ಕಿಲಾರಿ ಬೊಮ್ಮಯ್ಯ, ರಾಜಶೇಖರ, ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ

2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗೆ ಶ್ರಮಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದ್ದಾರೆ. ಬೆಂಗಳೂರು ವಿಭಾಗ: ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ ಗಡ್ಡದಾರಹಟ್ಟಿ, ಚಳ್ಳಕೆರೆ ತಾಲ್ಲೂಕು ಚಿತ್ರದುರ್ಗ ಜಿಲ್ಲೆಯವರಾದ ಇವರು ಕಿಲಾರಿ ( ಜಾನುವಾರುಗಳ ಸಂರಕ್ಷಣೆ)  ವೃತ್ತಿಯ ಮೂಲಕ ಸಮಾಜದ ಒಳಿತಿಗಾಗಿ ಸಲ್ಲಿಸಿದ್ದಾರೆ.  ದೇವರ ಎತ್ತುಗಳ ರಕ್ಷಣೆ, ಜಾನುವಾರುಗಳ ಪೋಷಣೆ, ಸ್ಥಳೀಯ ಬುಡಕಟ್ಟು ಸಮುದಾಯದ … Read more

ಮಹತ್ವಾಕಾಂಕ್ಷಿ `ಕಾವೇರಿ 5ನೇ ಹಂತದ ಯೋಜನೆ’ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿದಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು … Read more

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!

ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು  ಕೋರುತ್ತಾ, ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ಬಗ್ಗೆಯೂ ಸಭೆಯ ಗಮನವನ್ನು … Read more

ದಾಖಲೆ 7ನೇ ಬಾರಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಅರಮನೆಯಲ್ಲಿ ದಾಖಲೆಯ 7ನೇ ಬಾರಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಶನಿವಾರ ಮಧ್ಯಾಹ್ನ 2.10ರ ಸುಮಾರಿಗೆ ಕುಂಭ ಲಗ್ನದಲ್ಲಿ ನಂದಿಧ್ವಜಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಪೂಜೆ ಸಲ್ಲಿಸಿದರು. ಈ ಮೂಲಕ ಮುಡಾ ಹಗರಣದಲ್ಲಿ ದಸರಾಗೆ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಸುಳ್ಳಾಗಿಸಿದರು. ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ನಂತರ ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ದೊರೆಯಲಿದೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಸರ್ಕಾರದ ವತಿಯಿಂದ ಮೈಸೂರು ದಸರಾ … Read more