡಾಡುವಂತಿಲ್ವಂತೆ..ಹೇಳಿದಷ್ಟನ್ನೇ ಕೇಳ್ಕೊಂಡು ಹೋಗ್ಬೇಕಂತೆ..ಏನಿದು ಇದೆಲ್ಲಾ..?! ಬೆಂಗಳೂರು: ಕುಣಿಯಲಿಕ್ಕಾಗದವಳು ನೆಲ ಡೊಂಕು ಎಂದಳಂತೆ ಎನ್ನುವಂತಾಗಿದೆ ರಾಜ್ಯ ಸರ್ಕಾರದ ಧೋರಣೆ. ತನ್ನಲ್ಲಿರುವ ಹುಳುಕುಗಳನ್ನು ಸರಿ ಮಾಡಲು ಸಾಧ್ಯವಾಗದೆ ಮಾದ್ಯಮಗಳ ಮೇಲೆ ನಿರ್ಬಂದ-ನಿಯಂತ್ರಣ ಹೇರೊಕ್ಕೆ ಮುಂದಾಗಿದೆ ಎನ್ನಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುವ ರೀತಿಯಲ್ಲಿ ರಾಜ್ಯದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಮಾದ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರುವ ಎಲ್ಲಾ ಸಾಧ್ಯತೆ ಕಂಡುಬಂದಿದೆ.ಮಾದ್ಯಮಗಳಿಂದ ಮಂತ್ರಿ ಮಹೋದಯರ ಸುರಕ್ಷತೆ-ಭದ್ರತೆಗೆ ಧಕ್ಕೆ ಆಗುತ್ತಿದೆ. ಸಚಿವಾಲಯದ ಕೆಲಸ ಕಾರ್ಯಗಳಿಗೆ ತೀವ್ರತರದ ತೊಂದರೆ ಆಗುತ್ತಿದೆ ಎನ್ನುವ … Read more

ಅಂತೂ ಇಂತೂ ನಿಗಮ ಮಂಡಳಿಗಳ ಪಟ್ಟಿ ಪ್ರಕಟ: ಹ್ಯಾರೀಸ್ ಗೆ BDA, ಶ್ರೀನಿವಾಸ್ ಗೆ KSRTC, ಶಿವಣ್ಣಗೆ BMTC..ಸಂಗಮೇಶ್ ಗೆ ಲ್ಯಾಂಡ್ ಆರ್ಮಿ.

ಬೆಂಗಳೂರು: ಹಲವು ತಿಂಗಳ ಕಾತುರ ಹಾಗೂ ನಿರೀಕ್ಚೆಗೆ ಸರ್ಕಾರ ಕೊನೆಗೂ ತೆರೆ ಎಳೆದಿದೆ.32 ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಪ್ರಕಟಿಸಿದೆ.ಪ್ರಮುಖ ಆಯಕಟ್ಟಿನ ನಿಗಮಗಳ ಪಟ್ಟಿಯನ್ನು ಮೊದಲು ಪ್ರಕಟಿಸಿದ್ದು ಮಳವಳ್ಳಿ ಎಮ್ಮೆಲ್ಲೆ ನರೇಂದ್ರ ಸ್ವಾಮಿ,ಶಾಂತಿನಗರ ಎಮ್ಮೆಲ್ಲೆ ಎನ್ ಎ ಹ್ಯಾರೀಸ್, ತುಮಕೂರಿನ ಗುಬ್ಬಿ ವಿಧಾನಸಭಾ  ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರಿಗೆ ಕೆಎಸ್ ಆರ್ ಟಿಸಿ, ಅರಸಿಕೆರೆ ಶಾಸಕ ಶಿವಲಿಂಗೆಗೌಡ ಅವರಿಗೆ ಗೃಹಮಂಡಳಿ, ಭದ್ರಾವತಿ ಎಮ್ಮೆಲ್ಲೆ ಸಂಗಮೇಶ್ ಅವರಿಗೆ ಕೆಆರ್ ಐಡಿಎಲ್ ನಿಗಮಗಳ ಅಧ್ಯಕ್ಷಸ್ಥಾನ ನೀಡಲಾಗಿದೆ. ಸರ್ಕಾರದ ಆದೇಶವನ್ನು … Read more

“ಪಬ್ಲಿಕ್ ಟಿವಿ”ಗೆ ಬಿಗ್ ಶಾಕ್..! “ಪೊಲಿಟಿಕಲ್ ಹೆಡ್” ಬದ್ರುದ್ದೀನ್ ಗುಡ್ ಬೈ.?! ನಿರ್ಗಮನಕ್ಕೆ ಕಾರಣವೇನು..?!

:ವೃತ್ತಿನಿಷ್ಠೆ-ಕಾರ್ಯಕ್ಷಮತೆ”ಗೆ ಮತ್ತೊಂದು ಹೆಸರೇ “ಎಕ್ಸ್ ಕ್ಲ್ಯೂಸಿವ್ ನ್ಯೂಸ್” ಗಳ “ಹೆಡ್ ಕ್ವಾರ್ಟರ್ಸ್” ಬದ್ರುದ್ದೀನ್.. ಬೆಂಗಳೂರು: ಕನ್ನಡ ಪತ್ರಿಕಾರಂಗದಲ್ಲಿ  ಸ್ನೇಹಜೀವಿ-ಅಜಾತಶತೃ ಎಂದೇ ಕರೆಯಿಸಿ ಕೊಳ್ಳುವುದು ತೀರಾ ಕಷ್ಟ… ಕಷ್ಟ ಎನ್ನುವುದಕ್ಕಿಂತ ಅಸಾಧ್ಯವಾದ ಮಾತು.ಆದರೆ ಅದಕ್ಕೆ ಅಪವಾದ ಎನ್ನುವಂತೆ ಹೆಸರು-ವ್ಯಕ್ತಿತ್ವ-ಕೈ.. ಯಾವುದನ್ನೂ ಕೊಳಕು ಮಾಡಿಕೊಳ್ಳದೆ ಸುಮಾರು 30 ವರ್ಷಗಳಿಗಿಂತಲೂ ದೀರ್ಘ ಸಮಯದಿಂದಲೂ ವೃತ್ತಿನಿಷ್ಠೆಯನ್ನುಳಿಸಿಕೊಂಡ ಹಿರಿಯ ಪತ್ರಕರ್ತ  ಬದ್ರುದ್ದೀನ್ ಮಾಣಿ. ಪಬ್ಲಿಕ್ ಟಿವಿಯಲ್ಲಿ 9 ವರ್ಷಗಳಿಂದಲೂ ರಾಜಕೀಯ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ ಬದ್ರುದ್ದೀನ್ ಸ್ವ ಇಚ್ಛೆಯಿಂದ ನಿವೃತ್ತಿ ಪಡೆದು ಹೊರಬಂದಿದ್ದಾರೆ.ಇದ್ದಷ್ಟು … Read more