“ಸುವರ್ಣ ಕುಟುಂಬದ “ತಾಯಿ”ಜೀವ ಲಲಿತಮ್ಮ ದುರ್ಮರಣ-ಕಂಬನಿ

ಮೊದಲಿಗೆ ಆ ತಾಯಿ ಸಾವಿಗೆ ಭಾವಪೂರ್ಣ  ಅಶೃತರ್ಪಣ.ಆ ತಾಯಿ ಸಾವಿಗೆ ಕನ್ನಡ ಫ್ಲ್ಯಾಶ್ ನ್ಯೂಸ್ ಕಂಬನಿ ಮಿಡಿಯುತ್ತದೆ.ಆ ಮಹಾತಾಯಿಯ ಆತ್ಮಕ್ಕೆ ಶಾಂತಿ ಸಿಗಲಿ..ಆಕೆಯ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬದವರಿಗೆ ಹಾಗೂ ಆತ್ಮೀಯರಿಗೆ ನೀಡಲಿ..ಅಂದ್ಹಾಗೆ ಇದು ಅನ್ಯಾಯದ ಸಾವೇ ನಿಜ.ಕೆಲಸ ಮುಗಿಸಿಕೊಂಡು ಹೋಗುವಾಗ ಓಕಳಿಪುರಂ ಬಳಿ ಯಮರೂಪದಲ್ಲಿ ಬಂದ ಲಾರಿ ಆ ತಾಯಿಯನ್ನು ಆಪೋಷನ ತೆಗೆದುಕೊಂಡಿದೆ.ಸ್ಥಳದಲ್ಲೇ ಆ ತಾಯಿ ಉಸಿರು ಚೆಲ್ಲಿದ್ದಾರೆ. ಆ ತಾಯಿಯ ಸಾವು ಸುವರ್ಣ ನ್ಯೂಸ್ ಬಳಗವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.ಆ ತಾಯಿಯ ಜತೆ ಇಡೀ … Read more

“ಕ್ಯಾಮೆರಾ”ದಿಂದ ಶಾಶ್ವತಕ್ಕೂ “ಔಟ್ ಆಫ್ ಫೋಕಸ್” ಆದ ಪತ್ರಿಕಾ ಛಾಯಾಗ್ರಾಹಕ “ಶಿವಮೊಗ್ಗ ನಂದನ್”

“ದೇಹದಿಂದ ಆತ್ಮ ಹೊರ ಹೋಗುವುದೆಂದರೆ ಫ್ರೇಮಿನಿಂದ ಫೋಟೋ ಹೊರ ಹೋದಂತೆ..” ಶಿವಮೊಗ್ಗ ನಂದನ್ ಅವರ ಸಾವನ್ನು ನೆನೆದು ಹಿರಿಯ ಮಾದ್ಯಮ ಮಿತ್ರರಾದ ಶಿವಮೊಗ್ಗದ ಶಿ.ಜು ಪಾಷಾ ಬರೆದಿರುವ  ಈ ಕವಿಸಾಲು ನಂದನ್ ಅವರ ಸಂಪೂರ್ಣ ಬದುಕು-ವ್ಯಕ್ತಿತ್ವ-ವೃತ್ತಿಯನ್ನೇ ಬಿಂಬಿಸುತ್ತದೆ. ಹೌದು…ಶಿವಮೊಗ್ಗ ಕಂಡ ಅತ್ಯದ್ಭುತ ಹಾಗೂ ಅಗಾಧ ಪ್ರತಿಭಾಶಾಲಿ ಛಾಯಾಗ್ರಾಹಕ ದೈಹಿಕವಾಗಿ ಫ್ರೇಮ್ ನಿಂದ ಔಟ್ ಆಫ್ ಫೋಕಸ್ ಆಗಿದ್ದಾರೆ.ಮತ್ತೆಂದೂ ಕ್ಯಾಮೆರಾ ಹಿಡಿಯಲಾರರು. ಕ್ಯಾಮೆರಾ ಧೂಳು ಹಿಡಿಯಬಹದು.ಆದರೆ ಅವರು ತೆಗೆದ ಲಕ್ಷಾಂತರು ಫೋಟೋಗಳು ನಂದನ್ ಅವರ ಇರುವಿಕೆಯನ್ನು ಜೀವಂತವಾಗಿಡಲಿವೆ.. ಶಿವಮೊಗ್ಗದಲ್ಲಿ … Read more

