advertise here

Search

ಕ್ರೈಸ್ತ ಧರ್ಮದ ಸಾರವೇ ಶಾಂತಿ,ಶಿಕ್ಷಣಕ್ಕೆ ಕ್ರೈಸ್ತರ ಕೊಡುಗೆ ಅಪಾರ: ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ,


ಬೆಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ
ಬೆಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ

ಬೆಂಗಳೂರು:ಕ್ರೈಸ್ತ ಸಮುದಾಯ ವಿಶ್ವಕ್ಕೆ ಶಾಂತಿ ಸಾರುವ ಧರ್ಮವಾಗಿದೆ. ಎಲ್ಲ ಧರ್ಮ ಮತ್ತು ವರ್ಗದವರಿಗೆ ಮಕ್ಕಳ ಶಿಕ್ಷಣಕ್ಕೆ ಶಿಕ್ಷಣ ಸಂಸ್ಥೆಗಳನ್ನು ತೆರದು ವಿದ್ಯಾವಂತ ಸಮಾಜ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯ ಅಪಾರ ಕೊಡುಗೆ ನೀಡಿದೆ.ಕ್ರೈಸ್ತರನ್ನು ಗುರುತಿಸುವ ಕೆಲಸವಾಗಬೇಕು ಎಂದು  ಬೆಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ ಆಶಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಕರ್ನಾಟಕ ಕ್ರೈಸ್ತ ಅಲ್ಪಸಂಖ್ಯಾತ ಜಾಗೃತಿ ವೇದಿಕೆ ವತಿಯಿಂದ ಡಾಕ್ಟರೇಟ್ ಪಡೆದ 72 ಕ್ರೈಸ್ತ  ಪದವೀಧರನ್ನು ಸನ್ಮಾನಿಸುವ  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಕರ್ನಾಟಕ ಕ್ರೈಸ್ತ ಅಲ್ಪಸಂಖ್ಯಾತ ಜಾಗೃತಿ ವೇದಿಕೆ 15ವರ್ಷಗಳಿಂದ ಕ್ರೈಸ್ತ ಸಮುದಾಯ ಸಂಘಟನೆ ಮತ್ತು ಕ್ರೈಸ್ತ ಸಮುದಾಯದವರನ್ನು ಗುರುತಿಸುವ ಕೆಲಸ ಮಾಡುತ್ತಿರುವುದು ಆದರ್ಶಪ್ರಾಯ ಬೆಳವಣಿಗೆ ಎಂದರು.

ALSO READ :  ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

ವೇದಿಕೆಯಲ್ಲಿ ಉಪಸ್ಥಿತರಿದ್ದ ಐ.ಪಿ.ಎಸ್.ಅಧಿಕಾರಿ ಸಿ.ಬಿ.ರಿಶ್ವಂತ್ ಕ್ರೈಸ್ತ ಸಮುದಾಯದ ಡಾಕ್ಟರೇಟ್ ಪಡೆದವರಿಗೆ ಗುರುತಿಸಿ, ಸನ್ಮಾನ ಮಾಡುವುದು ಒಳ್ಳೆಯ ಕೆಲಸ, ಉತ್ತಮ ಕೆಲಸ ಮಾಡುವ ಎಲ್ಲ ಸಂಘದವರಿಗೆ ಅಭಿನಂದನೆಗಳು.
ಒಳ್ಳೆಯ ಕೆಲಸ ಮಾಡಲು ಒಬ್ಬರಿಂದ ಸಾಧ್ಯವಿಲ್ಲ, ಎಲ್ಲರು ಒಂದುಗೂಡಿ ಕೆಲಸ ಮಾಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬರ್ತಲೋಮ್ ರವರು , ಐ.ಪಿ.ಎಸ್.ಪೊಲೀಸ್ ಅಧಿಕಾರಿ ರಿಶ್ವಂತ್ , ಸಂಗೀತ ನಿರ್ದೇಶಕ, ನಟ ಸಾಧಕೋಕಿಲ, ಆರೋಗ್ಯಸ್ವಾಮಿ, ಶಿಕ್ಷಣ ತಜ್ಞೆ ಗ್ಲೋರಿ, ವಕೀಲರಾದ ಬಾಲರಾಜ್, ಸಮಾಜದ ಮುಖಂಡರಾದ ಕಿರೀಟಪ್ಪ, ಶಾಂತಪ್ಪ,ವೇದಿಕೆಯ ಯೇಸುದಾಸ್, ಅರುಳಪ್ಪ, ಸಗಾಯರಾಜ್ ಪ್ರಕಾಶ್ ಎ.ಜಿ ಪಾಲ್ಗೊಂಡಿದ್ದರು. ಇದೇ ವೇಳೆ ಸ್ಮರಣೆ ಸಂಚಿಕೆ ಬಿಡುಗಡೆ ಮಾಡಲಾಯಿತು. ಏಸುಕ್ರಿಸ್ತ ಕುರಿತು ಭಕ್ತಿಗೀತೆಗಳನ್ನು ಹಾಡಲಾಯಿತು.


Political News

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

Scroll to Top