CONTROVERSY RISE ABOUT “PRESS CLUB HONOUR”..!? ವಿವಾದ-ಗೊಂದಲದ ಗೂಡಾದ “ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ”:ಪ್ರಶಸ್ತಿಗೆ ರಾಜಕೀಯದ ಸೋಂಕು ಬೇಕಾ..?

ಆಯ್ಕೆ ಸಮಿತಿ ವಿರುದ್ಧ, ಅರ್ಹ-ಸಮರ್ಥರ ನಿರ್ಲಕ್ಷ್ಯ,ಸ್ವಜನ ಪಕ್ಷಪಾತ-ಪ್ರಾದೇಶಿಕ ಅಸಮತೋಲನ-ಮಹಿಳಾ ಪ್ರಾತಿನಿಧ್ಯತೆಗೆ ಒತ್ತು ನೀಡದ ಆರೋಪ ಬೆಂಗಳೂರು: ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ-2023 ಘೋಷಣೆಗೆ ಅಸಮಾ ಧಾನ-ಆಕ್ಷೇಪ-ವಿರೋಧ ವ್ಯಕ್ತವಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ  ಈ ಬಗ್ಗೆ ಸಾಕಷ್ಟು  ಚರ್ಚೆ-ಟೀಕೆ ಶುರುವಾಗಿದೆ.ಪ್ರಶಸ್ತಿ ಘೋಷಣೆಯ ಮಾನದಂಡವೇನು ಎನ್ನುವ ಪ್ರಶ್ನೆ ಸೃಷ್ಟಿಯಾಗಿದೆ.ಡಿಸಿಎಂ ಡಿಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಅವರಂಥ ರಾಜಕಾರಣಿಗಳಿಗೆ ಪ್ರಶಸ್ತಿ ನೀಡುವ ಔಚಿತ್ಯವೇನಿತ್ತು ಎನ್ನುವ ಬಗ್ಗೆ ಚರ್ಚೆ ಶುರುವಾಗಿದೆ.ಇದರ ನಡುವೆ ಪ್ರಾದೇಶಿಕ ಅಸಮಾನತೆಯ ಪ್ರಶ್ನೆಯೂ ಸೃಷ್ಟಿಯಾಗಿದೆ.ಪ್ರಶಸ್ತಿ ನೀಡುವುದರ ಹಿಂದೆ ದೊಡ್ಡಮಟ್ಟದ ಲಾಭಿ-ಜಾತಿ ರಾಜಕಾರಣ-ಗುಂಪುಗಾರಿಕೆ-ಸ್ವಜನಪಕ್ಷಪಾತ ನಡೆದಿದೆ … Read more

ಪ್ರೆಸ್‌ ಕ್ಲಬ್-2023 ಪ್ರಶಸ್ತಿ ಪ್ರಕಟ: ಡಿಕೆ ಶಿವಕುಮಾರ್ “ವರ್ಷದ ವ್ಯಕ್ತಿ”-ಶಾಮನೂರು ಶಿವಶಂಕರಪ್ಪಗೆ  “ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ”-ಕಾರ್ಮಿಕ ಸಚಿವ  ಸಂತೊಷ್ ಲಾಡ್ ,ಡಾ. ಕೆ. ಗೋವಿಂದರಾಜುಗೆ “ಪ್ರೆಸ್‌ಕ್ಲಬ್ ಪ್ರಶಸ್ತಿ”

29 ಪತ್ರಕರ್ತರಿಗೆ “ಪ್ರೆಸ್‌ಕ್ಲಬ್ ಜೀವಮಾನ ಸಾಧನೆ” ಪ್ರಶಸ್ತಿ:ಡಿಸೆಂಬರ್ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ   ಕಾರ್ಯಕ್ರಮ  ಉದ್ಘಾಟನೆ-ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ರಿಂದ  ಪ್ರಶಸ್ತಿ ಪ್ರಧಾನ   ಬೆಂಗಳೂರು:ಪ್ರತಿ ವರ್ಷದಂತೆ ಈ ಬಾರಿಯೂ  ಪ್ರೆಸ್‌ಕ್ಲಬ್ ಆಫ್ ಬೆಂಗಳೂರು  ತನ್ನ ವಾರ್ಷಿಕ ಪ್ರಶಸ್ತಿ ಘೋಷಿಸಿದೆ.ಹಾಗೆಯೇ ಪತ್ರಿಕೋದ್ಯಮದಲ್ಲಿ  ಗಣನೀಯ ಸಾಧನೆ ಮಾಡಿದ ಪತ್ರಕರ್ತರನ್ನು ಗೌರವಿಸುವ ಸಂಪ್ರದಾಯ ಮುಂದುವರೆಸಿದೆ. ಈ ಪೈಕಿ   ಕಾಂಗ್ರೆಸ್  ಅಧಿಕಾರಕ್ಕೆ ಬರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಚುನಾವಣಾ ಚಾಣಕ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ  … Read more