ಮಾದ್ಯಮ ಲೋಕದ “ದಿಗಂತ”ದಲ್ಲಿ ಶಾಶ್ವತಕ್ಕೂ “ಅಸ್ತಂಗತ”ನಾದ “ಶಶಿ”ಧರ್

ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ಇನ್ನು ಕೇವಲ ನೆನಪು-ಗೆಳೆಯನ ಅಗಲಿಕೆಗೆ ಮಾದ್ಯಮ ಸ್ನೇಹಿತರ ಕಂಬನಿ ಶಿವಮೊಗ್ಗ: ಕೆಲವರ ಸಾವುಗಳು ಅತೀವವಾಗಿ ಕಾಡುತ್ತವೆ. ನಮ್ಮಲ್ಲೇ ನಮ್ಮವರಾಗಿದ್ದ, ಹೃದಯಕ್ಕೆ ತೀರಾ ಹತ್ತಿರವಾಗಿದ್ದ ಜೀವವೊಂದು ದೂರವಾದಂತ ನೋವನ್ನು ಕೊಡುತ್ತವೆ. ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಸಾವು ಕೂಡ ಪತ್ರಕರ್ತರಾದಿಯಾಗಿ ಅವರೊಂದಿಗೆ ಒಡನಾಟ ವಿಟ್ಟುಕೊಂಡಿದ್ದವರನ್ನು ಶೋಕದ ಸಾಗರದಲ್ಲಿ ಮುಳುಗಿಸಿದೆ. ಕೆಲವೇ ವರ್ಷಗಳಲ್ಲಿ ಶಿವಮೊಗ್ಗದವರೇ ಆಗೋಗಿದ್ದ ಸ್ನೇಹಿತ-ಆತ್ಮೀಯ ಶಶಿಧರ್ ಗೆ ಕಣ್ಣೀರಾಕದವರೇ ಇಲ್ಲ. ಶಿವಮೊಗ್ಗ ಮಾದ್ಯಮ ಲೋಕದಲ್ಲಿ ಅತ್ಯಂತ ಸ್ನೇಹಪರ … Read more

SAD DEMISE: ಕ್ರೈಂ ಪತ್ರಿಕೋದ್ಯಮದ “ಪದ-ಪಂಡಿತ” ಅಕ್ಷರಗಳಲ್ಲಿ ಲೀನ..

