advertise here

Search

ಕೆಜಿಎಫ್-3 ತುಂಬಾ ದೊಡ್ಡದಾಗಿ ಬರಲಿದೆ: ಸಿಹಿಸುದ್ದಿ ನೀಡಿದ ಯಶ್!


ಕೆಜಿಎಫ್-3 ಖಂಡಿತ ಬರುತ್ತೆ. ಈ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಮಾತುಕತೆ ನಡೆಯುತ್ತಿದೆ ಎಂದು ನಟ ಯಶ್ ಹೇಳುವ ಮೂಲಕ ಅಭಿಮಾನಿಗಳ ಕುತೂಹಲವನ್ನು ಇಮ್ಮಡಿಗೊಳಿಸಿದ್ದಾರೆ.

ಕೆಜಿಎಫ್, ಕೆಜಿಎಫ್-2 ಯಶಸ್ಸಿನ ನಂತರ ಯಶ್ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದರೆ, ಪ್ರಶಾಂತ್ ನೀಲ್ ಕೂಡ ಹಲವು ಚಿತ್ರಗಳಲ್ಲಿ ಬ್ಯೂಸಿ ಆಗಿದ್ದರು. ಇದರಿಂದ ಕೆಜಿಎಫ್-3 ಚಿತ್ರದ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿದ್ದವು.

ಹಾಲಿವುಡ್ ಸಿನಿಮಾಗಳ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ಯಶ್, ಕೆಜಿಎಫ್-3 ಚಿತ್ರದ ಕುರಿತು ಅಪ್ ಡೇಟ್ ನೀಡಿದ್ದು, ಕೆಜಿಎಫ್-3 ಚಿತ್ರದ ಮಾತುಕತೆ ನಡೆಯುತ್ತಿದೆ. ಚಿತ್ರದ ಸಿಕ್ವೇಲ್ ಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂದಿನ ವರ್ಷಗಳಲ್ಲಿ ಈ ಚಿತ್ರ ಬರುವುದು ಖಚಿತ ಎಂದು ಹೇಳಿದ್ದಾರೆ.

ALSO READ :  exclusive:"ರಿಪಬ್ಲಿಕ್ ಕನ್ನಡ"ದ ಬಳಗಕ್ಕೆ ಅರ್ನಾಬ್ ಮೆಚ್ಚಿದ  "ರಾಷ್ಟ್ರವಾದಿ" ಪತ್ರಕರ್ತನ ಎಂಟ್ರಿ…?

ಪ್ರಸ್ತುತ ನಾನು ಟಾಕ್ಸಿಕ್ ಮತ್ತು ರಾಮಾಯಣ್ ಚಿತ್ರಗಳತ್ತ ಗಮನ ಹರಿಸಿದ್ದೇನೆ. ಕೆಜಿಎಫ್-3 ತುಂಬಾ ದೊಡ್ಡ ಮಟ್ಟದಲ್ಲಿ ಬರಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಏಕಾಗ್ರತೆ ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕಾಗಿದೆ. ಇದಕ್ಕೆ ಸಾಕಷ್ಟು ಕಾಲವಕಾಶ ಬೇಕು ಎಂದು ಯಶ್ ವಿವರಿಸಿದರು.

ಕೆಜಿಎಫ್ ಜನಪ್ರಿಯತೆಯನ್ನು ಕ್ಯಾಶ್ ಮಾಡಿಕೊಳ್ಳುವ ಆತುರ ನಮಗಿಲ್ಲ. ಜನರು ನಮಗೆ ಏನು ಬೇಕೋ ಅದಕ್ಕಿಂತ ಹೆಚ್ಚು ನೀಡಿದ್ದಾರೆ. ಇದೊಂದು ಅದ್ಭುತ ಚಿತ್ರವಾಗಿರುವುದರಿಂದ ಅದಕ್ಕೆ ತಕ್ಕಂತೆ ನಾವು ಸಿದ್ಧತೆ ಮಾಡಿಕೊಳ್ಳಬೇಕಿದೆ. ಕೆಜಿಎಫ್ ಪಾತ್ರಗಳನ್ನು ಜನರು ಒಪ್ಪಿರುವುದರಿಂದ ನಾವು ಈ ಬಾರಿ ತುಂಬಾ ದೊಡ್ಡ ಮಟ್ಟದಲ್ಲಿ ಚಿತ್ರಕ್ಕೆ ಕೈ ಹಾಕಲಿದ್ದೇವೆ ಎಂದು ಅವರು ವಿವರಿಸಿದರು.


Political News

ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ: ದಾವಣಗೆರೆ ಟಿಕೆಟ್ ಫೈಟ್ ಈಗ ಹೈಕಮಾಂಡ್ ಅಂಗಳಕ್ಕೆ!

ಅಮೆರಿಕಾ–ಇರಾನ್ ಯುದ್ಧದ ಭೀತಿ: ಶಾಂತಿ ಒಪ್ಪಂದಕ್ಕೆ ಟ್ರಂಪ್ ನಕಾರ, ಇರಾನ್ ತೈಲ ಕೇಂದ್ರಗಳೇ ಟಾರ್ಗೆಟ್!

ಹುಳಿಯಾರು ಲಾಕಪ್ ಡೆತ್ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ!

ದಾವಣಗೆರೆ ದಕ್ಷಿಣ ಉಪಚುನಾವಣೆ: ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ!

ಜಿಬಿಎ ಟೌನ್‌ ಪ್ಲ್ಯಾನಿಂಗ್‌ನಲ್ಲಿ ‘ಪರ್ಸಂಟೇಜ್‌’ ಪರ್ವ; ಡಿಸಿಎಂ ಹೆಸರಲ್ಲೇ ಅಧಿಕಾರಿಗಳ ಲೂಟಿ ದರ್ಬಾರ್‌!

ವರ್ಗಾವಣೆ ದಂಧೆಗೆ ಹೈಕೋರ್ಟ್ ಬ್ರೇಕ್! “ಸಿಎಂಗೆ ಇದಕ್ಕಿಂತ ದೊಡ್ಡ ಕೆಲಸಗಳಿವೆ” ಎಂದ ನ್ಯಾಯಪೀಠ

ಉಪಚುನಾವಣೆ ಸಮರ: ಯುಗಾದಿ ಹಬ್ಬದಂದೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಭಿನ್ನಮತಕ್ಕೆ ಸಿಎಂ ‘ಬ್ರೇಕ್’; ಸಂಧಾನ ಸಭೆ ಯಶಸ್ವಿ!

Scroll to Top