advertise here

Search

ನೌಕಾಪಡೆ ಬಲವರ್ಧನೆಗೆ 80,000 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಅಸ್ತು


2 ಪರಮಾಣು ಸಾಮರ್ಥ್ಯದ ಸಬ್ ಮೇರಿನ್ ನಿರ್ಮಾಣ ಹಾಗೂ 31 ಪ್ರೀಡಿಯೇಟರ್ ಡ್ರೋಣ್ ಗಳ ಖರೀದಿಗೆ 80 ಸಾವಿರ ಕೋಟಿ ರೂ. ವಿನಿಯೋಗಿಸಲು ಕೇಂದ್ರ ರಕ್ಷಣಾ ಸಮಿತಿ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರತದ ನೌಕಾಪಡೆ ಬಲವರ್ಧನೆಗೆ ದೊಡ್ಡ ಮೊತ್ತವನ್ನು ವಿನಿಯೋಗಿಸಲು ತೀರ್ಮಾನಿಸಲಾಯಿತು. ಇದರಿಂದ ಭಾರತದ ಬಳಿ ಸಬ್ ಮೇರಿನ್ ಗಳ ಸಂಖ್ಯೆ 5ಕ್ಕೆ ಏರಿಕೆಯಾಗಲಿದೆ.

ಸಮುದ್ರದಲ್ಲಿ ಭಾರತ ಗಡಿ ರಕ್ಷಣೆಗೆ ಒತ್ತು ನೀಡಲು ನಿರ್ಧರಿಸಲಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನದ ಪರಮಾಣು ಸಾಮರ್ಥ್ಯದ ಎರಡು ಜಲಾಂತರ್ಗಾಮಿಗಳನ್ನು ನಿರ್ಮಿಸಲು ಕೇಂದ್ರ ರಕ್ಷಣಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.

ALSO READ :  POLITICAL EXCLUSIVE.."ಡಿ.ಕೆ" ಗೆ "ಠಕ್ಕರ್" ಕೊಡಲು "ಸತೀಶ್ ಜಾರಕಿಹೊಳಿ" ಹೆಸ್ರು "ತೇಲಿ"ಬಿಟ್ಟವರು "ಇವರೇ"ನಾ..? ಏಕೆ..?

ವಿಶಾಖಪಟ್ಟಣದಲ್ಲಿ ಎರಡು ಸಬ್ ಮೇರಿನ್ ಗಳನ್ನು 45 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಸಬ್ ಮೇರಿನ್ ನಿರ್ಮಾಣದ ಗುತ್ತಿಗೆಯನ್ನು ಲಾರ್ಸೆನ್ ಮತ್ತು ಟರ್ಬೊ ಅಂತಹ ಕಂಪನಿಗಳಿಗೆ ಗುತ್ತಿಗೆ ನೀಡಲು ನಿರ್ಧರಿಸಲಾಗಿದೆ.

ಭಾರತದ ಸಬ್ ಮೇರಿನ್ ನಿರ್ಮಾಣದ ಯೋಜನೆ ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದು, ಯುದ್ಧದ ಕಾರ್ಮೊಡ ಇದ್ದು, ಸಾಗರದಲ್ಲಿ ದಾಳಿ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 2 ಸಬ್ ಮೇರಿನ್ ತುರ್ತು ನಿರ್ಮಾಣಕ್ಕೆ ತೀರ್ಮಾನಿಸಲಾಗಿದ್ದು, ಇದೇ ರೀತಿ 6 ಸಬ್ ಮೇರಿನ್ ಅಗತ್ಯವಿದೆ ಎಂದು ಹೇಳಲಾಗಿದೆ.


Political News

ನೆಹರೂ ಬದುಕಿದ್ದರೆ ಕಾನ್ಶಿರಾಮ್ ಅವರನ್ನೇ ಸಿಎಂ ಮಾಡುತ್ತಿದ್ದರು: ರಾಹುಲ್ ಗಾಂಧಿ 

ನನ್ನ ದೇಹದಲ್ಲಿ ಪ್ರಾಣವಿರುವವರೆಗೂ ಜನರ ಸೇವೆ ಮಾಡುತ್ತೇನೆ : ಸಿದ್ದರಾಮಯ್ಯ

ಅಡುಗೆ ಅನಿಲ ಬಿಕ್ಕಟ್ಟು: ಬಿಜೆಪಿ ಸಂಸದರ ಮೌನ ಖಂಡಿಸಿ, ಸಂಸತ್ತಿನಲ್ಲಿ ಧ್ವನಿ ಎತ್ತಲು ಡಿಕೆಶಿ ಆಗ್ರಹ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ‘ಗ್ರೀನ್ ಸಿಗ್ನಲ್’ ಕೊಟ್ಟ ಇರಾನ್!

ಮಾರ್ಚ್ ಅಂತ್ಯಕ್ಕೆ ಕರ್ನಾಟಕದ ಗದ್ದುಗೆ ಬದಲಾವಣೆ ಪಕ್ಕಾ?! ಡಿಕೆಶಿಗೆ ಸಿಎಂ ಪಟ್ಟ ಕಟ್ಟಲು ಸಜ್ಜಾದ ಹೈಕಮಾಂಡ್!

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಐತಿಹಾಸಿಕ ಪಯಣಕ್ಕೆ ಸಿಎಂ ಅಭಿನಂದನೆ

ಸಂವಿಧಾನ ರಕ್ಷಣೆಗೆ ಸ್ಪೀಕರ್ ಪೀಠಕ್ಕೆ ಸವಾಲು: ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ

ವಾಣಿಜ್ಯ ಎಲ್‌ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Scroll to Top