advertise here

Search

ಪಶ್ಚಿಮ ಏಷ್ಯಾ ಯುದ್ಧದ ಭೀತಿ: ಸಂಸತ್‌ನಲ್ಲಿ ಪ್ರಧಾನಿ ಮೋದಿ ‘ಅಭಯ ಹಸ್ತ’; ಭಾರತದ ರಣತಂತ್ರವೇನು?

pm modi parliament speech

ನವದೆಹಲಿ: ಮಧ್ಯಪ್ರಾಚ್ಯದಲ್ಲಿ (West Asia) ಹೊತ್ತಿಕೊಂಡಿರುವ ಯುದ್ಧ ಈಗ ಜಾಗತಿಕ ಆರ್ಥಿಕತೆಯ ಮೇಲೆ ಭೀಕರ ಪರಿಣಾಮ ಬೀರಲಾರಂಭಿಸಿದೆ. ಈ ಬಿಕ್ಕಟ್ಟಿನ ಕುರಿತು ಇಂದು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, “ಪರಿಸ್ಥಿತಿ ಅತ್ಯಂತ ಆತಂಕಕಾರಿಯಾಗಿದೆ, ಆದರೆ ಭಾರತವು ಯಾವುದೇ ಸವಾಲನ್ನು ಎದುರಿಸಲು ಸನ್ನದ್ಧವಾಗಿದೆ” ಎಂದು ದೇಶದ ಜನತೆಗೆ ಭರವಸೆ ನೀಡಿದ್ದಾರೆ.

ಭಾರತದ ತೈಲ ಮತ್ತು ಅನಿಲ ಪೂರೈಕೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ಹಡಗುಗಳ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದೆ. “ನಮ್ಮ ಕಚ್ಚಾ ತೈಲ, ನೈಸರ್ಗಿಕ ಅನಿಲ ಮತ್ತು ರಸಗೊಬ್ಬರ ಪೂರೈಕೆಯ ಬಹುಪಾಲು ಈ ಮಾರ್ಗದ ಮೂಲಕವೇ ಬರುತ್ತದೆ. ಯುದ್ಧದಿಂದಾಗಿ ಈ ಮಾರ್ಗ ಅಸ್ತವ್ಯಸ್ತಗೊಂಡಿರುವುದು ಭಾರತಕ್ಕೆ ಸವಾಲನ್ನು ತಂದೊಡ್ಡಿದೆ,” ಎಂದು ಮೋದಿ ವಿವರಿಸಿದರು.

ಭಾರತದ ಪರ್ಯಾಯ ರಣತಂತ್ರ:

ಯುದ್ಧದ ಬಿಸಿ ತಟ್ಟದಂತೆ ಕೇಂದ್ರ ಸರ್ಕಾರ ಐದು ಪ್ರಮುಖ ಕ್ರಮಗಳನ್ನು ಕೈಗೊಂಡಿರುವುದಾಗಿ ಪ್ರಧಾನಿ ತಿಳಿಸಿದರು:

ಮೂಲಗಳ ವೈವಿಧ್ಯತೆ: ಈ ಹಿಂದೆ ಕೇವಲ 27 ರಾಷ್ಟ್ರಗಳಿಂದ ಇಂಧನ ಆಮದು ಮಾಡಿಕೊಳ್ಳುತ್ತಿದ್ದ ಭಾರತ, ಈಗ 41 ರಾಷ್ಟ್ರಗಳೊಂದಿಗೆ ಸಂಪರ್ಕ ಸಾಧಿಸಿ ಪೂರೈಕೆಯನ್ನು ಖಚಿತಪಡಿಸಿಕೊಳ್ಳುತ್ತಿದೆ.

ಎಲ್‌ಪಿಜಿ ಸ್ವಾವಲಂಬನೆ: ಭಾರತಕ್ಕೆ ಬೇಕಾದ ಶೇ. 60ರಷ್ಟು ಎಲ್‌ಪಿಜಿ ಆಮದು ಮಾಡಿಕೊಳ್ಳಲಾಗುತ್ತಿದ್ದು, ದೇಶೀಯ ಉತ್ಪಾದನೆಯನ್ನು ಯುದ್ಧೋಪಾದಿಯಲ್ಲಿ ಹೆಚ್ಚಿಸಲು ಸೂಚಿಸಲಾಗಿದೆ.

ALSO READ :  ಬೆಂಗಳೂರು ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ: ಮಾಲೀಕ, ಗುತ್ತಿಗೆದಾರ ಅರೆಸ್ಟ್

ಅಂತರ್-ಸಚಿವಾಲಯ ಸಮಿತಿ: ಇಂಧನ ಮತ್ತು ಆಹಾರ ಪೂರೈಕೆಯನ್ನು ಮೇಲ್ವಿಚಾರಣೆ ಮಾಡಲು ಪ್ರತಿದಿನ ಸಭೆ ನಡೆಸುವ ವಿಶೇಷ ಸಮಿತಿಯನ್ನು ರಚಿಸಲಾಗಿದೆ.

