advertise here

Search

ನೌಕಾಪಡೆ ಬಲವರ್ಧನೆಗೆ 80,000 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಅಸ್ತು


2 ಪರಮಾಣು ಸಾಮರ್ಥ್ಯದ ಸಬ್ ಮೇರಿನ್ ನಿರ್ಮಾಣ ಹಾಗೂ 31 ಪ್ರೀಡಿಯೇಟರ್ ಡ್ರೋಣ್ ಗಳ ಖರೀದಿಗೆ 80 ಸಾವಿರ ಕೋಟಿ ರೂ. ವಿನಿಯೋಗಿಸಲು ಕೇಂದ್ರ ರಕ್ಷಣಾ ಸಮಿತಿ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರತದ ನೌಕಾಪಡೆ ಬಲವರ್ಧನೆಗೆ ದೊಡ್ಡ ಮೊತ್ತವನ್ನು ವಿನಿಯೋಗಿಸಲು ತೀರ್ಮಾನಿಸಲಾಯಿತು. ಇದರಿಂದ ಭಾರತದ ಬಳಿ ಸಬ್ ಮೇರಿನ್ ಗಳ ಸಂಖ್ಯೆ 5ಕ್ಕೆ ಏರಿಕೆಯಾಗಲಿದೆ.

ಸಮುದ್ರದಲ್ಲಿ ಭಾರತ ಗಡಿ ರಕ್ಷಣೆಗೆ ಒತ್ತು ನೀಡಲು ನಿರ್ಧರಿಸಲಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನದ ಪರಮಾಣು ಸಾಮರ್ಥ್ಯದ ಎರಡು ಜಲಾಂತರ್ಗಾಮಿಗಳನ್ನು ನಿರ್ಮಿಸಲು ಕೇಂದ್ರ ರಕ್ಷಣಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.

ALSO READ :  “ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

ವಿಶಾಖಪಟ್ಟಣದಲ್ಲಿ ಎರಡು ಸಬ್ ಮೇರಿನ್ ಗಳನ್ನು 45 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಸಬ್ ಮೇರಿನ್ ನಿರ್ಮಾಣದ ಗುತ್ತಿಗೆಯನ್ನು ಲಾರ್ಸೆನ್ ಮತ್ತು ಟರ್ಬೊ ಅಂತಹ ಕಂಪನಿಗಳಿಗೆ ಗುತ್ತಿಗೆ ನೀಡಲು ನಿರ್ಧರಿಸಲಾಗಿದೆ.

ಭಾರತದ ಸಬ್ ಮೇರಿನ್ ನಿರ್ಮಾಣದ ಯೋಜನೆ ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದು, ಯುದ್ಧದ ಕಾರ್ಮೊಡ ಇದ್ದು, ಸಾಗರದಲ್ಲಿ ದಾಳಿ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 2 ಸಬ್ ಮೇರಿನ್ ತುರ್ತು ನಿರ್ಮಾಣಕ್ಕೆ ತೀರ್ಮಾನಿಸಲಾಗಿದ್ದು, ಇದೇ ರೀತಿ 6 ಸಬ್ ಮೇರಿನ್ ಅಗತ್ಯವಿದೆ ಎಂದು ಹೇಳಲಾಗಿದೆ.


Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top