ಖ್ಯಾತ ವಿಜ್ಞಾನಿ,ಸಾಹಿತಿ ಪ್ರಸನ್ನ ಸಂತೆಕಡೂರು ಗೆ ವಿಶ್ವದ ಐವರು ಅಗ್ರಗಣ್ಯ ವಿಜ್ಞಾನಿಗಳಲ್ಲಿ ಸ್ಥಾನ

ಸಂಶೋ‍ಧಕನಾಗಷ್ಟೇ ಸೀಮಿತಗೊಳ್ಳದೆ ಸಾಹಿತ್ಯಕ್ಕೂ ತನ್ನನ್ನು ತೆರೆದುಕೊಂಡು ಯಶಸ್ವಿಯಾದ ಪ್ರಸನ್ನ ಸಂತೆಕಡೂರು ಶಿವಮೊಗ್ಗ ಜಿಲ್ಲೆಯ ಪ್ರತಿಭೆ ಖ್ಯಾತ ಸಂಶೋಧಕ..ವಿಜ್ಞಾನಿ…ಶಿವಮೊಗ್ಗ ಮೂಲದ ಪ್ರತಿಭಾನ್ವಿತ ಪ್ರಸನ್ನ ಸಂತೆಕಡೂರು ಅವರಿಗೆ ವಿಶ್ವದ ಅಗ್ರಗಣ್ಯ ಐವರು ವಿಜ್ಞಾನಿಗಳ ಪಟ್ಟಿಯಲ್ಲಿ ಒಬ್ಬರಾಗಿ ಗೌರವಾನ್ವಿತ ಸ್ಥಾನ ಪಡೆದಿದ್ದಾರೆ. ಆತ್ಮೀಯ ಸ್ನೇಹಿತ ಪ್ರಸನ್ನ ಸಂತೆಕಡೂರು ಅವರಿಗೆ ಅಭಿನಂದನೆಗಳು..ಅವರ ಸಾಧನೆ ಬಗ್ಗೆ ಬರೆಯಲೇಬೇಕಿದೆ. ನಾವೆಲ್ಲಾ ಒಂದಷ್ಟು ಸಾವಿರಗಳಷ್ಟು ಸಂಬಳದ ಉದ್ಯೋಗ ಸಿಕ್ಕರೆ ಸಾಕಪ್ಪಾ..ಲೈಫ್ ಸೆಟ್ಲಾದಂತೆ ಎಂದು ಕಂಫರ್ಟ್ ಝೋನ್ ಕಂಡುಕೊಳ್ಳುವ ಯತ್ನದಲ್ಲಿದ್ದಾಗ ಪ್ರಸನ್ನ ಪ್ರಯೋಗಾಲಯಗಳಲ್ಲಿ ಸೆಲ್ಸು….ಝೀನ್ಸ್…ಇವುಗಳ ಸುತ್ತಲೇ ಪ್ರಯೋಗಶೀಲನಾಗಿದ್ದ…ಆಗಲೇ ಅನ್ನಿಸಿತ್ತು..ಈತ … Read more

ಶಿವಮೊಗ್ಗ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್  ಗೆದ್ದ ಪತ್ರಕರ್ತ ನಾಗೇಶನಾಯ್ಕ ಪುತ್ರಿ ದೀಪಿಕಾ..