ನೌಕಾ ಸಂರಕ್ಷಣೆ: ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ್ದ ಭಾರತದ ಹಲವು ಹಡಗುಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.

ಕಟ್ಟುನಿಟ್ಟಿನ ಕ್ರಮ: ಯುದ್ಧದ ನೆಪದಲ್ಲಿ ಕೃತಕ ಅಭಾವ ಸೃಷ್ಟಿಸುವವರು, ಕಾಳಸಂತೆಕೋರರು ಮತ್ತು ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.

ಇದನ್ನೂ ಓದಿ | ಟ್ರಂಪ್ ಡೆಡ್‌ಲೈನ್ ಅಂತ್ಯ: ಇರಾನ್ ಮೇಲೆ ದಾಳಿ ನಡೆಸುವ ಬದಲು 5 ದಿನ ಕದನ ವಿರಾಮ ಘೋಷಿಸಿದ ಅಮೆರಿಕ!

ಕೊರೊನಾ ಮಾದರಿಯ ಒಗ್ಗಟ್ಟು ಅಗತ್ಯ:

“ಹಿಂದೆ ನಾವು ಕೊರೊನಾ ಬಿಕ್ಕಟ್ಟನ್ನು ಒಗ್ಗಟ್ಟಿನಿಂದ ಎದುರಿಸಿದಂತೆ, ಈಗಿನ ಜಾಗತಿಕ ಅಸ್ಥಿರತೆಯನ್ನೂ ಎದುರಿಸಬೇಕಿದೆ. ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ದೀರ್ಘಕಾಲ ಉಳಿಯುವ ಸಾಧ್ಯತೆಯಿದೆ, ಹೀಗಾಗಿ ನಾವೆಲ್ಲರೂ ಜಾಗರೂಕರಾಗಿರಬೇಕು” ಎಂದು ಮೋದಿ ಕರೆ ನೀಡಿದರು. ಗಲ್ಫ್ ರಾಷ್ಟ್ರಗಳಲ್ಲಿರುವ ಸುಮಾರು 1 ಕೋಟಿ ಭಾರತೀಯರ ಸುರಕ್ಷತೆ ಸರ್ಕಾರದ ಮೊದಲ ಆದ್ಯತೆ ಎಂದು ಅವರು ಒತ್ತಿ ಹೇಳಿದ್ದಾರೆ.

ಯುದ್ಧವು ಮಾನವೀಯತೆಯ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಶಾಂತಿ ಮತ್ತು ರಾಜತಾಂತ್ರಿಕ ಮಾತುಕತೆಗಳ ಮೂಲಕವೇ ಸಮಸ್ಯೆ ಬಗೆಹರಿಯಬೇಕು ಎಂಬುದು ಭಾರತದ ಸ್ಪಷ್ಟ ನಿಲುವಾಗಿದೆ ಎಂದು ಪ್ರಧಾನಿ ಮೋದಿ ಸದನಕ್ಕೆ ತಿಳಿಸಿದರು.


Political News

ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ: ದಾವಣಗೆರೆ ಟಿಕೆಟ್ ಫೈಟ್ ಈಗ ಹೈಕಮಾಂಡ್ ಅಂಗಳಕ್ಕೆ!

ಅಮೆರಿಕಾ–ಇರಾನ್ ಯುದ್ಧದ ಭೀತಿ: ಶಾಂತಿ ಒಪ್ಪಂದಕ್ಕೆ ಟ್ರಂಪ್ ನಕಾರ, ಇರಾನ್ ತೈಲ ಕೇಂದ್ರಗಳೇ ಟಾರ್ಗೆಟ್!

ಹುಳಿಯಾರು ಲಾಕಪ್ ಡೆತ್ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ!

ದಾವಣಗೆರೆ ದಕ್ಷಿಣ ಉಪಚುನಾವಣೆ: ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ!

ಜಿಬಿಎ ಟೌನ್‌ ಪ್ಲ್ಯಾನಿಂಗ್‌ನಲ್ಲಿ ‘ಪರ್ಸಂಟೇಜ್‌’ ಪರ್ವ; ಡಿಸಿಎಂ ಹೆಸರಲ್ಲೇ ಅಧಿಕಾರಿಗಳ ಲೂಟಿ ದರ್ಬಾರ್‌!

ವರ್ಗಾವಣೆ ದಂಧೆಗೆ ಹೈಕೋರ್ಟ್ ಬ್ರೇಕ್! “ಸಿಎಂಗೆ ಇದಕ್ಕಿಂತ ದೊಡ್ಡ ಕೆಲಸಗಳಿವೆ” ಎಂದ ನ್ಯಾಯಪೀಠ

ಉಪಚುನಾವಣೆ ಸಮರ: ಯುಗಾದಿ ಹಬ್ಬದಂದೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಭಿನ್ನಮತಕ್ಕೆ ಸಿಎಂ ‘ಬ್ರೇಕ್’; ಸಂಧಾನ ಸಭೆ ಯಶಸ್ವಿ!

Scroll to Top