advertise here

Search

ಸರ್ಕಾರಿ ಕಚೇರಿಗೆ ಬಂದು ಗಾಂಜಾ ಹೊಡೆಯಲು ಬೆಂಕಿಪೊಟ್ಟಣ ಕೇಳಿದ ವಿದ್ಯಾರ್ಥಿಗಳು!


ಅಬಕಾರಿ ಇಲಾಖೆಯ ಕಚೇರಿಗೆ ತೆರಳಿದ ವಿದ್ಯಾರ್ಥಿಗಳ ಗುಂಪು ಗಾಂಜಾ ತುಂಬಿದ ಬೀಡಿ ಸೇದಲು ಬೆಂಕಿಪೊಟ್ಟಣ ಕೇಳಿದ ಘಟನೆ ವಿದ್ಯಾವಂತರ ನಾಡು ಕೇರಳದಲ್ಲಿ ನಡೆದಿದೆ.

ಆದಿಮಲೈ ಜಿಲ್ಲೆಯ ತ್ರಿಶೂರ್ ನ ಶಾಲೆಯ ವಿದ್ಯಾರ್ಥಿಗಳು ಗಾಂಜಾ ಹೊಡೆಯಲು ಕಾಲೇಜಿಗೆ ಚಕ್ಕರ್ ಹೊಡೆದು ತಿರುಗುತ್ತಿದ್ದರು. ಈ ವೇಳೆ ಗಾಂಜಾ ಮತ್ತಿನಲ್ಲಿ ಆಯತಪ್ಪಿ ಅಬಕಾರಿ ಇಲಾಖೆ ಕಚೇರಿಗೆ ಬಂದು ಗಾಂಜಾ ತುಂಬಿದ ಬೀಡಿ ಸೇದಲು ಬೆಂಕಿಪೊಟ್ಟಣ ಕೇಳಿದ್ದಾರೆ.

ಗಾಂಜಾ ಮತ್ತಿನಲ್ಲಿ ಯಾವುದೋ ಅಂಗಡಿ ಎಂದು ಭಾವಿಸಿದ ವಿದ್ಯಾರ್ಥಿಗಳು ಅಬಕಾರಿ ಇಲಾಖೆ ಕಚೇರಿಗೆ ಬಂದು ಬೆಂಕಿಪೊಟ್ಟಣ ಕೇಳಿದ್ದಾರೆ. ವಿಷಯ ತಿಳಿದು ಅಧಿಕಾರಿಗಳು ಪೊಲೀಸರು ಕರೆದು ಅರೆಸ್ಟ್ ಮಾಡಿಸಿದ್ದಾರೆ.

ALSO READ :  "ವಿಸ್ತಾರ" ಪುನರಾಂಭಕ್ಕೆ ದೊಡ್ಡ ಹಿನ್ನಡೆ..!! "ಚಾನೆಲ್" ಮಾಲೀಕತ್ವದ ಕಂಪೆನಿಯ ಸ್ವತ್ತುಗಳು ಜಪ್ತಿ..!?

ವಿದ್ಯಾರ್ಥಿಗಳು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ವಿದ್ಯಾರ್ಥಿಗಳ ಬಳಿ ಗಾಂಜಾ, ಆಶಿಶ್ ಆಯಿಲ್, ಬೀಡಿ ಸೀಗರೇಟಿಗೆ ತುಂಬಲು ಬೇಕಾದ ವಸ್ತುಗಳೊಂದಿಗೆ ಹಿಡಿದ ಪೊಲೀಸರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಹೋಟೆಲ್ ನಲ್ಲಿ ಊಟ ಮಾಡಿದ ವಿದ್ಯಾರ್ಥಿಗಳು ಗಾಂಜಾ ಹೊಡೆಯಲು ಜಾಗ ಹುಡುಕುತ್ತಾ ಹೋಗಿದ್ದಾರೆ. ಅಬಕಾರಿ ಇಲಾಖೆ ಕಚೇರಿಗೆ ಬಂದು ಬೆಂಕಿಪೊಟ್ಟಣ ಕೇಳಿದಾಗ ಸರ್ಕಾರಿ ಅಧಿಕಾರಿಗಳು ಎಂದು ತಿಳಿಯುತ್ತಿದ್ದಂತೆ ಓಡಿ ಹೋಗಲು ಯತ್ನಿಸಿದ್ದಾರೆ. ಆದರೆ ಎಲ್ಲರನ್ನೂ ಹಿಡಿಯುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ವಿದ್ಯಾರ್ಥಿಗಳನ್ನು ವಿಚಾರಣೆಗೊಳಪಡಿಸಿದ್ದು, ಹೆತ್ತವರಿಗೆ ನೋಟಿಸ್ ನೀಡಲಾಗಿದೆ. ಅಲ್ಲದೇ ಪ್ರಕರಣ ದಾಖಲಿಸಿಕೊಂಡು ಶಾಲೆಗೆ ವಾಪಸ್ ಕಳುಹಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.


Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top