ಶಿವಮೊಗ್ಗ: ನಮ್ಮ ಪತ್ರಕರ್ತರ ಮಕ್ಕಳಲ್ಲೂ ಸಾಧಕರಿಗೇನು ಕೊರತೆಯಿಲ್ಲ.ಆದರೆ ಕಾರ್ಯ ಒತ್ತಡದ ಕಾರಣಕ್ಕೆ ತಮ್ಮ ಮಕ್ಕಳ ಪ್ರತಿಯೊಂದು ಬೆಳವಣಿಗೆ ಮೇಲೆ ಕಣ್ಣು ಹಾಯಿಸೋದು ಸ್ವಲ್ಪ ಕಷ್ಟವೇ..ವಿಪರೀತ ಕೆಲಸಗಳಲ್ಲೇ ಮುಳುಗಿ ಹೋಗಿರುವ ಪತ್ರಕರ್ತರಿಗೆ ತಮ್ಮ ಮಕ್ಕಳು ಬೆಳೆಯೋದು ಗೊತ್ತಾಗುವುದಿಲ್ಲ..ಅವರು ಏನ್ ಸಾಧನೆ ಮಾಡಿದ್ದಾರೆ ಎನ್ನುವುದರ ಮಾಹಿತಿನೇ ಇರದಂಗಾಗಿರುತ್ತದೆ. ಮಕ್ಕಳು ಸಾಧನೆ ಮಾಡಿದ ಸುದ್ದಿ ಕೇಳಿದಾಗ ಹೌದಾ..ಎನ್ನುವ ಸಂತೋಷ-ಅಚ್ಚರಿಯ ಉದ್ಘಾರ ಮಾತ್ರ ಅವರಿಂದ ಹೊರಡುತ್ತದೆ.(ನಮ್ಮ ಹೆಮ್ಮೆಯ ಶಿವಮೊಗ್ಗದ ಪತ್ರಕರ್ತ ಮಿತ್ರರ ಮಕ್ಕಳು ಮಾಡಿರುವ ಸಾಧನೆ ಬೆಳೆಕಿಗೆ ಬಂದಿ್ಲ್ಲ ಅಷ್ಟೆ) ಇದನ್ನೆಲ್ಲಾ ಏಕೆ … Read more

“ಕ್ಯಾಮೆರಾ”ದಿಂದ ಶಾಶ್ವತಕ್ಕೂ “ಔಟ್ ಆಫ್ ಫೋಕಸ್” ಆದ ಪತ್ರಿಕಾ ಛಾಯಾಗ್ರಾಹಕ “ಶಿವಮೊಗ್ಗ ನಂದನ್”

“ದೇಹದಿಂದ ಆತ್ಮ ಹೊರ ಹೋಗುವುದೆಂದರೆ ಫ್ರೇಮಿನಿಂದ ಫೋಟೋ ಹೊರ ಹೋದಂತೆ..” ಶಿವಮೊಗ್ಗ ನಂದನ್ ಅವರ ಸಾವನ್ನು ನೆನೆದು ಹಿರಿಯ ಮಾದ್ಯಮ ಮಿತ್ರರಾದ ಶಿವಮೊಗ್ಗದ ಶಿ.ಜು ಪಾಷಾ ಬರೆದಿರುವ  ಈ ಕವಿಸಾಲು ನಂದನ್ ಅವರ ಸಂಪೂರ್ಣ ಬದುಕು-ವ್ಯಕ್ತಿತ್ವ-ವೃತ್ತಿಯನ್ನೇ ಬಿಂಬಿಸುತ್ತದೆ. ಹೌದು…ಶಿವಮೊಗ್ಗ ಕಂಡ ಅತ್ಯದ್ಭುತ ಹಾಗೂ ಅಗಾಧ ಪ್ರತಿಭಾಶಾಲಿ ಛಾಯಾಗ್ರಾಹಕ ದೈಹಿಕವಾಗಿ ಫ್ರೇಮ್ ನಿಂದ ಔಟ್ ಆಫ್ ಫೋಕಸ್ ಆಗಿದ್ದಾರೆ.ಮತ್ತೆಂದೂ ಕ್ಯಾಮೆರಾ ಹಿಡಿಯಲಾರರು. ಕ್ಯಾಮೆರಾ ಧೂಳು ಹಿಡಿಯಬಹದು.ಆದರೆ ಅವರು ತೆಗೆದ ಲಕ್ಷಾಂತರು ಫೋಟೋಗಳು ನಂದನ್ ಅವರ ಇರುವಿಕೆಯನ್ನು ಜೀವಂತವಾಗಿಡಲಿವೆ.. ಶಿವಮೊಗ್ಗದಲ್ಲಿ … Read more

