advertise here

Search

ಕ್ರೈಸ್ತ ಧರ್ಮದ ಸಾರವೇ ಶಾಂತಿ,ಶಿಕ್ಷಣಕ್ಕೆ ಕ್ರೈಸ್ತರ ಕೊಡುಗೆ ಅಪಾರ: ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ,


ಬೆಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ
ಬೆಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ

ಬೆಂಗಳೂರು:ಕ್ರೈಸ್ತ ಸಮುದಾಯ ವಿಶ್ವಕ್ಕೆ ಶಾಂತಿ ಸಾರುವ ಧರ್ಮವಾಗಿದೆ. ಎಲ್ಲ ಧರ್ಮ ಮತ್ತು ವರ್ಗದವರಿಗೆ ಮಕ್ಕಳ ಶಿಕ್ಷಣಕ್ಕೆ ಶಿಕ್ಷಣ ಸಂಸ್ಥೆಗಳನ್ನು ತೆರದು ವಿದ್ಯಾವಂತ ಸಮಾಜ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯ ಅಪಾರ ಕೊಡುಗೆ ನೀಡಿದೆ.ಕ್ರೈಸ್ತರನ್ನು ಗುರುತಿಸುವ ಕೆಲಸವಾಗಬೇಕು ಎಂದು  ಬೆಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ ಆಶಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಕರ್ನಾಟಕ ಕ್ರೈಸ್ತ ಅಲ್ಪಸಂಖ್ಯಾತ ಜಾಗೃತಿ ವೇದಿಕೆ ವತಿಯಿಂದ ಡಾಕ್ಟರೇಟ್ ಪಡೆದ 72 ಕ್ರೈಸ್ತ  ಪದವೀಧರನ್ನು ಸನ್ಮಾನಿಸುವ  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಕರ್ನಾಟಕ ಕ್ರೈಸ್ತ ಅಲ್ಪಸಂಖ್ಯಾತ ಜಾಗೃತಿ ವೇದಿಕೆ 15ವರ್ಷಗಳಿಂದ ಕ್ರೈಸ್ತ ಸಮುದಾಯ ಸಂಘಟನೆ ಮತ್ತು ಕ್ರೈಸ್ತ ಸಮುದಾಯದವರನ್ನು ಗುರುತಿಸುವ ಕೆಲಸ ಮಾಡುತ್ತಿರುವುದು ಆದರ್ಶಪ್ರಾಯ ಬೆಳವಣಿಗೆ ಎಂದರು.

ALSO READ :  ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ: ಬೀರೂರಿನ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ

ವೇದಿಕೆಯಲ್ಲಿ ಉಪಸ್ಥಿತರಿದ್ದ ಐ.ಪಿ.ಎಸ್.ಅಧಿಕಾರಿ ಸಿ.ಬಿ.ರಿಶ್ವಂತ್ ಕ್ರೈಸ್ತ ಸಮುದಾಯದ ಡಾಕ್ಟರೇಟ್ ಪಡೆದವರಿಗೆ ಗುರುತಿಸಿ, ಸನ್ಮಾನ ಮಾಡುವುದು ಒಳ್ಳೆಯ ಕೆಲಸ, ಉತ್ತಮ ಕೆಲಸ ಮಾಡುವ ಎಲ್ಲ ಸಂಘದವರಿಗೆ ಅಭಿನಂದನೆಗಳು.
ಒಳ್ಳೆಯ ಕೆಲಸ ಮಾಡಲು ಒಬ್ಬರಿಂದ ಸಾಧ್ಯವಿಲ್ಲ, ಎಲ್ಲರು ಒಂದುಗೂಡಿ ಕೆಲಸ ಮಾಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬರ್ತಲೋಮ್ ರವರು , ಐ.ಪಿ.ಎಸ್.ಪೊಲೀಸ್ ಅಧಿಕಾರಿ ರಿಶ್ವಂತ್ , ಸಂಗೀತ ನಿರ್ದೇಶಕ, ನಟ ಸಾಧಕೋಕಿಲ, ಆರೋಗ್ಯಸ್ವಾಮಿ, ಶಿಕ್ಷಣ ತಜ್ಞೆ ಗ್ಲೋರಿ, ವಕೀಲರಾದ ಬಾಲರಾಜ್, ಸಮಾಜದ ಮುಖಂಡರಾದ ಕಿರೀಟಪ್ಪ, ಶಾಂತಪ್ಪ,ವೇದಿಕೆಯ ಯೇಸುದಾಸ್, ಅರುಳಪ್ಪ, ಸಗಾಯರಾಜ್ ಪ್ರಕಾಶ್ ಎ.ಜಿ ಪಾಲ್ಗೊಂಡಿದ್ದರು. ಇದೇ ವೇಳೆ ಸ್ಮರಣೆ ಸಂಚಿಕೆ ಬಿಡುಗಡೆ ಮಾಡಲಾಯಿತು. ಏಸುಕ್ರಿಸ್ತ ಕುರಿತು ಭಕ್ತಿಗೀತೆಗಳನ್ನು ಹಾಡಲಾಯಿತು.


Political News

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

BMTC ಸಿಬ್ಬಂದಿಯಿಂದಲೇ ಬಸ್ ಕ್ಲೀನಿಂಗ್.. ಸ್ವಚ್ಛತೆಗೆಂದೇ ಕೊಟ್ಟ ಟೆಂಡರ್ ಹಣ ಎಲ್ಲೋಯ್ತು!?

Sahyadri science College alumni meet: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಮಹಾಸಮಾಗಮಕ್ಕೆ ಮುಹೂರ್ತ ಫಿಕ್ಸ್

Puneeth rajkumar award: ನ್ಯೂಸ್ ಚಾನೆಲ್‌ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 12 ಕ್ಯಾಮೆರಾಮನ್ ಮಿತ್ರರಿಗೆ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ

Scroll to Top