“ಕ್ರೈಂ ಬರಹಗಾರಿಕೆಗೊಂದು ಹೊಸ ಭಾಷ್ಯ ಬರೆದ ಅಕ್ಷರಗಾರುಡಿಗ-ಗಣೇಶ್  ಎನ್ನುವ ಗುರುಕುಲದಲ್ಲಿ ಬೆಳೆದ ಶಿಷ್ಯ ಕೋಟಿ ದೊಡ್ಡದು” “ಶತೃತ್ವ ಕಟ್ಟಿಕೊಳ್ಳದ ಅಜಾತಶತೃ-ಮಹಾನ್ ಹಾಸ್ಯಪ್ರಜ್ನೆಯ  ಜೀವನ್ಮುಖಿ-ಇನ್ನೊಬ್ಬರ ಸಮಸ್ಗೆಗೆ ಮಿಡಿಯುವ ಮಹಾನ್ ಮಾನವತಾವಾದಿ” ಬೆಂಗಳೂರು: ಕನ್ನಡ  ಕ್ರೈಂ ಪತ್ರಿಕೋದ್ಯಮದ ದೈತ್ಯಪ್ರತಿಭೆ ಶಾಶ್ವತಕ್ಕೂ ನೇಪಥ್ಯಕ್ಕೆ ಸರಿದಿದೆ. ಕ್ರೈಂ ವರದಿಗಾರಿಕೆಯ ಸಾಕ್ಷಿಪ್ರಜ್ನೆಯಂತಿದ್ದ ಗಣೇಶ್ ಅಕ್ಷರಗಳಲ್ಲಿ ಲೀನವಾಗಿದ್ದಾರೆ.ಬಹು ಅಂಗಾಗ ವೈಫಲ್ಯದಿಂದ ಇಂದು ಬೆಳಗ್ಗೆ ವಸಂತನಗರದ ಜೈನ್ ಆಸ್ಪತ್ರೆಯಲ್ಲಿ ಅಕಾಲಿಕವಾಗಿ ಸಾವನ್ನಪ್ಪಿದ್ದಾರೆ.ಕೇವಲ 41ರ ವಯಸ್ಸಿನಲ್ಲೇ ಪತ್ರಿಕೋದ್ಯಮದ ಅಪಾರ ಹಿರಿ-ಕಿರಿಯ ಸ್ನೇಹಿತರನ್ನು ಗಣೇಶ್ ಅಗಲಿದ್ದಾರೆ.ಅವರ ನಿಧನಕ್ಕೆ ಕನ್ನಡ ಪತ್ರಿಕೋದ್ಯಮವೇ … Read more

SAD DEMISE: WOMEN JOURNALIST BHUVANESHWARI NO MORE…. “ನುಡಿ ಶೃದ್ಧಾಂಜಲಿ”. ಸಹೃದಯ ಪತ್ರಕರ್ತೆಯ ಅನ್ಯಾಯದ ಸಾವು..ಥೈರಾಯ್ಡ್ ವಿರುದ್ದದ ಹೋರಾಟದಲ್ಲಿ ಸಾವಿಗೆ ಶರಣಾದ ಹಿರಿಯ ಪತ್ರಕರ್ತೆ ಭುವನೇಶ್ವರಿ…

ಇದು ನಿಜಕ್ಕೂ ಅನ್ಯಾಯದ  ಸಾವು ಕಣ್ರಿ..”ಈ- ಟಿವಿ” ಅಂಥ ದಿಗ್ಗಜ ಮಾದ್ಯಮ ಸಂಸ್ಥೆಯಲ್ಲಿ ರಿಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದರೂ ಸ್ವಲ್ಪವೂ ಅಹಮಿಕೆ ಪ್ರದರ್ಶಿಸಿದೆ ತೀರಾ ಸರಳವಾಗಿ ಬದುಕಿದ ಜೀವ ಅದು..ಆದ್ರೆ ಇದ್ದಕ್ಕಿದ್ದಂತೆ ನೇಪಥ್ಯಕ್ಕೆ ಸರಿದು ಅನೇಕ ವರ್ಷಗಳೇ ಕಳೆದಿದ್ವು..ಅವರು ಇನ್ನಿಲ್ಲ ಎನ್ನುವ ಸುದ್ದಿ ಸಿಡಿಲಂತೆ ಅಪ್ಪಳಿಸಿದಾಗ ನಂಬಲಿಕ್ಕೆ ಸಾಧ್ಯವೇ ಆಗ್ಲಿಲ್ಲ. ಹೌದು..ಸುದ್ದಿಯೇ ಜೀವಾಳ ಎನ್ನುವ ಆಕರ್ಷಕ ಟೈಟಲ್ ನಲ್ಲಿ ಪ್ರಸಾರವಾಗ್ತಿದ್ದ ಈ ಟಿವಿ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ಅನೇಕ ವರ್ಷಗಳವರೆಗೆ ರಿಪೋರ್ಟರ್ ಆಗಿ ಕೆಲಸ ಮಾಡ್ತಿದ್ದ … Read more