ಬಿಡಿಭಾಗ ಖರೀದಿಯಲ್ಲಿ ಕೋಟ್ಯಾಂತರ ಗೋಲ್ಮಾಲ್‌,ಬಿಎಂಟಿಸಿಯ 8 ಕಳಂಕಿತ ಅಧಿಕಾರಿ-ಸಿಬ್ಬಂದಿ ಸಸ್ಪೆಂಡ್.

ಬೆಂಗಳೂರು: ಬಿಎಂಟಿಸಿಯಲ್ಲಿ ಮತ್ತೊಂದು ಬೃಹತ್‌ ಅಕ್ರಮ ಪತ್ತೆಯಾಗಿದೆ. ಬಿಡಿಭಾಗಗಳ ಖರೀದಿಯಲ್ಲಿ ಕೋಟ್ಯಾಂತರ ಅಕ್ರಮ ನಡೆದಿರುವುದು ದೃಢಪಟ್ಟಿರುವುದರಿಂದ ಉಗ್ರಾಣ ವಿಭಾಗದ 8 ಅಧಿಕಾರಿ-ಸಿಬ್ಬಂದಿ ಅಮಾನತ್ತು ಮಾಡಲಾಗಿದೆ. ಶಿಸ್ತುಪಾಲನಾಧಿಕಾರಿಯೂ ಆಗಿರುವ  ಕೆಎಸ್‌ ಆರ್‌ ಟಿಸಿ ಎಂಡಿ ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ಬಿಎಂಟಿಸಿಯಲ್ಲಿ ಕಣ್ಣಾಯಿಸಿದೆಡೆಯಲ್ಲೆಲ್ಲಾ ಅಕ್ರಮವಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವುದೇ. ಸಾಲು ಸಾಲು ಅಕ್ರಮಗಳಲ್ಲಿ ಇಲ್ಲಿನ ಅಧಿಕಾರಿ ಸಿಬ್ಬಂದಿ ಶಾಮೀಲು ಆಗಿರುತ್ತಾರೆ.ಸುಳ್ಳು ಲೆಕ್ಕ ಕೊಟ್ಟು ನಿಗಮಕ್ಕೆ ಪಂಗನಾಮ ಹಾಕುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ.ತಮ್ಮ  ವಂಚನೆಯಿಂದಲೇ ಕೋಟ್ಯಾಂತರ ಹಣ ಕಮಾಯಿಸುತ್ತಿದ್ದಾರೆ.ಇವರ ಅಕ್ರಮಗಳಿಂದ ನಷ್ಟದಲ್ಲಿರುವ ನಿಗಮಕ್ಕೆ … Read more

“ವೈದೇಹಿ ಆಸ್ಪತ್ರೆ” ಆಸ್ತಿ ತೆರಿಗೆ ಕಡತ ಗೌಪ್ಯ ಪ್ರಕರಣ: ಕಂದಾಯಾಧಿಕಾರಿ ಬಸವಾಚಾರಿಗಿಂತ ಮುನ್ನ ಕಡತ ಮುಚ್ಚಿಟ್ಟಿದ್ರಂತೆ AC ಬಸವರಾಜ ಮಗಿ..!?

2024ರ ಅಂತ್ಯದಲ್ಲಿ ಕಂದಾಯಾಧಿಕಾರಿಯಾಗಿ ಬಸವಾಚಾರಿ ಚಾರ್ಜ್ …ಅದಕ್ಕೂ  ಮುನ್ನ ಆ ಹುದ್ದೆಯಲ್ಲಿದ್ದವರು ಬಸವರಾಜ ಮಗಿ ಅಂತೆ..ತನಿಖೆಯಲ್ಲಿ ದೃಢ.. ಬೆಂಗಳೂರು:50 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡತವನ್ನು ಬಚ್ಚಿಟ್ಟು ಕರ್ತವ್ಯಲೋಪ ಎಸಗಿದ ವೈಟ್ ಫೀಲ್ಡ್ ಕಂದಾಯಾಧಿಕಾರಿ ಬಸವಾಚಾರಿ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಮನಿಷ್ ಮೌದ್ಗಿಲ್ ಅವರು ಪತ್ತೆ ಮಾಡಿದ ಈ ಪ್ರಕರಣದಲ್ಲಿ ಕಡತವನ್ನು ಬಚ್ಚಿಟ್ಟಿದ್ದು ಬಸವಾಚಾರಿ ಮಾತ್ರವಲ್ಲ ಅವರ ಸ್ಥಾನದಲ್ಲಿ ಹಿಂದೆ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಅಧಿಕಾರಿಯು ಭಾಗಿಯಾಗಿರುವುದು ಗೊತ್ತಾಗಿದೆ.ಈ ಹಿನ್ನಲೆಯಲ್ಲಿ ಬಸವಾಚಾರಿ … Read more

EXCLUSIVE: IAS ಮನಿಷ್ ಮೌದ್ಗಿಲ್ ಬಲೆಗೆ ಬಿದ್ದ BBMP ಬೃಹತ್ ತಿಮಿಂಗಲ rOಬಸವಾಚಾರಿ..

50 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ವೈದೇಹಿ ಆಸ್ಪತ್ರೆ ಕಡತವನ್ನೇ 1 ವರ್ಷದಿಂದ ಬಚ್ಚಿಟ್ಟುಕೊಂಡಿದ್ದ ಖತರ್ನಾಕ್ ಕಂದಾಯಾಧಿಕಾರಿ ಬಸವಾಚಾರಿ..!! ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬೊಕ್ಕಸ ತುಂಬೊಕ್ಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ಮನಿಷ್ ಮೌದ್ಗಿಲ್ ಅಹಿರ್ನಿಷಿ ಪ್ರಯತ್ನ ಮಾಡ್ತಿದಾರೆ.ಇದರಿಂದ ಪಾಲಿಕೆ ಬೊಕ್ಕಸಕ್ಕೆ ಸಾವಿರಾರು ಕೋಟಿ ಸಂದಾಯವಾಯಿತು. ಮನಿಷ್ ಮೌದ್ಗಿಲ್ ಅವರ ಕಾರ್ಯಕ್ಷಮತೆಯಿಂದ ಪಾಲಿಕೆ ಇತಿಹಾಸದಲ್ಲೇ ಸಂಗ್ರಹವಾಗದಷ್ಟು ಆಸ್ತಿ ತೆರಿಗೆ   ಬೊಕ್ಕಸ ಸೇರಿತು.ದಶಕಗಳಿಂದಲೂ ಎಮ್ಮೆ ಚರ್ಮ ದಂತಾಗಿದ್ದ ಕಂದಾಯ ವಿಭಾಗದ ಅಧಿಕಾರಿಗಳು ಮೈ ಕೊಡವಿ ನಿಲ್ಲುವಂತೆ … Read more