advertise here

Search

bBMP ಅಂಗಳದಲ್ಲಿ 24 ಕೋಟಿ ಹಗರಣದ ಸದ್ದು-ಅಕ್ರಮ ಸಾಬೀತಾದ್ರೆ ಜೈಲ್  ಫಿಕ್ಸ್..!


ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಮತ್ತೊಂದು ಬೃಹತ್ ಹಗರಣ ಸುದ್ದಿ ಮಾಡಿದೆ.ಬಿಬಿಎಂಪಿ ದಾಸರಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ 25 ಕೋಟಿ ಮೊತ್ತದ  ಬೃಹತ್ ಹಗರಣದ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ಕೆಲಸವನ್ನೇ ಮಾಡದೆ ಗುತ್ತಿಗೆದಾರರಿಗೆ ಬಿಲ್ ಪಾವತಿಸಿದ್ದ ಆಪಾದನೆ ದಾಸರಹಳ್ಳಿ ವಲಯದ ಎಕ್ಸಿಕ್ಯೂಟಿವ್ ಎಂಜಿನಿಯರ್ ಯದುಕೃಷ್ಣ ವಿರುದ್ಧ ಕೇಳಿಬಂದಿತ್ತು.ಹಾಗೆಯೇ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಮೂವರು ಕಾಂಟ್ರ್ಯಾಕ್ಟರ್ಸ್  ಬಿಲ್ ಪಾವತಿಸಿಕೊಂಡಿದ್ದರೆನ್ನುವ  ಆರೋಪ ಮಾಡಲಾಗಿತ್ತು.ಈ ಹಿನ್ನಲೆಯಲ್ಲಿ ವಲಯ ಆಯುಕ್ತರು 25 ಕೋಟಿ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ದಾಸರಹಳ್ಳಿ ವಲಯದಲ್ಲಿ ನಡೆದಿದ್ದ 25 ಕೋಟಿ ಅಕ್ರಮದ ವಿರುದ್ದ ತನಿಖೆಗೆ ಆದೇಶಿಸಲಾಗಿದೆ.ಈ ಆದೇಶದಿಂದ ದಾಸರಹಳ್ಳಿ ವಲಯದ ಕಾರ್ಯಪಾಲಕ ಅಭಿಯಂತರ ಯದುಕೃಷ್ಣಗೆ ಸಂಕಷ್ಟ ಎದುರಾಗಿದೆ. ಹಾಗೆಯೆ  ಕಾಂಟ್ರ್ಯಾಕ್ಟರ್ಸ್ ಗಳಾದ ಅಭಿಜಿತ್, ತೇಜೇಗೌಡ ಮತ್ತು ನಾರಾಯಣ ಗೌಡ ಅವರಿಗೂ ಸಮಸ್ಯೆ ಸೃಷ್ಟಿಯಾಗಿದೆ. ಅಂದ್ಹಾಗೆ ಈ ಬಗ್ಗೆ ದಾಸರಹಳ್ಳಿ ಮಾಜಿ ಶಾಸಕ ಹಾಗು ಕಾಂಗ್ರೆಸ್ ಮುಖಂಡ ಮಂಜುನಾಥ್ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು.

ಅಭಿಜಿತ್, ತೇಜೇಗೌಡ, ನಾರಾಯಣಗೌಡ  ಎನ್ನುವ ಗುತ್ತಿಗೆದಾರರು ದಾಸರಹಳ್ಳಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಯದುಕೃಷ್ಣ ಜತೆ  ಸೇರಿ ಕೊಂಡು 25 ಕೋಟಿ ಮೊತ್ತದ ಕಾಮಗಾರಿಯ ಬಿಲ್ ಗಳಲ್ಲಿ ಲೂಟಿ ಮಾಡಿದ್ದಾರೆನ್ನುವ ಹಿನ್ನಲೆಯಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.

ALSO READ :  ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ಏರ್ ಇಂಡಿಯಾ ದುರಂತ: 140 ಪ್ರಯಾಣಿಕರು ಪಾರು!

ರಾಜ್ಯ ಸರ್ಕಾರ ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆ ಆಗಿರುವ 110 ಹಳ್ಳಿಗಳ ಅಭಿವೃದ್ಧಿಗೆ 25 ಕೋಟಿ ವಿಶೇಷ ಅನುದಾನವನ್ನು ಎರಡು ವರ್ಷದ ಹಿಂದೆ ಮಂಜೂರು ಮಾಡಿತ್ತು. ಹಳ್ಳಿಗಳಲ್ಲಿ ಮೂಲಸೌಕರ್ಯ ಅಂದರೆ ರಸ್ತೆ ಒಳಚರಂಡಿ ನಿರ್ಮಿಸಲು ಬಳಸಬೇಕೆನ್ನುವ ಸ್ಪಷ್ಟ ಆದೇಶ ಮಾಡಲಾಗಿತ್ತು.ಆದರೆ ಗುತ್ತಿಗೆದಾರಾದ ಅಭಿಜಿತ್, ತೇಜು ಗೌಡ, ನಾರಾಯಣಗೌಡ ಅವರು, ಇಂಜಿನಿಯರ್ ಯದುಕೃಷ್ಣ ಜತೆ ಸೇರಿಕೊಂಡು ಕಾಮಗಾರಿ ನಡೆಸದೆಯೇ ಬಿಲ್ ಪಡೆದಿರುತ್ತಾರೆ ಎನ್ನುವ ಅಂಶ ದೂರಿನಲ್ಲಿ ಉಲ್ಲೇಖವಾಗಿತ್ತು.

