ಎಕ್ಸೆಲ್‌ ಪಿಯು ಕಾಲೇಜ್‌ ಕ್ಲೋಸ್..!‌ ಸಾಲು ಸಾಲು ಶೈಕ್ಷಣಿಕ ನಿಯಮ ಉಲ್ಲಂಘನೆ..ವಿದ್ಯಾರ್ಥಿಗಳ ಕಥೆ ಏನು.? ಪೋಷಕರ ಅಳಲು ಕೇಳೋರು ಯಾರು..!?

ಬೆಳ್ತಂಗಡಿ/ಬೆಂಗಳೂರು: ರಾಜ್ಯದ ಪ್ರತಿಷ್ಟಿತ ಕಾಲೇಜೊಂದರ ಬಗ್ಗೆ ಕೆಟ್ಟ ಸುದ್ದಿ ಹೊರಬಿದ್ದಿದೆ. ಶೈಕ್ಷಣಿಕ ನಿಯಮಗಳನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಕಾಲೇಜ್‌ ಮಾನ್ಯತೆಯನ್ನೇ ರದ್ದು ಮಾಡಿ ೩೦ ದಿನಗಳೊಳಗೆ ಇಡೀ ಕಾರ್ಯಾಚರಣೆ ‍ಸ್ಥಗಿತಗೊಳಿಸಬೇಕೆನ್ನುವುದು ಆ ಸುದ್ದಿ.ಲಕ್ಷಾಂತರ ಹಣ ಕೊಟ್ಟು ಮಕ್ಕಳನ್ನು  ಕಾಲೇಜಿಗೆ ಸೇರಿಸಿರುವ ಪೋಷಕರು ಇದೀಗ ಬಾಯಿಬಾಯಿ ಬಡಿದುಕೊಳ್ಳುತ್ತಿದ್ದಾರೆ.ಆದರೆ ಹಾಗೇನು ನಡೆದೇ ಇಲ್ಲ ಎನ್ನುವಂತೆ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ ನೀಡ್ತಿದೆ.ಯಾರ್‌ ಮಾತು ನಂಬಬೇಕು.. ಯಾರದ್ದು ಬಿಡಬೇಕೆನ್ನುವ ಗೊಂದಲ ಪೋಷಕರಲ್ಲಿದೆ.ಈ ನಡುವೆ ಇದ್ಯಾವುದರ ಮಾಹಿತಿಯೇ ಇಲ್ಲದ ಮಕ್ಕಳು ಕಾಲೇಜಿನ ಕಟ್ಟಡದಲ್ಲಿ ಎಂದಿನಂತೆ … Read more

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

ಅಲೆನ್‌ ಕೆರಿಯರ್‌ ಇನ್ಸಿಟ್ಯೂಟ್‌  ನ ಬ್ರಹ್ಮಾಂಡ ಶೈಕ್ಷಣಿಕ ಅಕ್ರಮ ಬಯಲು- ಎಲ್ಲಾ ಸೆಂಟರ್ಸ್‌ ಮುಚ್ಚುವಂತೆ ಶಿಕ್ಷಣ ಇಲಾಖೆಯಿಂದ ಖಡಕ್‌ ಆದೇಶ- ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ಸರ್ಕಾರದ ಮಟ್ಟದಲ್ಲಿ ತೀವ್ರ ಲಾಭಿ..!.. ಎಲೆನ್ ಕೆರಿಯರ್ ಇನ್ಸಿಟ್ಯೂಟ್ … ಈ ಹೆಸರು ಕೇಳದಿರೋರೇ ಕಡಿಮೆ  ಬಿಡಿ..ನಿಮ್ಮ ಮಕ್ಕಳನ್ನು ಡಾಕ್ಟರ್ಸ್.ಎಂಜಿನಿಯರ್ಸ್‌ ಮಾಡಿಸುತ್ತೇವೆ ಎಂದು ಪತ್ರಿಕೆಗಳಲ್ಲಿ ಪುಟಗಟ್ಟಲೇ ಜಾಹೀರಾತು ಕೊಟ್ಟು ಪೋಷಕರು-ವಿದ್ಯಾರ್ಥಿಗಳಲ್ಲಿ ಸಾಮೂಹಿಕ ಸನ್ನಿ ಸೃಷ್ಟಿಸಿದ ಸಂಸ್ಥೆ.ಮಕ್ಕಳ ಭವಿಷ್ಯದ ಬಗ್ಗೆ  ಬಣ್ಣ ಬಣ್ಣದ ಕನಸುಗಳನ್ನು ಬಿತ್ತಿ, ಪ್ರತಿ ವಿದ್ಯಾರ್ಥಿಯಿಂದಲೂ ಲಕ್ಷಾಂತರ … Read more

ಸರ್ಕಾರಿ ಕಚೇರಿಗೆ ಬಂದು ಗಾಂಜಾ ಹೊಡೆಯಲು ಬೆಂಕಿಪೊಟ್ಟಣ ಕೇಳಿದ ವಿದ್ಯಾರ್ಥಿಗಳು!

ಅಬಕಾರಿ ಇಲಾಖೆಯ ಕಚೇರಿಗೆ ತೆರಳಿದ ವಿದ್ಯಾರ್ಥಿಗಳ ಗುಂಪು ಗಾಂಜಾ ತುಂಬಿದ ಬೀಡಿ ಸೇದಲು ಬೆಂಕಿಪೊಟ್ಟಣ ಕೇಳಿದ ಘಟನೆ ವಿದ್ಯಾವಂತರ ನಾಡು ಕೇರಳದಲ್ಲಿ ನಡೆದಿದೆ. ಆದಿಮಲೈ ಜಿಲ್ಲೆಯ ತ್ರಿಶೂರ್ ನ ಶಾಲೆಯ ವಿದ್ಯಾರ್ಥಿಗಳು ಗಾಂಜಾ ಹೊಡೆಯಲು ಕಾಲೇಜಿಗೆ ಚಕ್ಕರ್ ಹೊಡೆದು ತಿರುಗುತ್ತಿದ್ದರು. ಈ ವೇಳೆ ಗಾಂಜಾ ಮತ್ತಿನಲ್ಲಿ ಆಯತಪ್ಪಿ ಅಬಕಾರಿ ಇಲಾಖೆ ಕಚೇರಿಗೆ ಬಂದು ಗಾಂಜಾ ತುಂಬಿದ ಬೀಡಿ ಸೇದಲು ಬೆಂಕಿಪೊಟ್ಟಣ ಕೇಳಿದ್ದಾರೆ. ಗಾಂಜಾ ಮತ್ತಿನಲ್ಲಿ ಯಾವುದೋ ಅಂಗಡಿ ಎಂದು ಭಾವಿಸಿದ ವಿದ್ಯಾರ್ಥಿಗಳು ಅಬಕಾರಿ ಇಲಾಖೆ ಕಚೇರಿಗೆ ಬಂದು … Read more