ಮಾದ್ಯಮ ಲೋಕದ “ದಿಗಂತ”ದಲ್ಲಿ ಶಾಶ್ವತಕ್ಕೂ “ಅಸ್ತಂಗತ”ನಾದ “ಶಶಿ”ಧರ್

ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ಇನ್ನು ಕೇವಲ ನೆನಪು-ಗೆಳೆಯನ ಅಗಲಿಕೆಗೆ ಮಾದ್ಯಮ ಸ್ನೇಹಿತರ ಕಂಬನಿ ಶಿವಮೊಗ್ಗ: ಕೆಲವರ ಸಾವುಗಳು ಅತೀವವಾಗಿ ಕಾಡುತ್ತವೆ. ನಮ್ಮಲ್ಲೇ ನಮ್ಮವರಾಗಿದ್ದ, ಹೃದಯಕ್ಕೆ ತೀರಾ ಹತ್ತಿರವಾಗಿದ್ದ ಜೀವವೊಂದು ದೂರವಾದಂತ ನೋವನ್ನು ಕೊಡುತ್ತವೆ. ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಸಾವು ಕೂಡ ಪತ್ರಕರ್ತರಾದಿಯಾಗಿ ಅವರೊಂದಿಗೆ ಒಡನಾಟ ವಿಟ್ಟುಕೊಂಡಿದ್ದವರನ್ನು ಶೋಕದ ಸಾಗರದಲ್ಲಿ ಮುಳುಗಿಸಿದೆ. ಕೆಲವೇ ವರ್ಷಗಳಲ್ಲಿ ಶಿವಮೊಗ್ಗದವರೇ ಆಗೋಗಿದ್ದ ಸ್ನೇಹಿತ-ಆತ್ಮೀಯ ಶಶಿಧರ್ ಗೆ ಕಣ್ಣೀರಾಕದವರೇ ಇಲ್ಲ. ಶಿವಮೊಗ್ಗ ಮಾದ್ಯಮ ಲೋಕದಲ್ಲಿ ಅತ್ಯಂತ ಸ್ನೇಹಪರ … Read more

ಸಂಚಾರಿ ನಿಯಮ ಉಲ್ಲಂಘಿಸಿದ ಚಾಲಕನಿಗೆ 3 ಮೀ. ಉದ್ದದ ದಂಡ ವಿಧಿಸಿದ ಪೊಲೀಸರು!

ಸಾಮಾನ್ಯವಾಗಿ ಹೆಬ್ಬಾವು ಹಿಡಿದಾಗ ಹಿಡಿದವರು ತಲೆಯಿಂದ ಬಾಲದವರೆಗೂ ಎಲ್ಲರೂ ಹಿಡಿದುಕೊಂಡು ಫೋಟೊಗೆ ಫೋಜ್ ಕೊಡೋದು ಸಾಮಾನ್ಯ. ಆದರೆ ಇಲ್ಲಿ ಪೊಲೀಸರು ಹೆಬ್ಬಾವು ಹಿಡಿದಂತೆ ಸಂಚಾರಿ ನಿಯಮ ಉಲ್ಲಂಘಿಸಿದ ರಸೀದಿಯನ್ನು ಹಿಡಿದು ಫೋಜ್ ಕೊಟ್ಟಿದ್ದಾರೆ. ಹೌದು, ಪದೇಪದೆ ಸಂಚಾರ ನಿಯಮ ಉಲ್ಲಂಘಿಸಿದ ಕಾರು ಚಾಲಕನಿಗೆ ನೀಡಿದ ದಂಡದ ಬಿಲ್ ಉದ್ದ ನೋಡಿ ಆಶ್ಚರ್ಯಚಕಿತರಾದ ಪೊಲೀಸರು ಚಾಲಕನ ಜೊತೆ ಬಿಲ್ ಹಿಡಿದು ಫೋಟೊ ತೆಗೆಸಿಕೊಂಡಿದ್ದಾರೆ. ಶಿವಮೊಗ್ಗದ ಸಂಚಾರಿ ಪೊಲೀಸರು ಸುಮಾರು 3 ಮೀಟರ್ ಉದ್ದದ ಸಂಚಾರಿ ನಿಯಮದ ಬಿಲ್ ಕೊಟ್ಟು … Read more