ಬಿಬಿಎಂಪಿ ಮುಖ್ಯ ಆಯುಕ್ತರು ಅನುಮೋದನೆ  ನೀಡುವ ಮೊದಲೇ ವರ್ಕರ್ ನೀಡಲಾಗಿತ್ತು.ಪಿಎಂಸಿ ಅನುಮೋದನೆ ಮೊದಲೇ ಮುಖ್ಯ ಕಂಟ್ರಾಕ್ಟರ್ ಗೆ ವರ್ಕರ್ ಆರ್ಡರ್ ನೀಡಲಾಗಿತ್ತು.110 ಹಳ್ಳಿಗಳ ಬದಲು ಹಾಲಿ ಇರುವ ಬಿಬಿಎಂಪಿ ಜಾಗದಲ್ಲಿ ರಸ್ತೆ ಮತ್ತು ಒಳಚರಂಡಿ ಮಾಡಿದ್ದ ಮಹಾನುಭಾವರು ಕೇವಲ ಒಂದು ತಿಂಗಳ ಅವಧಿಯಲ್ಲಿ 10 ಕೋಟಿ ಕೆಲಸ ಮುಗಿದಿದೆ ಎಂದು ಬಿಲ್ ಬರೆದಿದ್ದರಂತೆ.ಎಲ್ಲೂ ಕೆಲಸವೇ ಮಾಡದೆ ನಕಲಿ ಬಿಲ್ ಸೃಷ್ಟಿ ಮಾಡಲಾಗಿದೆ ಎಂದುಲೋಕಾಯುಕ್ತದಲ್ಲಿ ದೂರು ದಾಖಲಾಗಿಸಲಾಗಿತ್ತು.

ಈ ಬಗ್ಗೆ ಮಾದ್ಯಮಗಳು ವರದಿನ ಮಾಡಿದ್ದ ಬೆನ್ನಲ್ಲೇ ಮೇಲ್ನೋಟಕ್ಕೆ ಅಕ್ರಮ ನಡೆದಿರುವುದು ಸ್ಪಷ್ಟವಾಗಿರುವುದರಿಂದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆದೇಶಿಸಲಾಗಿದೆ.ತನಿಖೆಯಲ್ಲಿ ಇ.ಇ. ಯದುಕೃಷ್ಣ ಹಾಗೂಕಾಂಟ್ರ್ಯಾಕ್ಟರ್ಸ್ ಗಳಾದ  ಅಭಿಜಿತ್, ತೇಜೇಗೌಡ ಮತ್ತು ನಾರಾಯಣ ಗೌಡ ಸೇರಿ ಕೆಲಸವೇ ಮಾಡದೆ 25 ಕೋಟಿ ಕೆಲಸಕ್ಕೆ ನಕಲಿ ಬಿಲ್ ಸೃಷ್ಟಿಸಿರುವ ಆರೋಪಕ್ಕೆ ಸಾಕ್ಷ್ಯಗಳು ಸಿಕ್ಕಿದ್ದೇ ಆದಲ್ಲಿ ಎಲ್ಲಾ ನಾಲ್ವರು ಜೈಲು ಸೇರುವ ಸಾಧ್ಯತೆಯಂತೂ ದಟ್ಟವಾಗಿದೆ.


Political News

ನೆಹರೂ ಬದುಕಿದ್ದರೆ ಕಾನ್ಶಿರಾಮ್ ಅವರನ್ನೇ ಸಿಎಂ ಮಾಡುತ್ತಿದ್ದರು: ರಾಹುಲ್ ಗಾಂಧಿ 

ನನ್ನ ದೇಹದಲ್ಲಿ ಪ್ರಾಣವಿರುವವರೆಗೂ ಜನರ ಸೇವೆ ಮಾಡುತ್ತೇನೆ : ಸಿದ್ದರಾಮಯ್ಯ

ಅಡುಗೆ ಅನಿಲ ಬಿಕ್ಕಟ್ಟು: ಬಿಜೆಪಿ ಸಂಸದರ ಮೌನ ಖಂಡಿಸಿ, ಸಂಸತ್ತಿನಲ್ಲಿ ಧ್ವನಿ ಎತ್ತಲು ಡಿಕೆಶಿ ಆಗ್ರಹ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ‘ಗ್ರೀನ್ ಸಿಗ್ನಲ್’ ಕೊಟ್ಟ ಇರಾನ್!

ಮಾರ್ಚ್ ಅಂತ್ಯಕ್ಕೆ ಕರ್ನಾಟಕದ ಗದ್ದುಗೆ ಬದಲಾವಣೆ ಪಕ್ಕಾ?! ಡಿಕೆಶಿಗೆ ಸಿಎಂ ಪಟ್ಟ ಕಟ್ಟಲು ಸಜ್ಜಾದ ಹೈಕಮಾಂಡ್!

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಐತಿಹಾಸಿಕ ಪಯಣಕ್ಕೆ ಸಿಎಂ ಅಭಿನಂದನೆ

ಸಂವಿಧಾನ ರಕ್ಷಣೆಗೆ ಸ್ಪೀಕರ್ ಪೀಠಕ್ಕೆ ಸವಾಲು: ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ

ವಾಣಿಜ್ಯ ಎಲ್‌ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Scroll to Top