advertise here

Search

ಕೋವಿಡ್ ಅಕ್ರಮ ತನಿಖೆಗೆ ಸಂಪುಟ ಉಪ ಸಮಿತಿ ರಚನೆಗೆ ಸಚಿವ ಸಂಪುಟ ತೀರ್ಮಾನ


ಕೋವಿಡ್ ಸಮಯದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸಲು ಸಂಪುಟ ಉಪ ಸಮಿತಿ ರಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇದರಿಂದ ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಗೆ ಸಂಕಷ್ಟ ಶುರುವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ವೈರಸ್ ಅಬ್ಬರದ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮಗಳ ಕುರಿತು ತನಿಖೆಯನ್ನು ಸಂಪುಟ ಉಪ ಸಮಿತಿಗೆ ವಹಿಸಲು ತೀರ್ಮಾನಿಸಲಾಯಿತು.

ಕೋವಿಡ್ ಕಾಲದಲ್ಲಿ ಪಿಪಿಟಿ ಕಿಟ್, ಎಸಿ, ಮಾಸ್ಕ್ ಸೇರಿದಂತೆ ಹಲವು ಅಕ್ರಮಗಳು ನಡೆದಿದ್ದು, 7 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ಕೂಡ ವರದಿ ನೀಡಿದ್ದು, ವರದಿ ಆಧಾರದ ಮೇಲೆ ತನಿಖೆಗೆ ಆದೇಶಿಲಾಗುವುದು ಎಂದು ಸಂಪುಟ ಸಭೆಯ ವಿವರವನ್ನು ಸಚಿವ ಎಚ್.ಕೆ. ಪಾಟೀಲ್ ನೀಡಿದರು.

ALSO READ :  ರಾಜ್ಯೋತ್ಸವದ ಹೊಸ್ತಿಲಲ್ಲೇ ಕನ್ನಡ ಸಾಹಿತ್ಯ ಪರಿಷತ್ ಗೆ ಮರ್ಮಾಘಾತ..! ಪರಿಷತ್ ನಿಂದ ಹೊರಬಿದ್ದ ಕನ್ನಡದ ಕಟ್ಟಾಳು ಜೆ.ಎಂ ರಾಜಶೇಖರ್..

ಬಿಜೆಪಿ ಆಡಳಿತದಲ್ಲಿ ನಡೆದ ಕೋವಿಡ್ ಭ್ರಷ್ಟಾಚಾರದ ಕುರಿತು ಪೊಲೀಸರು ತನಿಖೆ ನಡೆಸಲಿದ್ದು, ಅಗತ್ಯ ಬಿದ್ದರೆ ಎಸ್ ಐಟಿಗೆ ವಹಿಸಲಾಗುವುದು. ಭ್ರಷ್ಟಾಚಾರದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆಯಿಂದ ಹೊರಗೆ ಬರಲಿದೆ ಎಂದು ಅವರು ಹೇಳಿದರು.


Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top