advertise here

Search

ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ: ಹೊಣೆ ಹೊತ್ತ ಬಿಶ್ನೋಯಿ ಗ್ಯಾಂಗ್


ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಬಣದ ಮುಖಂಡನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಬಿಶ್ನೋಯಿ ಗ್ಯಾಂಗ್ ಹೊಣೆ ಹೊತ್ತುಕೊಂಡಿದೆ.

ಬಾಂದ್ರಾ ಪೂರ್ವದ ಶಾಸಕರಾಗಿದ್ದ ಬಾಬಾ ಸಿದ್ದಿಕಿ ಪುತ್ರದ ಕಚೇರಿಗೆ ಭೇಟಿ ನೀಡಿದ ವೇಳೆ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.

ಪುತ್ರ ಜೀಹಾನ್ ಕಚೇರಿಯಲ್ಲಿ ಶನಿವಾರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದುಷ್ಕರ್ಮಿಗಳು ಹಾರಿಸಿದ ಮೂರು ಗುಂಡುಗಳ ಪೈಕಿ ಒಂದು ಗುಂಡು ಎದೆಯ ಭಾಗಕ್ಕೆ ಬಡಿದಿದ್ದು, ರಕ್ತಸ್ರಾವಕ್ಕೆ ಒಳಗಾದ ಅವರನ್ನು ಕೂಡಲೇ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಗೆ ದಾಖಲಿಸಿದ ಕೆಲವೇ ನಿಮಿಷಗಳಲ್ಲಿ ಮೃತಪಟ್ಟಿದ್ದಾರೆ.

ALSO READ :  "ರಿಪಬ್ಲಿಕ್‌ ಕನ್ನಡ"ದಿಂದ "ಶೋಭಾ"  ಔಟ್..!‌ ‌ ಮಾದ್ಯಮ ಲೋಕಕ್ಕೆ "ಬಿಗ್‌ ಶಾಕ್"..!?‌ ಮುಂದ್ಯಾರು.."ಅಜಿತ್‌ ಹನುಮಕ್ಕನವರ್‌ ಗೆ ಗಾಳ..!

ಬಂಧಿತರ ಪೈಕಿ ಒಬ್ಬಾತ ಉತ್ತರ ಪ್ರದೇಶ ಮತ್ತೊಬ್ಬ ಹರಿಯಾಣ ಮೂಲದವ ಎಂದು ತಿಳಿದು ಬಂದಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಕರಣದ ಕುರಿತು ಪೊಲೀಸರಿಂದ ಮಾಹಿತಿ ಕೇಳಿದ್ದಾರೆ. ಬಂಧಿತರು ನಾವು ಅಪ್ರಾಪ್ತರು ಎಂದು ವಾದಿಸಿದ್ದಾರೆ. ಆದರೆ ನ್ಯಾಯಾಲಯ ಮೂಳೆ ಪರೀಕ್ಷೆಗೆ ಸೂಚಿಸಿದೆ.

ಕಾಂಗ್ರೆಸ್ ನಲ್ಲಿ 48 ವರ್ಷಗಳಿಂದ ಗುರುತಿಸಿಕೊಂಡಿದ್ದರು. ಬಾಬಾ ಸಿದ್ದಿಕಿ ಪೂರ್ವ ಬಾಂದ್ರಾದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕಳೆದ ಫೆಬ್ರವರಿಯಲ್ಲಿ ಕಾಂಗ್ರೆಸ್ ತೊರೆದು ಅಜಿತ್ ಪವಾರ್ ಬಣಕ್ಕೆ ಸೇರ್ಪಡೆಯಾಗಿದ್ದರು. ಆಗಸ್ಟ್ ನಲ್ಲಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು.


Political News

ವಿಧಾನಸೌಧಕ್ಕೆ ನಿರ್ಬಂಧ ಹೇರಿದ್ರೂ ಮಾದ್ಯಮಗಳೇಕೆ ಮೌನ? ನಿದ್ರೆಯಲ್ಲಿದೆಯಾ ಸಂಘ-ಕ್ಲಬ್..

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ: 5 ಲಕ್ಷ ಲಂಚ ಪಡೆಯುವಾಗ ಅರೆಸ್ಟ್!

ಟ್ರಂಪ್‌ ಆರ್ಥಿಕ ಸಂಘರ್ಷ: ಸುಪ್ರೀಂ ಕೋರ್ಟ್ ತಡೆ ನಡುವೆಯೂ ಶೇ.10ರಷ್ಟು ಆಮದು ಸುಂಕ ಜಾರಿ!

“ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ” ಟ್ರಂಪ್ ಹೇಳಿಕೆ

ಎಐ ಶೃಂಗಸಭೆಯಲ್ಲಿ ಹೈಡ್ರಾಮಾ: ಅರೆಬೆತ್ತಲೆ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು!

ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್!

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

Scroll to Top