advertise here

Search

ಕೆಜಿಎಫ್-3 ತುಂಬಾ ದೊಡ್ಡದಾಗಿ ಬರಲಿದೆ: ಸಿಹಿಸುದ್ದಿ ನೀಡಿದ ಯಶ್!


ಕೆಜಿಎಫ್-3 ಖಂಡಿತ ಬರುತ್ತೆ. ಈ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಮಾತುಕತೆ ನಡೆಯುತ್ತಿದೆ ಎಂದು ನಟ ಯಶ್ ಹೇಳುವ ಮೂಲಕ ಅಭಿಮಾನಿಗಳ ಕುತೂಹಲವನ್ನು ಇಮ್ಮಡಿಗೊಳಿಸಿದ್ದಾರೆ.

ಕೆಜಿಎಫ್, ಕೆಜಿಎಫ್-2 ಯಶಸ್ಸಿನ ನಂತರ ಯಶ್ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದರೆ, ಪ್ರಶಾಂತ್ ನೀಲ್ ಕೂಡ ಹಲವು ಚಿತ್ರಗಳಲ್ಲಿ ಬ್ಯೂಸಿ ಆಗಿದ್ದರು. ಇದರಿಂದ ಕೆಜಿಎಫ್-3 ಚಿತ್ರದ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿದ್ದವು.

ಹಾಲಿವುಡ್ ಸಿನಿಮಾಗಳ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ಯಶ್, ಕೆಜಿಎಫ್-3 ಚಿತ್ರದ ಕುರಿತು ಅಪ್ ಡೇಟ್ ನೀಡಿದ್ದು, ಕೆಜಿಎಫ್-3 ಚಿತ್ರದ ಮಾತುಕತೆ ನಡೆಯುತ್ತಿದೆ. ಚಿತ್ರದ ಸಿಕ್ವೇಲ್ ಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂದಿನ ವರ್ಷಗಳಲ್ಲಿ ಈ ಚಿತ್ರ ಬರುವುದು ಖಚಿತ ಎಂದು ಹೇಳಿದ್ದಾರೆ.

ALSO READ :  ಕೆಂಗೇರಿ ಕೆರೆಪಾಲಾಗಿದ್ದ ಅಣ್ಣ-ತಂಗಿ ಶವ ಪತ್ತೆ: ಪೌರಕಾರ್ಮಿಕ ತಾಯಿಯ ಆಕ್ರಂದನ!

ಪ್ರಸ್ತುತ ನಾನು ಟಾಕ್ಸಿಕ್ ಮತ್ತು ರಾಮಾಯಣ್ ಚಿತ್ರಗಳತ್ತ ಗಮನ ಹರಿಸಿದ್ದೇನೆ. ಕೆಜಿಎಫ್-3 ತುಂಬಾ ದೊಡ್ಡ ಮಟ್ಟದಲ್ಲಿ ಬರಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಏಕಾಗ್ರತೆ ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕಾಗಿದೆ. ಇದಕ್ಕೆ ಸಾಕಷ್ಟು ಕಾಲವಕಾಶ ಬೇಕು ಎಂದು ಯಶ್ ವಿವರಿಸಿದರು.

ಕೆಜಿಎಫ್ ಜನಪ್ರಿಯತೆಯನ್ನು ಕ್ಯಾಶ್ ಮಾಡಿಕೊಳ್ಳುವ ಆತುರ ನಮಗಿಲ್ಲ. ಜನರು ನಮಗೆ ಏನು ಬೇಕೋ ಅದಕ್ಕಿಂತ ಹೆಚ್ಚು ನೀಡಿದ್ದಾರೆ. ಇದೊಂದು ಅದ್ಭುತ ಚಿತ್ರವಾಗಿರುವುದರಿಂದ ಅದಕ್ಕೆ ತಕ್ಕಂತೆ ನಾವು ಸಿದ್ಧತೆ ಮಾಡಿಕೊಳ್ಳಬೇಕಿದೆ. ಕೆಜಿಎಫ್ ಪಾತ್ರಗಳನ್ನು ಜನರು ಒಪ್ಪಿರುವುದರಿಂದ ನಾವು ಈ ಬಾರಿ ತುಂಬಾ ದೊಡ್ಡ ಮಟ್ಟದಲ್ಲಿ ಚಿತ್ರಕ್ಕೆ ಕೈ ಹಾಕಲಿದ್ದೇವೆ ಎಂದು ಅವರು ವಿವರಿಸಿದರು.


Political News

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

Scroll to Top